Advertisement
MIRROR FOCUS

ಉತ್ತಮ ಅಡಿಕೆ ಕೃಷಿಕ ಪ್ರಶಸ್ತಿಗೆ ಉಪ್ಪಿನಂಗಡಿಯ ದೇವಿಪ್ರಸಾದ್ ಕಡಮ್ಮಾಜೆ ಆಯ್ಕೆ

Share

ಭಾರತೀಯ ಪ್ಲಾಂಟೇಶನ್ ಬೆಳೆಗಳ ಸೊಸೈಟಿ ನೀಡುವ ಉತ್ತಮ ಅಡಿಕೆ ಕೃಷಿಕ ಪ್ರಶಸ್ತಿಗೆ ಉಪ್ಪಿನಂಗಡಿ ಸಮೀಪದ ಮೊಗ್ರು ಗ್ರಾಮದ ಯುವ ಕೃಷಿಕ  ದೇವಿಪ್ರಸಾದ್ ಕಡಮ್ಮಾಜೆ ಭಾಜನರಾಗಿದ್ದಾರೆ. ತಮ್ಮ ಕಡಮ್ಮಾಜೆ ಫಾರ್ಮ್ಸ್ ನಲ್ಲಿ ಅಡಿಕೆಯೊಂದಿಗೆ ಮಿಶ್ರಬೆಳೆಯಾಗಿ ಕಾಳುಮೆಣಸು ಮತ್ತು ಬಾಳೆ ಬೆಳೆಯುತ್ತಿರುವ ಇವರು, ಮಿಶ್ರ ಕೃಷಿಯಾಗಿ ದನ ಸಾಕಣೆ, ಕೋಳಿ ಸಾಕಣೆ, ಕುರಿ ಸಾಕಣೆ ಮತ್ತು ಹಂದಿ ಸಾಕಣೆಯನ್ನು ವಾಣಿಜ್ಯ ಮಟ್ಟದಲ್ಲಿ ಮಾಡುತ್ತಿದ್ದು, ಯುವ ಕೃಷಿಕರಿಗೆ ಪ್ರೇರಣೆಯಾಗಿದ್ದಾರೆ.

Advertisement

ಸಂಪೂರ್ಣ ಸಾವಯವ ಕೃಷಿಕರಾಗಿರುವ ಕಡಮ್ಮಾಜೆ ಫಾರ್ಮ್ಸ್ ನ  ದೇವಿಪ್ರಸಾದ್, ಕಾಂಪೋಸ್ಟ್ ಮತ್ತು ಎರೆಗೊಬ್ಬರ ತಯಾರಿಕೆ ಮಾತ್ರವಲ್ಲದೆ, ಉಪ್ಪಿನಂಗಡಿ ಪೇಟೆಯ ಹಸಿ ತ್ಯಾಜ್ಯವನ್ನು ಬೇರ್ಪಡಿಸಿ ಕಾಂಪೋಸ್ಟ್ ಮಾಡಿ ಬೆಳೆಗಳಿಗೆ ನೀಡುತ್ತಿದ್ದಾರೆ. ಬಲೂನ್ ರೂಪದ ಎರಡು ಗೋಬರ್ ಅನಿಲ ಘಟಕಗಳಿದ್ದು, ಗೊಬ್ಬರ ಸ್ವಾವಲಂಬನೆ ಜೊತೆಗೆ ಇಂಧನ ಸ್ವಾವಲಂಬನೆಯನ್ನೂ ಮಾಡಿಕೊಂಡಿದ್ದಾರೆ. ಕೇಂದ್ರ ಸರ್ಕಾರವು ಸಾವಯವ ಕೃಷಿ ಮತ್ತು ಗೊಬ್ಬರದ ಸ್ವಾವಲಂಬನೆಗೆ ಉತ್ತೇಜನ ನೀಡುತ್ತಿರುವ ಈ ಸಮಯದಲ್ಲಿ, ಸಣ್ಣ ವಯಸ್ಸಿನಲ್ಲೇ ಕೃಷಿಯಲ್ಲಿ ಸಾಧನೆಯನ್ನು ಮಾಡಿದ ದಕ್ಷಿಣ ಕನ್ನಡ ಜಿಲ್ಲೆಯ ಕೃಷಿಕನನ್ನು
ಪ್ರಶಸ್ತಿಗೆ ಆಯ್ಕೆ ಮಾಡಿರುವುದು ವಿಶೇಷ.

ಉತ್ತಮ ಅಡಿಕೆ ಕೃಷಿಕ ಪ್ರಶಸ್ತಿಯನ್ನು ಡಿಸೆಂಬರ್ 13ರಂದು ಆಂಧ್ರಪ್ರದೇಶದ ಪೆದವೆಗಿಯಲ್ಲಿರುವ ಭಾರತೀಯ ತಾಳೆ ಸಂಶೋಧನಾ ಕೇಂದ್ರದಲ್ಲಿ ನಡೆದ ಭಾರತೀಯ ಪ್ಲಾಂಟೇಶನ್ ಬೆಳೆಗಳ ಸೊಸೈಟಿಯ 50ನೇ ವಾರ್ಷಿಕ ಸಭೆಯಲ್ಲಿ  ದೇವಿಪ್ರಸಾದ್ ಕಡಮ್ಮಾಜೆಯವರಿಗೆ ನೀಡಲಾಯಿತು. ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ ಅಡಿಕೆ ಕೃಷಿಕನನ್ನು ಗುರುತಿಸಿ ಈ ಪ್ರಶಸ್ತಿಯನ್ನು ಪ್ರತೀ ವರ್ಷ ನೀಡಲಾಗುತ್ತಿದೆ. ಇದು ಅಖಿಲ ಭಾರತ ಅಡಿಕೆ ಒಕ್ಕೂಟ ಟ್ರಸ್ಟ್, ಭಾರತೀಯ ಪ್ಲಾಂಟೇಶನ್ ಬೆಳೆಗಳ ಸೊಸೈಟಿ ಮುಖೇನ ನೀಡುವ ಪ್ರತಿಷ್ಠಿತ ಪ್ರಶಸ್ತಿಯಾಗಿದೆ.

Advertisement

Deviprasad Kadammaje, a young farmer from Mogru village near Uppinangady, has been selected for the award given by the Plantation Crops Society of India.Growing pepper and banana as a mixed crop with Arecanut, he is doing mixed farming with Dairy farming, poultry , sheep  and pig rearing on a commercial scale and is an inspiration to young farmers.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

7 hours ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

8 hours ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

21 hours ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

1 day ago

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

2 days ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

2 days ago