ಗ್ರಾಮೀಣ ಹಾಗೂ ನಗರ ಪ್ರದೇಶದ ಹೃದಯಭಾಗದಲ್ಲಿ ಕಟ್ಟೆಗಳು ಬಹಳ ಹಿಂದಿನಿಂದಲೂ ಸಾಮಾಜಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಆಚರಣೆಗಳನ್ನು ಸಂಯೋಜಿಸುವ ಸಮುದಾಯ ಜೀವನಕ್ಕೆ ಕೇಂದ್ರವಾಗಿದೆ. ಪ್ರಸ್ತುತ ಕಣ್ಮರೆಯಾಗುತ್ತಿರುವ ಮಂಗಳೂರಿನ ಕಟ್ಟೆಗಳನ್ನು ಪುನರುಜ್ಜೀವನಗೊಳಿಸುವ ಕಾರ್ಯವನ್ನು ಮಂಗಳೂರಿನ ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಕಲ್ಚರಲ್ ಹೆರಿಟೇಜ್ ಸಂಸ್ಥೆ ಮಾಡುತ್ತಿದೆ.
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250 ಕ್ಕೂ ಹೆಚ್ಚು ಕಟ್ಟೆಗಳನ್ನು ದಾಖಲಿಸುವ ಮತ್ತು ಸಂರಕ್ಷಿಸುವ ಮಹತ್ವಾಕಾಂಕ್ಷೆಯ ಪ್ರಯತ್ನವನ್ನು ಈ ಸಂಸ್ಥೆ ಮಾಡುತ್ತಿದೆ.
ಮಂಗಳೂರಿನ ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಕಲ್ಚರಲ್ ಹೆರಿಟೇಜ್ ಸಂಸ್ಥೆಯ ಸಂಚಾಲಕ ಸುಭಾಷ್ ಬಸು ಮಾತನಾಡಿ, ಕರಾವಳಿ ಪ್ರದೇಶದಲ್ಲಿ ಮರದ ಕಟ್ಟೆಗಳಗಳನ್ನು ಸಂರಕ್ಷಣೆ ಮಾಡಲಾಗುತ್ತಿದೆ. ಭೌಗೋಳಿಕವಾಗಿ, ಸಾಮಾಜಿಕ, ಧಾರ್ಮಿಕ, ಮತ್ತು ಪರಿಸರದ ಅಗತ್ಯತೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಮಂಗಳೂರಿನ ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಕಲ್ಚರಲ್ ಹೆರಿಟೇಜ್ ಸಂಸ್ಥೆಯ ಸದಸ್ಯ ರಾಜೇಂದ್ರ ಕೇದಗೆ, ಕಟ್ಟೆಗಳು ಸಾಂಪ್ರದಾಯಿಕವಾಗಿ ವಿಶ್ರಾಂತಿಯ ಮೂಲವಾಗಿವೆ. ನಮ್ಮ ಪರಂಪರೆಯಾದ ದೇವಸ್ಥಾನದ ಕಟ್ಟೆಗಳು, ಅಶ್ವತ್ಥ ಕಟ್ಟೆಗಳನ್ನು ಸಂರಕ್ಷಿಸಿ ಸಾರ್ವಜನಿಕರ ಉಪಯೋಗಕ್ಕೆ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದರು.
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…