Advertisement
ಸುದ್ದಿಗಳು

ಅಯೋಧ್ಯೆಗೆ ಹರಿದು ಬರುತ್ತಿರುವ ಭಕ್ತರ ದಂಡು | ರಾಮನ ದರ್ಶನ ಪಡೆದ 1.5 ಕೋಟಿ ಜನ – ಚಂಪತ್‌ ರಾಯ್‌

Share

ಅಯೋಧ್ಯೆಯಲ್ಲಿ(Ayodhya) ರಾಮಲಲ್ಲಾನ(Ram Mandir) ಪ್ರತಿಷ್ಠೆಯಾದ ನಂತರ ದೇಶವಲ್ಲದೆ ವಿದೇಶಗಳಿಂದಲೂ(Foreign) ಸಾವಿರಾರು ಭಕ್ತರು(Devotee) ರಾಮ ಮಂದಿರಕ್ಕೆ ಭೇಟಿ ನೀಡಿ ರಾಮನ ದರ್ಶನ ಪಡೆಯುತ್ತಿದ್ದಾರೆ. ದಿನನಿತ್ಯ ಬೇರೆ ಬೇರೆ ಕಡಗಳಿಂದ ಭಕ್ತರು ಭೇಟಿ ನೀಡುತ್ತಿದ್ದಾರೆ. ರಾಮಮಂದಿರದಲ್ಲಿ (Ayodhya Ram Mandir) ರಾಮಲ್ಲಾನ ಪ್ರಾಣಪ್ರತಿಷ್ಠಾಪನೆ ಆದಾಗಿಂದ ಇಲ್ಲಿಯವರೆಗೆ ಸುಮಾರು ಒಂದೂವರೆ ಕೊಟಿ ಜನ ಭೇಟಿ ನೀಡಿದ್ದಾರೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮಾಹಿತಿ ನೀಡಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿದಿನ ಒಂದು ಲಕ್ಷಕ್ಕೂ ಹೆಚ್ಚು ಜನರು ರಾಮಲಲ್ಲಾನ ದರ್ಶನ ಪಡೆಯಲು ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಪ್ರಾಣ ಪ್ರತಿಷ್ಠಾಪನೆ ಮಾಡಿದ ಬಳಿಕ ಸುಮಾರು 1.5 ಕೋಟಿ ಜನರು ರಾಮಲಲ್ಲಾನ ದರ್ಶನಕ್ಕೆ ಬಂದಿದ್ದಾರೆ ಎಂದರು.

ಮಹರ್ಷಿ ವಾಲ್ಮೀಕಿ, ಮಹರ್ಷಿ ವಶಿಷ್ಠ, ಮಹರ್ಷಿ ವಿಶ್ವಾಮಿತ್ರ ಮತ್ತು ಮಹರ್ಷಿ ಅಗಸ್ತ್ಯರನ್ನೂ ನಿರ್ಮಿಸಲಾಗುವುದು. ನಿಶಾದ್ ರಾಜ್, ಮಾ ಶಬರಿ, ಮಾ ಅಹಲ್ಯಾ ಮತ್ತು ಜಟಾಯು ದೇಗುಲಗಳನ್ನು ಕೂಡ ನಿರ್ಮಿಸಲಾಗುವುದು. ದೇವಾಲಯವು ಏಕಕಾಲದಲ್ಲಿ 25,000 ಯಾತ್ರಾರ್ಥಿಗಳಿಗೆ ಅವಕಾಶ ಕಲ್ಪಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಇಲ್ಲಿನ ಮರಗಳು ಮತ್ತು ಗಿಡಗಳನ್ನು ಸಂರಕ್ಷಿಸಲಾಗಿದೆ. 600 ಗಿಡಗಳು ಆವರಣದಲ್ಲಿದ್ದು, ರಕ್ಷಿಸಲಾಗಿದೆ. ನೀರು ಸಂಸ್ಕರಣಾ ಘಟಕ ಮತ್ತು ಒಳಚರಂಡಿ ಸಂಸ್ಕರಣಾ ಘಟಕವೂ ಇದೆ ಎಂದು ಚಂಪತ್ ರಾಯ್ ಹೇಳಿದರು.

ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮ ಮಂದಿರದಲ್ಲಿ ಮಂಗಳವಾರ ಮೊದಲ ರಾಮನವಮಿಯನ್ನು ಆಚರಿಸಲಾಯಿತು. ಈ ಸಮಯದಲ್ಲಿ ದೇಗುಲವನ್ನು ಸುಮಾರು 19 ಗಂಟೆಗಳ ಕಾಲ ತೆರೆಯಲಾಗಿತ್ತು. ಅಲ್ಲದೇ ವೈಜ್ಞಾನಿಕ ತಂತ್ರಗಳನ್ನು ಬಳಸಿಕೊಂಡು ರಾಮ ಲಲ್ಲಾನ ವಿಗ್ರಹದ ಹಣೆಯ ಮೇಲೆ ಸೂರ್ಯ ತಿಲಕವನ್ನು ಸಹ ಪ್ರದರ್ಶಿಸಲಾಯಿತು ಎಂದು ವಿವರಿಸಿದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

4 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

9 hours ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

18 hours ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

19 hours ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

20 hours ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

1 day ago