Advertisement
MIRROR FOCUS

ಉತ್ತಮ ಅಡಿಕೆ ಕೃಷಿಕ ಪ್ರಶಸ್ತಿಗೆ ಉಪ್ಪಿನಂಗಡಿಯ ದೇವಿಪ್ರಸಾದ್ ಕಡಮ್ಮಾಜೆ ಆಯ್ಕೆ

Share

ಭಾರತೀಯ ಪ್ಲಾಂಟೇಶನ್ ಬೆಳೆಗಳ ಸೊಸೈಟಿ ನೀಡುವ ಉತ್ತಮ ಅಡಿಕೆ ಕೃಷಿಕ ಪ್ರಶಸ್ತಿಗೆ ಉಪ್ಪಿನಂಗಡಿ ಸಮೀಪದ ಮೊಗ್ರು ಗ್ರಾಮದ ಯುವ ಕೃಷಿಕ  ದೇವಿಪ್ರಸಾದ್ ಕಡಮ್ಮಾಜೆ ಭಾಜನರಾಗಿದ್ದಾರೆ. ತಮ್ಮ ಕಡಮ್ಮಾಜೆ ಫಾರ್ಮ್ಸ್ ನಲ್ಲಿ ಅಡಿಕೆಯೊಂದಿಗೆ ಮಿಶ್ರಬೆಳೆಯಾಗಿ ಕಾಳುಮೆಣಸು ಮತ್ತು ಬಾಳೆ ಬೆಳೆಯುತ್ತಿರುವ ಇವರು, ಮಿಶ್ರ ಕೃಷಿಯಾಗಿ ದನ ಸಾಕಣೆ, ಕೋಳಿ ಸಾಕಣೆ, ಕುರಿ ಸಾಕಣೆ ಮತ್ತು ಹಂದಿ ಸಾಕಣೆಯನ್ನು ವಾಣಿಜ್ಯ ಮಟ್ಟದಲ್ಲಿ ಮಾಡುತ್ತಿದ್ದು, ಯುವ ಕೃಷಿಕರಿಗೆ ಪ್ರೇರಣೆಯಾಗಿದ್ದಾರೆ.

ಸಂಪೂರ್ಣ ಸಾವಯವ ಕೃಷಿಕರಾಗಿರುವ ಕಡಮ್ಮಾಜೆ ಫಾರ್ಮ್ಸ್ ನ  ದೇವಿಪ್ರಸಾದ್, ಕಾಂಪೋಸ್ಟ್ ಮತ್ತು ಎರೆಗೊಬ್ಬರ ತಯಾರಿಕೆ ಮಾತ್ರವಲ್ಲದೆ, ಉಪ್ಪಿನಂಗಡಿ ಪೇಟೆಯ ಹಸಿ ತ್ಯಾಜ್ಯವನ್ನು ಬೇರ್ಪಡಿಸಿ ಕಾಂಪೋಸ್ಟ್ ಮಾಡಿ ಬೆಳೆಗಳಿಗೆ ನೀಡುತ್ತಿದ್ದಾರೆ. ಬಲೂನ್ ರೂಪದ ಎರಡು ಗೋಬರ್ ಅನಿಲ ಘಟಕಗಳಿದ್ದು, ಗೊಬ್ಬರ ಸ್ವಾವಲಂಬನೆ ಜೊತೆಗೆ ಇಂಧನ ಸ್ವಾವಲಂಬನೆಯನ್ನೂ ಮಾಡಿಕೊಂಡಿದ್ದಾರೆ. ಕೇಂದ್ರ ಸರ್ಕಾರವು ಸಾವಯವ ಕೃಷಿ ಮತ್ತು ಗೊಬ್ಬರದ ಸ್ವಾವಲಂಬನೆಗೆ ಉತ್ತೇಜನ ನೀಡುತ್ತಿರುವ ಈ ಸಮಯದಲ್ಲಿ, ಸಣ್ಣ ವಯಸ್ಸಿನಲ್ಲೇ ಕೃಷಿಯಲ್ಲಿ ಸಾಧನೆಯನ್ನು ಮಾಡಿದ ದಕ್ಷಿಣ ಕನ್ನಡ ಜಿಲ್ಲೆಯ ಕೃಷಿಕನನ್ನು
ಪ್ರಶಸ್ತಿಗೆ ಆಯ್ಕೆ ಮಾಡಿರುವುದು ವಿಶೇಷ.

ಉತ್ತಮ ಅಡಿಕೆ ಕೃಷಿಕ ಪ್ರಶಸ್ತಿಯನ್ನು ಡಿಸೆಂಬರ್ 13ರಂದು ಆಂಧ್ರಪ್ರದೇಶದ ಪೆದವೆಗಿಯಲ್ಲಿರುವ ಭಾರತೀಯ ತಾಳೆ ಸಂಶೋಧನಾ ಕೇಂದ್ರದಲ್ಲಿ ನಡೆದ ಭಾರತೀಯ ಪ್ಲಾಂಟೇಶನ್ ಬೆಳೆಗಳ ಸೊಸೈಟಿಯ 50ನೇ ವಾರ್ಷಿಕ ಸಭೆಯಲ್ಲಿ  ದೇವಿಪ್ರಸಾದ್ ಕಡಮ್ಮಾಜೆಯವರಿಗೆ ನೀಡಲಾಯಿತು. ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ ಅಡಿಕೆ ಕೃಷಿಕನನ್ನು ಗುರುತಿಸಿ ಈ ಪ್ರಶಸ್ತಿಯನ್ನು ಪ್ರತೀ ವರ್ಷ ನೀಡಲಾಗುತ್ತಿದೆ. ಇದು ಅಖಿಲ ಭಾರತ ಅಡಿಕೆ ಒಕ್ಕೂಟ ಟ್ರಸ್ಟ್, ಭಾರತೀಯ ಪ್ಲಾಂಟೇಶನ್ ಬೆಳೆಗಳ ಸೊಸೈಟಿ ಮುಖೇನ ನೀಡುವ ಪ್ರತಿಷ್ಠಿತ ಪ್ರಶಸ್ತಿಯಾಗಿದೆ.

Deviprasad Kadammaje, a young farmer from Mogru village near Uppinangady, has been selected for the award given by the Plantation Crops Society of India.Growing pepper and banana as a mixed crop with Arecanut, he is doing mixed farming with Dairy farming, poultry , sheep  and pig rearing on a commercial scale and is an inspiration to young farmers.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

2 hours ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

4 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

4 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

14 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

16 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

23 hours ago