Advertisement
ಸುದ್ದಿಗಳು

ಅಯೋಧ್ಯೆಗೆ ಹರಿದು ಬರುತ್ತಿರುವ ಭಕ್ತರ ದಂಡು | ರಾಮನ ದರ್ಶನ ಪಡೆದ 1.5 ಕೋಟಿ ಜನ – ಚಂಪತ್‌ ರಾಯ್‌

Share

ಅಯೋಧ್ಯೆಯಲ್ಲಿ(Ayodhya) ರಾಮಲಲ್ಲಾನ(Ram Mandir) ಪ್ರತಿಷ್ಠೆಯಾದ ನಂತರ ದೇಶವಲ್ಲದೆ ವಿದೇಶಗಳಿಂದಲೂ(Foreign) ಸಾವಿರಾರು ಭಕ್ತರು(Devotee) ರಾಮ ಮಂದಿರಕ್ಕೆ ಭೇಟಿ ನೀಡಿ ರಾಮನ ದರ್ಶನ ಪಡೆಯುತ್ತಿದ್ದಾರೆ. ದಿನನಿತ್ಯ ಬೇರೆ ಬೇರೆ ಕಡಗಳಿಂದ ಭಕ್ತರು ಭೇಟಿ ನೀಡುತ್ತಿದ್ದಾರೆ. ರಾಮಮಂದಿರದಲ್ಲಿ (Ayodhya Ram Mandir) ರಾಮಲ್ಲಾನ ಪ್ರಾಣಪ್ರತಿಷ್ಠಾಪನೆ ಆದಾಗಿಂದ ಇಲ್ಲಿಯವರೆಗೆ ಸುಮಾರು ಒಂದೂವರೆ ಕೊಟಿ ಜನ ಭೇಟಿ ನೀಡಿದ್ದಾರೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮಾಹಿತಿ ನೀಡಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿದಿನ ಒಂದು ಲಕ್ಷಕ್ಕೂ ಹೆಚ್ಚು ಜನರು ರಾಮಲಲ್ಲಾನ ದರ್ಶನ ಪಡೆಯಲು ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಪ್ರಾಣ ಪ್ರತಿಷ್ಠಾಪನೆ ಮಾಡಿದ ಬಳಿಕ ಸುಮಾರು 1.5 ಕೋಟಿ ಜನರು ರಾಮಲಲ್ಲಾನ ದರ್ಶನಕ್ಕೆ ಬಂದಿದ್ದಾರೆ ಎಂದರು.

ಮಹರ್ಷಿ ವಾಲ್ಮೀಕಿ, ಮಹರ್ಷಿ ವಶಿಷ್ಠ, ಮಹರ್ಷಿ ವಿಶ್ವಾಮಿತ್ರ ಮತ್ತು ಮಹರ್ಷಿ ಅಗಸ್ತ್ಯರನ್ನೂ ನಿರ್ಮಿಸಲಾಗುವುದು. ನಿಶಾದ್ ರಾಜ್, ಮಾ ಶಬರಿ, ಮಾ ಅಹಲ್ಯಾ ಮತ್ತು ಜಟಾಯು ದೇಗುಲಗಳನ್ನು ಕೂಡ ನಿರ್ಮಿಸಲಾಗುವುದು. ದೇವಾಲಯವು ಏಕಕಾಲದಲ್ಲಿ 25,000 ಯಾತ್ರಾರ್ಥಿಗಳಿಗೆ ಅವಕಾಶ ಕಲ್ಪಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಇಲ್ಲಿನ ಮರಗಳು ಮತ್ತು ಗಿಡಗಳನ್ನು ಸಂರಕ್ಷಿಸಲಾಗಿದೆ. 600 ಗಿಡಗಳು ಆವರಣದಲ್ಲಿದ್ದು, ರಕ್ಷಿಸಲಾಗಿದೆ. ನೀರು ಸಂಸ್ಕರಣಾ ಘಟಕ ಮತ್ತು ಒಳಚರಂಡಿ ಸಂಸ್ಕರಣಾ ಘಟಕವೂ ಇದೆ ಎಂದು ಚಂಪತ್ ರಾಯ್ ಹೇಳಿದರು.

ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮ ಮಂದಿರದಲ್ಲಿ ಮಂಗಳವಾರ ಮೊದಲ ರಾಮನವಮಿಯನ್ನು ಆಚರಿಸಲಾಯಿತು. ಈ ಸಮಯದಲ್ಲಿ ದೇಗುಲವನ್ನು ಸುಮಾರು 19 ಗಂಟೆಗಳ ಕಾಲ ತೆರೆಯಲಾಗಿತ್ತು. ಅಲ್ಲದೇ ವೈಜ್ಞಾನಿಕ ತಂತ್ರಗಳನ್ನು ಬಳಸಿಕೊಂಡು ರಾಮ ಲಲ್ಲಾನ ವಿಗ್ರಹದ ಹಣೆಯ ಮೇಲೆ ಸೂರ್ಯ ತಿಲಕವನ್ನು ಸಹ ಪ್ರದರ್ಶಿಸಲಾಯಿತು ಎಂದು ವಿವರಿಸಿದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

15 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

1 day ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

4 days ago