Advertisement
Exclusive - Mirror Hunt

#Arecanut | ಅಡಿಕೆ ಟಿಶ್ಯೂ ಕಲ್ಚರ್‌ | ಅಡಿಕೆ ಹಳದಿ ಎಲೆ ರೋಗ ನಿರೋಧಕ ತಳಿ ಬೆಳವಣಿಗೆಯ ಹಂತದಲ್ಲಿ | ಸಿಪಿಸಿಆರ್‌ಐ ವಿಜ್ಞಾನಿಗಳ ಸತತ ಪ್ರಯತ್ನ ಮುಂದುವರಿಕೆ |

Share

ವಿವಿಧ ಬಗೆಯ ಅಡಿಕೆ ಟಿಶ್ಯೂ ಕಲ್ಚರ್‌ ತಳಿ ಅಭಿವೃದ್ಧಿಯಲ್ಲಿ ಸಿಪಿಸಿಆರ್‌ಐ ವಿಜ್ಞಾನಿಗಳ ತಂಡ ಯಶಸ್ಸಿನ ಹಾದಿಯಲ್ಲಿದ್ದಾರೆ. ಅಡಿಕೆ ಹಳದಿ ಎಲೆ ರೋಗ ನಿರೋಧಕ ಟಿಶ್ಯೂ ಕಲ್ಚರ್‌ ತಳಿಯು ಅಭಿವೃದ್ಧಿಯ ಹಂತದಲ್ಲಿದ್ದು, ಪ್ರಯೋಗಾಲಯದಲ್ಲಿ ಬೆಳೆಯುತ್ತಿದೆ. ಇನ್ನಷ್ಟು ಅಭಿವೃದ್ಧಿಯ ಕಡೆಗೆ ವಿಜ್ಞಾನಿಗಳು ಸತತ ಪ್ರಯತ್ನ ಮುಂದುವರಿಸಿದ್ದಾರೆ.

ಟಿಶ್ಯೂ ಕಲ್ಚರ್‌ ಗಿಡ
ಗಿಡ ಬೆಳೆಸುವ ಹಂತ

ಅಡಿಕೆ ಹಳದಿ ಎಲೆ ರೋಗ ನಿರೋಧಕ ತಳಿಯ ಅಭಿವೃದ್ಧಿಯ ವಿಧಾನದ ಬಗ್ಗೆ ಕಳೆದ ಎರಡು ವರ್ಷಗಳಿಂದ ಸಿಪಿಸಿಆರ್‌ಐ ವಿಜ್ಞಾನಿಗಳ ತಂಡ ಪ್ರಯತ್ನ ಮಾಡಿತ್ತು. ಅದರಲ್ಲಿ ಟಿಶ್ಯೂ ಕಲ್ಚರ್‌ ಮಾದರಿಯನ್ನು ಅಭಿವೃದ್ಧಿ ಪಡಿಸುವ ಬಗ್ಗೆ ಕೃಷಿಕರಿಗೆ ವಿಜ್ಞಾನಿಗಳು ಮಾಹಿತಿ ನೀಡಿದ್ದರು.ಇದಕ್ಕಾಗಿ ಅಡಿಕೆ ಹಳದಿ ಎಲೆ ರೋಗ ಪೀಡಿತ ಪ್ರದೇಶದ ಹಾಟ್‌ಸ್ಫಾಟ್‌ ಪ್ರದೇಶಗಳಾದ ಸಂಪಾಜೆ, ಅರಂತೋಡು, ಚೆಂಬು ಹಾಗೂ ಶೃಂಗೇರಿಗಳಿಂದ ಅಡಿಕೆಯ ಎಳೆ ಹಿಂಗಾರವನ್ನು ಸಂಗ್ರಹಿಸಿದ್ದರು. ಇದನ್ನು ಟಿಶ್ಯೂ ಕಲ್ಚರ್‌ ವಿಧಾನದಲ್ಲಿ ಅಭಿವೃದ್ಧಿಪಡಿಸುತ್ತಿದ್ದರು. ಈ ಬೆಳವಣಿಗೆಗಳನ್ನು ವೀಕ್ಷಿಸಲು ಕೃಷಿಕರ ತಂಡ ಸಿಪಿಸಿಆರ್‌ಐ ಕೇಂದ್ರಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭ  ವಿಜ್ಞಾನಿಗಳು ಟಿಶ್ಯೂ ಕಲ್ಚರ್‌ ಗಿಡಗಳ ಬೆಳವಣಿಗೆಯ ಹಂತಗಳ ಬಗ್ಗೆ ಮಾಹಿತಿ ನೀಡಿದರು

ಸಿಪಿಸಿಆರ್‌ ಐ ನಿರ್ದೇಶಕರು ಹಾಗೂ ವಿಜ್ಞಾನಿಗಳ ಜೊತೆ ಕೃಷಿಕರ ತಂಡ

ಟಿಶ್ಯೂ ಕಲ್ಚರ್‌ ಮಾದರಿಯಲ್ಲಿ ಈ ಹಿಂದೆ ವಿವಿಧ ಕೃಷಿಯಲ್ಲಿ ಬಳಕೆ ಮಾಡಿದ್ದರೂ ಅಡಿಕೆ ಹಾಗೂ ತೆಂಗು ಗಿಡಗಳಲ್ಲಿ ಪರಿಣಾಮಕಾರಿಯಾಗಿ ಸಾಧ್ಯ ಆಗಿರಲಿಲ್ಲ. ಇದೀಗ ಸಿಪಿಸಿಆರ್‌ಐ ವಿಜ್ಞಾನಿಗಳು ಬಹು ನಿರೀಕ್ಷೆಯಲ್ಲಿದ್ದು, ಯಶಸ್ಸಿನ ನಿರೀಕ್ಷೆಯಲ್ಲಿದ್ದಾರೆ. ಆದರೆ ತೀರಾ ವಿಳಂಬವಾದ ಹಾಗೂ ತೀರಾ ಎಚ್ಚರಿಕೆಯ ಕಾರ್ಯ ಇದಾಗಿದೆ. ಈ ಕಾರಣದಿಂದ ಟಿಶ್ಯೂ ಕಲ್ಚರ್‌ ಗಿಡಗಳ ಅಭಿವೃದ್ಧಿಗೆ ಅಡಿಕೆಯಲ್ಲಿ ತೀರಾ ಕಷ್ಟಕರವಾಗಿದೆ. ಹಾಗಿದ್ದರೂ ವಿಜ್ಞಾನಿಗಳ ತಂಡ ಅತೀ ಎಚ್ಚರಿಕೆಯಿಂದ ಈಗ ಕೆಲಸ ಮಾಡುತ್ತಿದೆ.

ಟಿಶ್ಯೂ ಕಲ್ಚರ್‌ ಗಿಡಗಳ ಅಭಿವೃದ್ಧಿಯ ಹಂತ
ಟಿಶ್ಯೂ ಕಲ್ಚರ್‌ ಗಿಡಗಳು ಪ್ರಯೋಗಾಲಯದಲ್ಲಿ

ಕಳೆದ ಎರಡು ವರ್ಷಗಳಿಂದ ಹಳದಿ ಎಲೆ ರೋಗ ಪೀಡಿತ ಪ್ರದೇಶ ಹಾಟ್‌ಸ್ಫಾಟ್‌ ಎಂದು ಗುರುತಿಸಿಕೊಂಡಿರುವ ಪ್ರದೇಶಗಳಲ್ಲಿ ಇನ್ನೂ ಹಳದಿ ಎಲೆ ರೋಗ ಬಾಧಿತವಾಗದ ಅಡಿಕೆ ಮರದಿಂದ ಹಿಂಗಾರ ಸಂಗ್ರಹಿಸಿ ಅದರಿಂದ ಗಿಡ ಮಾಡುವ ಪ್ರಯತ್ನ ಮಾಡಿದ್ದಾರೆ. ಈಗಾಗಲೇ ಗಿಡದ ಒಂದು ಹಂತ ಸಿದ್ಧವಾಗುತ್ತಿದೆ. ಇನ್ನಷ್ಟೇ ಬೇರು ಹಾಗೂ ಎಲೆಗಳ ಹಂತಕ್ಕೆ ಬರಬೇಕಿದೆ. ಪ್ರತೀ ಹಂತವೂ ಎಚ್ಚರಿಕೆ ಬೇಕಾಗಿರುವುದರಿಂದ ನಿಧಾನ ಪ್ರಕ್ರಿಯೆ ಇದಾಗಿದೆ. ಎಲ್ಲಾ ಮರದ ಹಿಂಗಾರವೂ ಒಂದೇ ವೇಗದಲ್ಲಿ ಟಿಶ್ಯೂ ಕಲ್ಚರ್‌ ಮಾದರಿಯಲ್ಲಿ ಬೆಳೆಯಲು ಸಾಧ್ಯವಿಲ್ಲದ ಕಾರಣ, ಸ್ಯಾಂಪಲ್‌ಗಳು ಸಾಕಷ್ಟು ಬೇಕಾಗುತ್ತದೆ. ಇನ್ನೂ ಎರಡು ವರ್ಷದಲ್ಲಿ ಟಿಶ್ಯೂ ಕಲ್ಚರ್‌ ಗಿಡ ತಯಾರಾದರೂ ಅದರ ಬೆಳವಣಿಗೆ ಹಾಗೂ ಅಧ್ಯಯನದ ಬಳಿಕವಷ್ಟೇ ಕೃಷಿಕರಿಗೆ ಗಿಡ ಲಭ್ಯವಾಗಲು ಸಾಧ್ಯವಿದೆ. ಆದರೆ ಇದುವರೆಗಿನ ಬೆಳವಣಿಗೆ ಹಾಗೂ ಅಧ್ಯಯನದ ಪ್ರಕಾರ ಧನಾತ್ಮಕ ನಿರೀಕ್ಷೆ ಇದೆ.

ಕಾಸರಗೋಡು ಸಿಪಿಸಿಆರ್‌ಐ ನಿರ್ದೇಶಕ ಡಾ.ಬಾಲಚಂದ್ರ ಹೆಬ್ಬಾರ್‌, ಹಿರಿಯ ವಿಜ್ಞಾನಿಗಳಾದ ಡಾ.ವಿನಾಯಕ ಹೆಗ್ಡೆ, ಡಾ.ರವಿ ಭಟ್‌, ಪ್ರಯೋಗಾಲಯದ ತಾಂತ್ರಿಕ ವಿಜ್ಞಾನಿ ಮುರಳಿಕೃಷ್ಣ ಹಾಗೂ ತಂಡ ಟಿಶ್ಯೂ ಕಲ್ಚರ್‌ ತಳಿಯ ಬಗ್ಗೆ ಕೃಷಿಕರ ತಂಡಕ್ಕೆ ಮಾಹಿತಿ ನೀಡಿದರು.

 

ಕೃಷಿಕರ ತಂಡದಲ್ಲಿ ಸುಳ್ಯ ಸಹಕಾರಿ ಯೂನಿಯನ್‌ ಅಧ್ಯಕ್ಷ ರಮೇಶ್‌ ದೇಲಂಪಾಡಿ, ಅರಂತೋಡು ಸಹಕಾರಿ ಸಂಘದ ಅಧ್ಯಕ್ಷ  ಸಂತೋಷ್‌ ಕುತ್ತಮೊಟ್ಟೆ, ಅಖಿಲಭಾರತ ಅಡಿಕೆ ಬೆಳೆಗಾರರ ಸಂಘದ ಕಾರ್ಯದರ್ಶಿ ಮಹೇಶ್‌ ಪುಚ್ಚಪ್ಪಾಡಿ, ಸಂಪಾಜೆ-ಚೆಂಬು ಕೃಷಿಕ ಭವ್ಯಾನಂದ ಕುಯಿಂತೋಡಿ ಇದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 30.05.2026 | ಕರಾವಳಿಯಲ್ಲಿ ತುಂತುರು ಮಳೆ, ಜೂ.7ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ| ಆರಂಭ ದುರ್ಬಲವಾಗುವ ಲಕ್ಷಣ

31.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ವಿವಿಧ…

3 hours ago

ಅಡಿಕೆ ಹಳದಿ ಎಲೆ ರೋಗಕ್ಕೆ ಶಾಶ್ವತ ಪರಿಹಾರದ ಭರವಸೆ..! ಟಿಶ್ಯೂ ಕಲ್ಚರ್‌ನಲ್ಲಿ ಮೊದಲ ಹಂತದ ಅಡಿಕೆ ಗಿಡಗಳು ನಾಟಿಗೆ ಸಿದ್ಧ

ಅಡಿಕೆ ಹಳದಿ ಎಲೆ ರೋಗ ನಿರೋಧಕ ಟಿಶ್ಯೂ ಕಲ್ಚರ್‌ ತಳಿ ಅಭಿವೃದ್ಧಿಯಲ್ಲಿ ಸಿಪಿಸಿಆರ್‌ಐ…

12 hours ago

ಈ ಬಾರಿಯ ಮುಂಗಾರು ದುರ್ಬಲವೇ..? ಐಎಂಡಿ ಎರಡನೇ ಮುನ್ಸೂಚನೆ ಬಿಡುಗಡೆ – 11 ವರ್ಷಗಳಲ್ಲೇ ಅತೀ ದುರ್ಬಲ ಮುಂಗಾರು ಸಾಧ್ಯತೆ..?

ಐಎಂಡಿ ಬಿಡುಗಡೆ ಮಾಡಿದ ಎರಡನೇ ಮುಂಗಾರು ಮುನ್ಸೂಚನೆಯಲ್ಲಿ ದೇಶದಲ್ಲಿ ಕೇವಲ 90% ಮಳೆಯ…

21 hours ago

ಹವಾಮಾನ ವರದಿ | 29.05.2026 | ಕರ್ನಾಟಕಕ್ಕೆ ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ | ಜೂನ್ 7 ಬಳಿಕ ಕರಾವಳಿಯಲ್ಲಿ ಭಾರೀ ಮಳೆಯ ಸೂಚನೆ!

ಕರ್ನಾಟಕದಲ್ಲಿ ಮುಂಗಾರು ಪ್ರವೇಶದ ನಿರೀಕ್ಷೆ ಹೆಚ್ಚಾಗುತ್ತಿದ್ದು, ಸದ್ಯ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು…

1 day ago

ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲೆ – ವಿಜ್ಞಾನಿಗಳ ಹೊಸ ಅಧ್ಯಯನದಲ್ಲಿ ಬಹಿರಂಗವಾದ ಅಚ್ಚರಿಯ ಜೀವ ವೈವಿಧ್ಯ

ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲಾಗಿದ್ದು, ZSI ವಿಜ್ಞಾನಿಗಳು ದೇಶದ ಮೊದಲ ದೊಡ್ಡ…

1 day ago

ಜೈಸಲ್ಮೇರ್‌ ಘಟನೆ ಬಳಿಕ ಎಚ್ಚೆತ್ತ ಆಡಳಿತ | ಕೊಳೆತ ಸ್ಥಿತಿಯಲ್ಲಿದ್ದ ನೂರಾರು ಹಸುಗಳನ್ನು ಹೂಳುವ ಕಾರ್ಯ ಆರಂಭ

ಜೈಸಲ್ಮೇರ್‌ನಲ್ಲಿ ಬಯಲಿನಲ್ಲಿ ಪತ್ತೆಯಾಗಿದ್ದ ನೂರಾರು ಹಸುಗಳ ಶವಗಳ ಘಟನೆ ಬಳಿಕ ನಗರಸಭೆ ಶವಗಳನ್ನು…

1 day ago