ಗ್ರಾಮೀಣ ಹಾಗೂ ನಗರ ಪ್ರದೇಶದ ಹೃದಯಭಾಗದಲ್ಲಿ ಕಟ್ಟೆಗಳು ಬಹಳ ಹಿಂದಿನಿಂದಲೂ ಸಾಮಾಜಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಆಚರಣೆಗಳನ್ನು ಸಂಯೋಜಿಸುವ ಸಮುದಾಯ ಜೀವನಕ್ಕೆ ಕೇಂದ್ರವಾಗಿದೆ. ಪ್ರಸ್ತುತ ಕಣ್ಮರೆಯಾಗುತ್ತಿರುವ ಮಂಗಳೂರಿನ ಕಟ್ಟೆಗಳನ್ನು ಪುನರುಜ್ಜೀವನಗೊಳಿಸುವ ಕಾರ್ಯವನ್ನು ಮಂಗಳೂರಿನ ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಕಲ್ಚರಲ್ ಹೆರಿಟೇಜ್ ಸಂಸ್ಥೆ ಮಾಡುತ್ತಿದೆ.
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250 ಕ್ಕೂ ಹೆಚ್ಚು ಕಟ್ಟೆಗಳನ್ನು ದಾಖಲಿಸುವ ಮತ್ತು ಸಂರಕ್ಷಿಸುವ ಮಹತ್ವಾಕಾಂಕ್ಷೆಯ ಪ್ರಯತ್ನವನ್ನು ಈ ಸಂಸ್ಥೆ ಮಾಡುತ್ತಿದೆ.
ಮಂಗಳೂರಿನ ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಕಲ್ಚರಲ್ ಹೆರಿಟೇಜ್ ಸಂಸ್ಥೆಯ ಸಂಚಾಲಕ ಸುಭಾಷ್ ಬಸು ಮಾತನಾಡಿ, ಕರಾವಳಿ ಪ್ರದೇಶದಲ್ಲಿ ಮರದ ಕಟ್ಟೆಗಳಗಳನ್ನು ಸಂರಕ್ಷಣೆ ಮಾಡಲಾಗುತ್ತಿದೆ. ಭೌಗೋಳಿಕವಾಗಿ, ಸಾಮಾಜಿಕ, ಧಾರ್ಮಿಕ, ಮತ್ತು ಪರಿಸರದ ಅಗತ್ಯತೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಮಂಗಳೂರಿನ ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಕಲ್ಚರಲ್ ಹೆರಿಟೇಜ್ ಸಂಸ್ಥೆಯ ಸದಸ್ಯ ರಾಜೇಂದ್ರ ಕೇದಗೆ, ಕಟ್ಟೆಗಳು ಸಾಂಪ್ರದಾಯಿಕವಾಗಿ ವಿಶ್ರಾಂತಿಯ ಮೂಲವಾಗಿವೆ. ನಮ್ಮ ಪರಂಪರೆಯಾದ ದೇವಸ್ಥಾನದ ಕಟ್ಟೆಗಳು, ಅಶ್ವತ್ಥ ಕಟ್ಟೆಗಳನ್ನು ಸಂರಕ್ಷಿಸಿ ಸಾರ್ವಜನಿಕರ ಉಪಯೋಗಕ್ಕೆ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದರು.
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…
ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…