Advertisement
ಸುದ್ದಿಗಳು

ಅಯೋಧ್ಯೆಗೆ ಹರಿದು ಬರುತ್ತಿರುವ ಭಕ್ತರ ದಂಡು | ರಾಮನ ದರ್ಶನ ಪಡೆದ 1.5 ಕೋಟಿ ಜನ – ಚಂಪತ್‌ ರಾಯ್‌

Share

ಅಯೋಧ್ಯೆಯಲ್ಲಿ(Ayodhya) ರಾಮಲಲ್ಲಾನ(Ram Mandir) ಪ್ರತಿಷ್ಠೆಯಾದ ನಂತರ ದೇಶವಲ್ಲದೆ ವಿದೇಶಗಳಿಂದಲೂ(Foreign) ಸಾವಿರಾರು ಭಕ್ತರು(Devotee) ರಾಮ ಮಂದಿರಕ್ಕೆ ಭೇಟಿ ನೀಡಿ ರಾಮನ ದರ್ಶನ ಪಡೆಯುತ್ತಿದ್ದಾರೆ. ದಿನನಿತ್ಯ ಬೇರೆ ಬೇರೆ ಕಡಗಳಿಂದ ಭಕ್ತರು ಭೇಟಿ ನೀಡುತ್ತಿದ್ದಾರೆ. ರಾಮಮಂದಿರದಲ್ಲಿ (Ayodhya Ram Mandir) ರಾಮಲ್ಲಾನ ಪ್ರಾಣಪ್ರತಿಷ್ಠಾಪನೆ ಆದಾಗಿಂದ ಇಲ್ಲಿಯವರೆಗೆ ಸುಮಾರು ಒಂದೂವರೆ ಕೊಟಿ ಜನ ಭೇಟಿ ನೀಡಿದ್ದಾರೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮಾಹಿತಿ ನೀಡಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿದಿನ ಒಂದು ಲಕ್ಷಕ್ಕೂ ಹೆಚ್ಚು ಜನರು ರಾಮಲಲ್ಲಾನ ದರ್ಶನ ಪಡೆಯಲು ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಪ್ರಾಣ ಪ್ರತಿಷ್ಠಾಪನೆ ಮಾಡಿದ ಬಳಿಕ ಸುಮಾರು 1.5 ಕೋಟಿ ಜನರು ರಾಮಲಲ್ಲಾನ ದರ್ಶನಕ್ಕೆ ಬಂದಿದ್ದಾರೆ ಎಂದರು.

ಮಹರ್ಷಿ ವಾಲ್ಮೀಕಿ, ಮಹರ್ಷಿ ವಶಿಷ್ಠ, ಮಹರ್ಷಿ ವಿಶ್ವಾಮಿತ್ರ ಮತ್ತು ಮಹರ್ಷಿ ಅಗಸ್ತ್ಯರನ್ನೂ ನಿರ್ಮಿಸಲಾಗುವುದು. ನಿಶಾದ್ ರಾಜ್, ಮಾ ಶಬರಿ, ಮಾ ಅಹಲ್ಯಾ ಮತ್ತು ಜಟಾಯು ದೇಗುಲಗಳನ್ನು ಕೂಡ ನಿರ್ಮಿಸಲಾಗುವುದು. ದೇವಾಲಯವು ಏಕಕಾಲದಲ್ಲಿ 25,000 ಯಾತ್ರಾರ್ಥಿಗಳಿಗೆ ಅವಕಾಶ ಕಲ್ಪಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಇಲ್ಲಿನ ಮರಗಳು ಮತ್ತು ಗಿಡಗಳನ್ನು ಸಂರಕ್ಷಿಸಲಾಗಿದೆ. 600 ಗಿಡಗಳು ಆವರಣದಲ್ಲಿದ್ದು, ರಕ್ಷಿಸಲಾಗಿದೆ. ನೀರು ಸಂಸ್ಕರಣಾ ಘಟಕ ಮತ್ತು ಒಳಚರಂಡಿ ಸಂಸ್ಕರಣಾ ಘಟಕವೂ ಇದೆ ಎಂದು ಚಂಪತ್ ರಾಯ್ ಹೇಳಿದರು.

ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮ ಮಂದಿರದಲ್ಲಿ ಮಂಗಳವಾರ ಮೊದಲ ರಾಮನವಮಿಯನ್ನು ಆಚರಿಸಲಾಯಿತು. ಈ ಸಮಯದಲ್ಲಿ ದೇಗುಲವನ್ನು ಸುಮಾರು 19 ಗಂಟೆಗಳ ಕಾಲ ತೆರೆಯಲಾಗಿತ್ತು. ಅಲ್ಲದೇ ವೈಜ್ಞಾನಿಕ ತಂತ್ರಗಳನ್ನು ಬಳಸಿಕೊಂಡು ರಾಮ ಲಲ್ಲಾನ ವಿಗ್ರಹದ ಹಣೆಯ ಮೇಲೆ ಸೂರ್ಯ ತಿಲಕವನ್ನು ಸಹ ಪ್ರದರ್ಶಿಸಲಾಯಿತು ಎಂದು ವಿವರಿಸಿದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

7 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

8 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

8 hours ago

ಹವಾಮಾನ ವರದಿ | 12-08-2026 | ಕರ್ನಾಟಕದಲ್ಲಿ ಮುಂದುವರಿಯಲಿದೆ ಬಿಡುವಿನ ಮಳೆ

ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…

8 hours ago

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

21 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

1 day ago