ಉತ್ತಮ ಅಡಿಕೆ ಕೃಷಿಕ ಪ್ರಶಸ್ತಿಗೆ ಉಪ್ಪಿನಂಗಡಿಯ ದೇವಿಪ್ರಸಾದ್ ಕಡಮ್ಮಾಜೆ ಆಯ್ಕೆ

December 13, 2023
9:13 PM
ಯುವ ಕೃಷಿಕ  ದೇವಿಪ್ರಸಾದ್ ಕಡಮ್ಮಾಜೆ ಅವರು ಅಡಿಕೆಯೊಂದಿಗೆ ಮಿಶ್ರಬೆಳೆಯಾಗಿ ಕಾಳುಮೆಣಸು ಮತ್ತು ಬಾಳೆ ಬೆಳೆಯುವುದಲ್ಲದೆ,ಮಿಶ್ರ ಕೃಷಿಯಾಗಿ ದನ ಸಾಕಣೆ, ಕೋಳಿ ಸಾಕಣೆ, ಕುರಿ ಸಾಕಣೆ ಮತ್ತು ಹಂದಿ ಸಾಕಣೆಯನ್ನು ವಾಣಿಜ್ಯ ಮಟ್ಟದಲ್ಲಿ ಮಾಡುತ್ತಿದ್ದು, ಯುವ ಕೃಷಿಕರಿಗೆ ಪ್ರೇರಣೆಯಾಗಿದ್ದಾರೆ.

ಭಾರತೀಯ ಪ್ಲಾಂಟೇಶನ್ ಬೆಳೆಗಳ ಸೊಸೈಟಿ ನೀಡುವ ಉತ್ತಮ ಅಡಿಕೆ ಕೃಷಿಕ ಪ್ರಶಸ್ತಿಗೆ ಉಪ್ಪಿನಂಗಡಿ ಸಮೀಪದ ಮೊಗ್ರು ಗ್ರಾಮದ ಯುವ ಕೃಷಿಕ  ದೇವಿಪ್ರಸಾದ್ ಕಡಮ್ಮಾಜೆ ಭಾಜನರಾಗಿದ್ದಾರೆ. ತಮ್ಮ ಕಡಮ್ಮಾಜೆ ಫಾರ್ಮ್ಸ್ ನಲ್ಲಿ ಅಡಿಕೆಯೊಂದಿಗೆ ಮಿಶ್ರಬೆಳೆಯಾಗಿ ಕಾಳುಮೆಣಸು ಮತ್ತು ಬಾಳೆ ಬೆಳೆಯುತ್ತಿರುವ ಇವರು, ಮಿಶ್ರ ಕೃಷಿಯಾಗಿ ದನ ಸಾಕಣೆ, ಕೋಳಿ ಸಾಕಣೆ, ಕುರಿ ಸಾಕಣೆ ಮತ್ತು ಹಂದಿ ಸಾಕಣೆಯನ್ನು ವಾಣಿಜ್ಯ ಮಟ್ಟದಲ್ಲಿ ಮಾಡುತ್ತಿದ್ದು, ಯುವ ಕೃಷಿಕರಿಗೆ ಪ್ರೇರಣೆಯಾಗಿದ್ದಾರೆ.

ಸಂಪೂರ್ಣ ಸಾವಯವ ಕೃಷಿಕರಾಗಿರುವ ಕಡಮ್ಮಾಜೆ ಫಾರ್ಮ್ಸ್ ನ  ದೇವಿಪ್ರಸಾದ್, ಕಾಂಪೋಸ್ಟ್ ಮತ್ತು ಎರೆಗೊಬ್ಬರ ತಯಾರಿಕೆ ಮಾತ್ರವಲ್ಲದೆ, ಉಪ್ಪಿನಂಗಡಿ ಪೇಟೆಯ ಹಸಿ ತ್ಯಾಜ್ಯವನ್ನು ಬೇರ್ಪಡಿಸಿ ಕಾಂಪೋಸ್ಟ್ ಮಾಡಿ ಬೆಳೆಗಳಿಗೆ ನೀಡುತ್ತಿದ್ದಾರೆ. ಬಲೂನ್ ರೂಪದ ಎರಡು ಗೋಬರ್ ಅನಿಲ ಘಟಕಗಳಿದ್ದು, ಗೊಬ್ಬರ ಸ್ವಾವಲಂಬನೆ ಜೊತೆಗೆ ಇಂಧನ ಸ್ವಾವಲಂಬನೆಯನ್ನೂ ಮಾಡಿಕೊಂಡಿದ್ದಾರೆ. ಕೇಂದ್ರ ಸರ್ಕಾರವು ಸಾವಯವ ಕೃಷಿ ಮತ್ತು ಗೊಬ್ಬರದ ಸ್ವಾವಲಂಬನೆಗೆ ಉತ್ತೇಜನ ನೀಡುತ್ತಿರುವ ಈ ಸಮಯದಲ್ಲಿ, ಸಣ್ಣ ವಯಸ್ಸಿನಲ್ಲೇ ಕೃಷಿಯಲ್ಲಿ ಸಾಧನೆಯನ್ನು ಮಾಡಿದ ದಕ್ಷಿಣ ಕನ್ನಡ ಜಿಲ್ಲೆಯ ಕೃಷಿಕನನ್ನು
ಪ್ರಶಸ್ತಿಗೆ ಆಯ್ಕೆ ಮಾಡಿರುವುದು ವಿಶೇಷ.

ಉತ್ತಮ ಅಡಿಕೆ ಕೃಷಿಕ ಪ್ರಶಸ್ತಿಯನ್ನು ಡಿಸೆಂಬರ್ 13ರಂದು ಆಂಧ್ರಪ್ರದೇಶದ ಪೆದವೆಗಿಯಲ್ಲಿರುವ ಭಾರತೀಯ ತಾಳೆ ಸಂಶೋಧನಾ ಕೇಂದ್ರದಲ್ಲಿ ನಡೆದ ಭಾರತೀಯ ಪ್ಲಾಂಟೇಶನ್ ಬೆಳೆಗಳ ಸೊಸೈಟಿಯ 50ನೇ ವಾರ್ಷಿಕ ಸಭೆಯಲ್ಲಿ  ದೇವಿಪ್ರಸಾದ್ ಕಡಮ್ಮಾಜೆಯವರಿಗೆ ನೀಡಲಾಯಿತು. ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ ಅಡಿಕೆ ಕೃಷಿಕನನ್ನು ಗುರುತಿಸಿ ಈ ಪ್ರಶಸ್ತಿಯನ್ನು ಪ್ರತೀ ವರ್ಷ ನೀಡಲಾಗುತ್ತಿದೆ. ಇದು ಅಖಿಲ ಭಾರತ ಅಡಿಕೆ ಒಕ್ಕೂಟ ಟ್ರಸ್ಟ್, ಭಾರತೀಯ ಪ್ಲಾಂಟೇಶನ್ ಬೆಳೆಗಳ ಸೊಸೈಟಿ ಮುಖೇನ ನೀಡುವ ಪ್ರತಿಷ್ಠಿತ ಪ್ರಶಸ್ತಿಯಾಗಿದೆ.

Deviprasad Kadammaje, a young farmer from Mogru village near Uppinangady, has been selected for the award given by the Plantation Crops Society of India.Growing pepper and banana as a mixed crop with Arecanut, he is doing mixed farming with Dairy farming, poultry , sheep  and pig rearing on a commercial scale and is an inspiration to young farmers.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ
September 15, 2026
12:30 PM
by: ಸಾಯಿಶೇಖರ್ ಕರಿಕಳ
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?
September 14, 2026
12:51 PM
by: ಸಾಯಿಶೇಖರ್ ಕರಿಕಳ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ
September 14, 2026
11:33 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror