ಗ್ರಾಮೀಣ ಹಾಗೂ ನಗರ ಪ್ರದೇಶದ ಹೃದಯಭಾಗದಲ್ಲಿ ಕಟ್ಟೆಗಳು ಬಹಳ ಹಿಂದಿನಿಂದಲೂ ಸಾಮಾಜಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಆಚರಣೆಗಳನ್ನು ಸಂಯೋಜಿಸುವ ಸಮುದಾಯ ಜೀವನಕ್ಕೆ ಕೇಂದ್ರವಾಗಿದೆ. ಪ್ರಸ್ತುತ ಕಣ್ಮರೆಯಾಗುತ್ತಿರುವ ಮಂಗಳೂರಿನ ಕಟ್ಟೆಗಳನ್ನು ಪುನರುಜ್ಜೀವನಗೊಳಿಸುವ ಕಾರ್ಯವನ್ನು ಮಂಗಳೂರಿನ ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಕಲ್ಚರಲ್ ಹೆರಿಟೇಜ್ ಸಂಸ್ಥೆ ಮಾಡುತ್ತಿದೆ.
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250 ಕ್ಕೂ ಹೆಚ್ಚು ಕಟ್ಟೆಗಳನ್ನು ದಾಖಲಿಸುವ ಮತ್ತು ಸಂರಕ್ಷಿಸುವ ಮಹತ್ವಾಕಾಂಕ್ಷೆಯ ಪ್ರಯತ್ನವನ್ನು ಈ ಸಂಸ್ಥೆ ಮಾಡುತ್ತಿದೆ.
ಮಂಗಳೂರಿನ ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಕಲ್ಚರಲ್ ಹೆರಿಟೇಜ್ ಸಂಸ್ಥೆಯ ಸಂಚಾಲಕ ಸುಭಾಷ್ ಬಸು ಮಾತನಾಡಿ, ಕರಾವಳಿ ಪ್ರದೇಶದಲ್ಲಿ ಮರದ ಕಟ್ಟೆಗಳಗಳನ್ನು ಸಂರಕ್ಷಣೆ ಮಾಡಲಾಗುತ್ತಿದೆ. ಭೌಗೋಳಿಕವಾಗಿ, ಸಾಮಾಜಿಕ, ಧಾರ್ಮಿಕ, ಮತ್ತು ಪರಿಸರದ ಅಗತ್ಯತೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಮಂಗಳೂರಿನ ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಕಲ್ಚರಲ್ ಹೆರಿಟೇಜ್ ಸಂಸ್ಥೆಯ ಸದಸ್ಯ ರಾಜೇಂದ್ರ ಕೇದಗೆ, ಕಟ್ಟೆಗಳು ಸಾಂಪ್ರದಾಯಿಕವಾಗಿ ವಿಶ್ರಾಂತಿಯ ಮೂಲವಾಗಿವೆ. ನಮ್ಮ ಪರಂಪರೆಯಾದ ದೇವಸ್ಥಾನದ ಕಟ್ಟೆಗಳು, ಅಶ್ವತ್ಥ ಕಟ್ಟೆಗಳನ್ನು ಸಂರಕ್ಷಿಸಿ ಸಾರ್ವಜನಿಕರ ಉಪಯೋಗಕ್ಕೆ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದರು.
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…