Advertisement
ಅನುಕ್ರಮ

ಊರಿನ ಅಭಿವೃದ್ಧಿ ಎಂದರೆ ಪೇಟೆ ವಿಸ್ತರಿಸುವುದೇ…? ಕೃಷಿಕ ಎ ಪಿ ಸದಾಶಿವ ಮರಿಕೆ ಕೇಳುತ್ತಾರೆ….|

Share

ಇತ್ತೀಚೆಗೆ ಪತ್ರಿಕೆಗಳಲ್ಲಿ ಪುತ್ತೂರಿನ ಸುದ್ದಿ ಬರುವಾಗ ಮಾಮೂಲಾಗಿ ಬರುವುದು ಜಿಲ್ಲಾ ಕೇಂದ್ರವಾಗಲು ಹೊರಟ ಪುತ್ತೂರು ಎಂಬ ವಿಶ್ಲೇಷಣೆಯೊಂದಿಗೆ. ಈ ಉಪನಾಮ ಪುತ್ತೂರಿಗೆ ಯಾಕೆ ಸೇರಿಕೊಳ್ಳುತ್ತದೆ ಎಂದು ನನಗೆ ಅರ್ಥ ಆಗಲಿಲ್ಲ. ಹಾಗಾಗಿ ನನ್ನ ಮತಿಗೆ ಹೊಳೆದ ಒಂದೆರಡು ಮಾತುಗಳನ್ನು ಈ ಬಗ್ಗೆ ಬರೆಯುತ್ತಿದ್ದೇನೆ.

ನಾನೋರ್ವ ಪುತ್ತೂರಿನ ಸಮೀಪದ ಹಳ್ಳಿಯವನಾಗಿ, ಓರ್ವ ಕೃಷಿಕನಾಗಿ ನನ್ನ ಅಭಿಪ್ರಾಯವನ್ನು ಪ್ರಸ್ತುತಪಡಿಸುತ್ತಿದ್ದೇನೆ.

ಒಂದು ಊರಿನ ಅಭಿವೃದ್ಧಿ ಎಂದರೆ ಪೇಟೆ ವಿಸ್ತರಿಸುವುದು, ಕಟ್ಟಡಗಳನ್ನು ಬೆಳೆಸುವುದು, ಮಾರ್ಗಗಳನ್ನು ಅಗಲ ಮಾಡುವುದು, ಅಧಿಕಾರಿಗಳ ಮತ್ತು ಅಧಿಕಾರದ ಹೊಸ ವ್ಯವಸ್ಥೆಯೊಂದನ್ನು ತಯಾರು ಮಾಡುವುದು ಅಲ್ಲ ಎಂದು ನನ್ನ ಭಾವನೆ. ನಮ್ಮ ಪುತ್ತೂರನ್ನು ಒಂದು ಜಿಲ್ಲಾ ಕೇಂದ್ರವಾಗಿಸಬೇಕಾದರೆ ಅಲ್ಲಿಗೆ ಜಿಲ್ಲಾಡಳಿತ ಕಚೇರಿ ಮತ್ತು ಅದಕ್ಕೆ ಬೇಕಾದ ಸಹ ಕಚೇರಿಗಳು ಅಗತ್ಯ. ಇಂತಹ ಕಚೇರಿಗಳಿಗೆ ಅನಂತ ಕಟ್ಟಡಗಳು ಬರಬೇಕಾಗುತ್ತದೆ ಮತ್ತು ಕಟ್ಟಡಗಳಿಗೆ ಅದೆಷ್ಟೋ ಕೋಟಿ ರೂ ಹಣ ವ್ಯಯಿಸಬೇಕಾಗುತ್ತದೆ. ಹೊಸತೊಂದು ಜಿಲ್ಲಾಧಿಕಾರಿ ಮತ್ತು ಅವರ ಸಹ ಅಧಿಕಾರಿವರ್ಗ, ಮತ್ತೊಂದು ಜಿಲ್ಲಾ ಪಂಚಾಯತ್ ಇದಕ್ಕೆಲ್ಲಾ ವ್ಯಯಿಸುವ ಹಣ ಉಳಿಸಿದರೆ ಅದೆಷ್ಟೋ ಹಳ್ಳಿಗಳನ್ನು ಅಭಿವೃದ್ಧಿಪಡಿಸಬಹುದು. ಒಂದು ದೇಶಕ್ಕೆ ಜನಸಂಖ್ಯೆ ಜಾಸ್ತಿಯಾಯಿತು ಎಂದು ದೇಶವನ್ನು ಎರಡು ಮಾಡಲುಂಟೇ? ಎರಡು ಪ್ರಧಾನಿಯನ್ನು ಮಾಡಲು ಉಂಟೆ? ತಾಲೂಕು ತಾಲೂಕನ್ನು ಜಿಲ್ಲಾ ಕೇಂದ್ರವಾಗಿಸಿದರೆ ದೇಶಕ್ಕೆ ಇದನ್ನು ಸಹಿಸಿಕೊಳ್ಳುವ ಸಾಮರ್ಥ್ಯ ಉಂಟೇ?

ಜನ ಸಂಖ್ಯೆ ಹೆಚ್ಚಾದಾಗ ಮೂಲಭೂತ ಅಗತ್ಯತೆಗಳನ್ನು ಹೆಚ್ಚು ಮಾಡಬೇಕೇ ವಿನಹ: ಜಿಲ್ಲೆಯನ್ನು ಒಡೆದು ಇನ್ನೊಂದು ಜಿಲ್ಲೆ ಮಾಡುವುದು ಅಲ್ಲ. ಜನಸಂಖ್ಯೆ ಆಧಾರಿತ ಜನಪ್ರತಿನಿಧಿಗಳನ್ನು ಹೆಚ್ಚುಮಾಡಲಿ. ಹಳ್ಳಿ ಹಳ್ಳಿಗಳನ್ನು ಪೇಟೆಗಳಾಗಿ ವಿಸ್ತರಿಸುತ್ತಾ ಹೋದಲ್ಲಿ ಹಳ್ಳಿಗಳಲ್ಲಿ ನಿಂಬವರು ಯಾರು? ಕೃಷಿಯಾಗಿ, ಮರವೆದ್ದು ಪ್ರಕೃತಿಯ ಸಮತೋಲವನ್ನು ಕಾಯ್ದುಕೊಳ್ಳಬೇಕಾದ ಜಾಗಗಳು, ಕಾಂಕ್ರೀಟು ಕಾಡುಗಳಾದರೆ ಮನುಷ್ಯನಿಗೆ ಉಳಿಗಾಲ ಉಂಟೆ? ಕೃಷಿ ಭೂಮಿಗಳು ನಗರಗಳಾಗಿ ಪರಿವರ್ತನೆ ಆಗುವ ಅಗತ್ಯ ಇದೆಯೇ? ನವದೆಹಲಿಯಂತಹ ನಗರಗಳು ವಾತಾವರಣದ ಮಾಲಿನ್ಯದಿಂದ ಪರಿತಪಿಸುತ್ತಿರುವುದು ನಮ್ಮ ಕಣ್ಣಮುಂದಿದೆ. ಇನ್ನೂ ಅಂತಹ ನಗರಗಳ ಸೃಷ್ಟಿ ಬೇಕೆ?

ಅಭಿವೃದ್ಧಿಯಾಗ ಬೇಕಾದುದು ಹಳ್ಳಿಗಳೇ ವಿನಹ ಪೇಟೆಗಳಲ್ಲ. ಅದು ಕೂಡ ಕಟ್ಟಡಗಳ ಮುಖಾಂತರವಲ್ಲ. ಮೂಲಭೂತ ಸೌಕರ್ಯಗಳಾದ ಮಾರ್ಗಗಳು ಮತ್ತು ಶಾಲೆಗಳು ಸಣ್ಣ ಸಣ್ಣ ಆಸ್ಪತ್ರೆಗಳು. ಇಂದು ನಾವು ಹಳ್ಳಿಯ ಶಾಲೆಗಳನ್ನು ನಾಶಪಡಿಸಿ ಹಳ್ಳಿಯ ಮಕ್ಕಳೆಲ್ಲ ಪೇಟೆಯ ಕಡೆಗೆ ಮುಖ ಮಾಡುವಂತಾಗಿದೆ. ಜನಾಭಿಪ್ರಾಯ ರೂಪಿತವಾಗಬೇಕಾದುದು ಹಳ್ಳಿಯ ಅಭಿವೃದ್ಧಿಗೆ ವಿನಹ ಜಿಲ್ಲಾ ಕೇಂದ್ರವಾಗಿಸುವ ಬಗ್ಗೆ ಅಲ್ಲ . ಹಳ್ಳಿ ಬರಡಾಗುವ ಮುನ್ನ ಎಚ್ಚರವಾಗೋಣ.

# ಎ.ಪಿ. ಸದಾಶಿವ. ಮರಿಕೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

2 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

11 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

15 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

1 day ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago