Advertisement
Exclusive - Mirror Hunt

#Arecanut | ಅಡಿಕೆ ಟಿಶ್ಯೂ ಕಲ್ಚರ್‌ | ಅಡಿಕೆ ಹಳದಿ ಎಲೆ ರೋಗ ನಿರೋಧಕ ತಳಿ ಬೆಳವಣಿಗೆಯ ಹಂತದಲ್ಲಿ | ಸಿಪಿಸಿಆರ್‌ಐ ವಿಜ್ಞಾನಿಗಳ ಸತತ ಪ್ರಯತ್ನ ಮುಂದುವರಿಕೆ |

Share

ವಿವಿಧ ಬಗೆಯ ಅಡಿಕೆ ಟಿಶ್ಯೂ ಕಲ್ಚರ್‌ ತಳಿ ಅಭಿವೃದ್ಧಿಯಲ್ಲಿ ಸಿಪಿಸಿಆರ್‌ಐ ವಿಜ್ಞಾನಿಗಳ ತಂಡ ಯಶಸ್ಸಿನ ಹಾದಿಯಲ್ಲಿದ್ದಾರೆ. ಅಡಿಕೆ ಹಳದಿ ಎಲೆ ರೋಗ ನಿರೋಧಕ ಟಿಶ್ಯೂ ಕಲ್ಚರ್‌ ತಳಿಯು ಅಭಿವೃದ್ಧಿಯ ಹಂತದಲ್ಲಿದ್ದು, ಪ್ರಯೋಗಾಲಯದಲ್ಲಿ ಬೆಳೆಯುತ್ತಿದೆ. ಇನ್ನಷ್ಟು ಅಭಿವೃದ್ಧಿಯ ಕಡೆಗೆ ವಿಜ್ಞಾನಿಗಳು ಸತತ ಪ್ರಯತ್ನ ಮುಂದುವರಿಸಿದ್ದಾರೆ.

ಟಿಶ್ಯೂ ಕಲ್ಚರ್‌ ಗಿಡ
ಗಿಡ ಬೆಳೆಸುವ ಹಂತ

ಅಡಿಕೆ ಹಳದಿ ಎಲೆ ರೋಗ ನಿರೋಧಕ ತಳಿಯ ಅಭಿವೃದ್ಧಿಯ ವಿಧಾನದ ಬಗ್ಗೆ ಕಳೆದ ಎರಡು ವರ್ಷಗಳಿಂದ ಸಿಪಿಸಿಆರ್‌ಐ ವಿಜ್ಞಾನಿಗಳ ತಂಡ ಪ್ರಯತ್ನ ಮಾಡಿತ್ತು. ಅದರಲ್ಲಿ ಟಿಶ್ಯೂ ಕಲ್ಚರ್‌ ಮಾದರಿಯನ್ನು ಅಭಿವೃದ್ಧಿ ಪಡಿಸುವ ಬಗ್ಗೆ ಕೃಷಿಕರಿಗೆ ವಿಜ್ಞಾನಿಗಳು ಮಾಹಿತಿ ನೀಡಿದ್ದರು.ಇದಕ್ಕಾಗಿ ಅಡಿಕೆ ಹಳದಿ ಎಲೆ ರೋಗ ಪೀಡಿತ ಪ್ರದೇಶದ ಹಾಟ್‌ಸ್ಫಾಟ್‌ ಪ್ರದೇಶಗಳಾದ ಸಂಪಾಜೆ, ಅರಂತೋಡು, ಚೆಂಬು ಹಾಗೂ ಶೃಂಗೇರಿಗಳಿಂದ ಅಡಿಕೆಯ ಎಳೆ ಹಿಂಗಾರವನ್ನು ಸಂಗ್ರಹಿಸಿದ್ದರು. ಇದನ್ನು ಟಿಶ್ಯೂ ಕಲ್ಚರ್‌ ವಿಧಾನದಲ್ಲಿ ಅಭಿವೃದ್ಧಿಪಡಿಸುತ್ತಿದ್ದರು. ಈ ಬೆಳವಣಿಗೆಗಳನ್ನು ವೀಕ್ಷಿಸಲು ಕೃಷಿಕರ ತಂಡ ಸಿಪಿಸಿಆರ್‌ಐ ಕೇಂದ್ರಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭ  ವಿಜ್ಞಾನಿಗಳು ಟಿಶ್ಯೂ ಕಲ್ಚರ್‌ ಗಿಡಗಳ ಬೆಳವಣಿಗೆಯ ಹಂತಗಳ ಬಗ್ಗೆ ಮಾಹಿತಿ ನೀಡಿದರು

ಸಿಪಿಸಿಆರ್‌ ಐ ನಿರ್ದೇಶಕರು ಹಾಗೂ ವಿಜ್ಞಾನಿಗಳ ಜೊತೆ ಕೃಷಿಕರ ತಂಡ

ಟಿಶ್ಯೂ ಕಲ್ಚರ್‌ ಮಾದರಿಯಲ್ಲಿ ಈ ಹಿಂದೆ ವಿವಿಧ ಕೃಷಿಯಲ್ಲಿ ಬಳಕೆ ಮಾಡಿದ್ದರೂ ಅಡಿಕೆ ಹಾಗೂ ತೆಂಗು ಗಿಡಗಳಲ್ಲಿ ಪರಿಣಾಮಕಾರಿಯಾಗಿ ಸಾಧ್ಯ ಆಗಿರಲಿಲ್ಲ. ಇದೀಗ ಸಿಪಿಸಿಆರ್‌ಐ ವಿಜ್ಞಾನಿಗಳು ಬಹು ನಿರೀಕ್ಷೆಯಲ್ಲಿದ್ದು, ಯಶಸ್ಸಿನ ನಿರೀಕ್ಷೆಯಲ್ಲಿದ್ದಾರೆ. ಆದರೆ ತೀರಾ ವಿಳಂಬವಾದ ಹಾಗೂ ತೀರಾ ಎಚ್ಚರಿಕೆಯ ಕಾರ್ಯ ಇದಾಗಿದೆ. ಈ ಕಾರಣದಿಂದ ಟಿಶ್ಯೂ ಕಲ್ಚರ್‌ ಗಿಡಗಳ ಅಭಿವೃದ್ಧಿಗೆ ಅಡಿಕೆಯಲ್ಲಿ ತೀರಾ ಕಷ್ಟಕರವಾಗಿದೆ. ಹಾಗಿದ್ದರೂ ವಿಜ್ಞಾನಿಗಳ ತಂಡ ಅತೀ ಎಚ್ಚರಿಕೆಯಿಂದ ಈಗ ಕೆಲಸ ಮಾಡುತ್ತಿದೆ.

ಟಿಶ್ಯೂ ಕಲ್ಚರ್‌ ಗಿಡಗಳ ಅಭಿವೃದ್ಧಿಯ ಹಂತ
ಟಿಶ್ಯೂ ಕಲ್ಚರ್‌ ಗಿಡಗಳು ಪ್ರಯೋಗಾಲಯದಲ್ಲಿ

ಕಳೆದ ಎರಡು ವರ್ಷಗಳಿಂದ ಹಳದಿ ಎಲೆ ರೋಗ ಪೀಡಿತ ಪ್ರದೇಶ ಹಾಟ್‌ಸ್ಫಾಟ್‌ ಎಂದು ಗುರುತಿಸಿಕೊಂಡಿರುವ ಪ್ರದೇಶಗಳಲ್ಲಿ ಇನ್ನೂ ಹಳದಿ ಎಲೆ ರೋಗ ಬಾಧಿತವಾಗದ ಅಡಿಕೆ ಮರದಿಂದ ಹಿಂಗಾರ ಸಂಗ್ರಹಿಸಿ ಅದರಿಂದ ಗಿಡ ಮಾಡುವ ಪ್ರಯತ್ನ ಮಾಡಿದ್ದಾರೆ. ಈಗಾಗಲೇ ಗಿಡದ ಒಂದು ಹಂತ ಸಿದ್ಧವಾಗುತ್ತಿದೆ. ಇನ್ನಷ್ಟೇ ಬೇರು ಹಾಗೂ ಎಲೆಗಳ ಹಂತಕ್ಕೆ ಬರಬೇಕಿದೆ. ಪ್ರತೀ ಹಂತವೂ ಎಚ್ಚರಿಕೆ ಬೇಕಾಗಿರುವುದರಿಂದ ನಿಧಾನ ಪ್ರಕ್ರಿಯೆ ಇದಾಗಿದೆ. ಎಲ್ಲಾ ಮರದ ಹಿಂಗಾರವೂ ಒಂದೇ ವೇಗದಲ್ಲಿ ಟಿಶ್ಯೂ ಕಲ್ಚರ್‌ ಮಾದರಿಯಲ್ಲಿ ಬೆಳೆಯಲು ಸಾಧ್ಯವಿಲ್ಲದ ಕಾರಣ, ಸ್ಯಾಂಪಲ್‌ಗಳು ಸಾಕಷ್ಟು ಬೇಕಾಗುತ್ತದೆ. ಇನ್ನೂ ಎರಡು ವರ್ಷದಲ್ಲಿ ಟಿಶ್ಯೂ ಕಲ್ಚರ್‌ ಗಿಡ ತಯಾರಾದರೂ ಅದರ ಬೆಳವಣಿಗೆ ಹಾಗೂ ಅಧ್ಯಯನದ ಬಳಿಕವಷ್ಟೇ ಕೃಷಿಕರಿಗೆ ಗಿಡ ಲಭ್ಯವಾಗಲು ಸಾಧ್ಯವಿದೆ. ಆದರೆ ಇದುವರೆಗಿನ ಬೆಳವಣಿಗೆ ಹಾಗೂ ಅಧ್ಯಯನದ ಪ್ರಕಾರ ಧನಾತ್ಮಕ ನಿರೀಕ್ಷೆ ಇದೆ.

ಕಾಸರಗೋಡು ಸಿಪಿಸಿಆರ್‌ಐ ನಿರ್ದೇಶಕ ಡಾ.ಬಾಲಚಂದ್ರ ಹೆಬ್ಬಾರ್‌, ಹಿರಿಯ ವಿಜ್ಞಾನಿಗಳಾದ ಡಾ.ವಿನಾಯಕ ಹೆಗ್ಡೆ, ಡಾ.ರವಿ ಭಟ್‌, ಪ್ರಯೋಗಾಲಯದ ತಾಂತ್ರಿಕ ವಿಜ್ಞಾನಿ ಮುರಳಿಕೃಷ್ಣ ಹಾಗೂ ತಂಡ ಟಿಶ್ಯೂ ಕಲ್ಚರ್‌ ತಳಿಯ ಬಗ್ಗೆ ಕೃಷಿಕರ ತಂಡಕ್ಕೆ ಮಾಹಿತಿ ನೀಡಿದರು.

 

ಕೃಷಿಕರ ತಂಡದಲ್ಲಿ ಸುಳ್ಯ ಸಹಕಾರಿ ಯೂನಿಯನ್‌ ಅಧ್ಯಕ್ಷ ರಮೇಶ್‌ ದೇಲಂಪಾಡಿ, ಅರಂತೋಡು ಸಹಕಾರಿ ಸಂಘದ ಅಧ್ಯಕ್ಷ  ಸಂತೋಷ್‌ ಕುತ್ತಮೊಟ್ಟೆ, ಅಖಿಲಭಾರತ ಅಡಿಕೆ ಬೆಳೆಗಾರರ ಸಂಘದ ಕಾರ್ಯದರ್ಶಿ ಮಹೇಶ್‌ ಪುಚ್ಚಪ್ಪಾಡಿ, ಸಂಪಾಜೆ-ಚೆಂಬು ಕೃಷಿಕ ಭವ್ಯಾನಂದ ಕುಯಿಂತೋಡಿ ಇದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

5 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

13 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

18 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

2 days ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago