ಗ್ರಾಮೀಣ ಹಾಗೂ ನಗರ ಪ್ರದೇಶದ ಹೃದಯಭಾಗದಲ್ಲಿ ಕಟ್ಟೆಗಳು ಬಹಳ ಹಿಂದಿನಿಂದಲೂ ಸಾಮಾಜಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಆಚರಣೆಗಳನ್ನು ಸಂಯೋಜಿಸುವ ಸಮುದಾಯ ಜೀವನಕ್ಕೆ ಕೇಂದ್ರವಾಗಿದೆ. ಪ್ರಸ್ತುತ ಕಣ್ಮರೆಯಾಗುತ್ತಿರುವ ಮಂಗಳೂರಿನ ಕಟ್ಟೆಗಳನ್ನು ಪುನರುಜ್ಜೀವನಗೊಳಿಸುವ ಕಾರ್ಯವನ್ನು ಮಂಗಳೂರಿನ ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಕಲ್ಚರಲ್ ಹೆರಿಟೇಜ್ ಸಂಸ್ಥೆ ಮಾಡುತ್ತಿದೆ.
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250 ಕ್ಕೂ ಹೆಚ್ಚು ಕಟ್ಟೆಗಳನ್ನು ದಾಖಲಿಸುವ ಮತ್ತು ಸಂರಕ್ಷಿಸುವ ಮಹತ್ವಾಕಾಂಕ್ಷೆಯ ಪ್ರಯತ್ನವನ್ನು ಈ ಸಂಸ್ಥೆ ಮಾಡುತ್ತಿದೆ.
ಮಂಗಳೂರಿನ ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಕಲ್ಚರಲ್ ಹೆರಿಟೇಜ್ ಸಂಸ್ಥೆಯ ಸಂಚಾಲಕ ಸುಭಾಷ್ ಬಸು ಮಾತನಾಡಿ, ಕರಾವಳಿ ಪ್ರದೇಶದಲ್ಲಿ ಮರದ ಕಟ್ಟೆಗಳಗಳನ್ನು ಸಂರಕ್ಷಣೆ ಮಾಡಲಾಗುತ್ತಿದೆ. ಭೌಗೋಳಿಕವಾಗಿ, ಸಾಮಾಜಿಕ, ಧಾರ್ಮಿಕ, ಮತ್ತು ಪರಿಸರದ ಅಗತ್ಯತೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಮಂಗಳೂರಿನ ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಕಲ್ಚರಲ್ ಹೆರಿಟೇಜ್ ಸಂಸ್ಥೆಯ ಸದಸ್ಯ ರಾಜೇಂದ್ರ ಕೇದಗೆ, ಕಟ್ಟೆಗಳು ಸಾಂಪ್ರದಾಯಿಕವಾಗಿ ವಿಶ್ರಾಂತಿಯ ಮೂಲವಾಗಿವೆ. ನಮ್ಮ ಪರಂಪರೆಯಾದ ದೇವಸ್ಥಾನದ ಕಟ್ಟೆಗಳು, ಅಶ್ವತ್ಥ ಕಟ್ಟೆಗಳನ್ನು ಸಂರಕ್ಷಿಸಿ ಸಾರ್ವಜನಿಕರ ಉಪಯೋಗಕ್ಕೆ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದರು.
ರಾಜ್ಯದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಜುಲೈ 5ರಿಂದ 9ರವರೆಗೆ ಒಂದು ಅಥವಾ ಎರಡು…
ರಾಜ್ಯದಲ್ಲಿ ಮುಂಗಾರು ಚಟುವಟಿಕೆ ಮುಂದುವರಿದಿದ್ದು, ಜು. 4ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ…
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲವು ದಿನಗಳು ಬಿಟ್ಟು ಬಿಟ್ಟು ಸಾಧಾರಣ ಮಳೆ…
ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…