ಅಯೋಧ್ಯೆಯಲ್ಲಿ(Ayodhya) ರಾಮಲಲ್ಲಾನ(Ram Mandir) ಪ್ರತಿಷ್ಠೆಯಾದ ನಂತರ ದೇಶವಲ್ಲದೆ ವಿದೇಶಗಳಿಂದಲೂ(Foreign) ಸಾವಿರಾರು ಭಕ್ತರು(Devotee) ರಾಮ ಮಂದಿರಕ್ಕೆ ಭೇಟಿ ನೀಡಿ ರಾಮನ ದರ್ಶನ ಪಡೆಯುತ್ತಿದ್ದಾರೆ. ದಿನನಿತ್ಯ ಬೇರೆ ಬೇರೆ ಕಡಗಳಿಂದ ಭಕ್ತರು ಭೇಟಿ ನೀಡುತ್ತಿದ್ದಾರೆ. ರಾಮಮಂದಿರದಲ್ಲಿ (Ayodhya Ram Mandir) ರಾಮಲ್ಲಾನ ಪ್ರಾಣಪ್ರತಿಷ್ಠಾಪನೆ ಆದಾಗಿಂದ ಇಲ್ಲಿಯವರೆಗೆ ಸುಮಾರು ಒಂದೂವರೆ ಕೊಟಿ ಜನ ಭೇಟಿ ನೀಡಿದ್ದಾರೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮಾಹಿತಿ ನೀಡಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿದಿನ ಒಂದು ಲಕ್ಷಕ್ಕೂ ಹೆಚ್ಚು ಜನರು ರಾಮಲಲ್ಲಾನ ದರ್ಶನ ಪಡೆಯಲು ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಪ್ರಾಣ ಪ್ರತಿಷ್ಠಾಪನೆ ಮಾಡಿದ ಬಳಿಕ ಸುಮಾರು 1.5 ಕೋಟಿ ಜನರು ರಾಮಲಲ್ಲಾನ ದರ್ಶನಕ್ಕೆ ಬಂದಿದ್ದಾರೆ ಎಂದರು.
ಮಹರ್ಷಿ ವಾಲ್ಮೀಕಿ, ಮಹರ್ಷಿ ವಶಿಷ್ಠ, ಮಹರ್ಷಿ ವಿಶ್ವಾಮಿತ್ರ ಮತ್ತು ಮಹರ್ಷಿ ಅಗಸ್ತ್ಯರನ್ನೂ ನಿರ್ಮಿಸಲಾಗುವುದು. ನಿಶಾದ್ ರಾಜ್, ಮಾ ಶಬರಿ, ಮಾ ಅಹಲ್ಯಾ ಮತ್ತು ಜಟಾಯು ದೇಗುಲಗಳನ್ನು ಕೂಡ ನಿರ್ಮಿಸಲಾಗುವುದು. ದೇವಾಲಯವು ಏಕಕಾಲದಲ್ಲಿ 25,000 ಯಾತ್ರಾರ್ಥಿಗಳಿಗೆ ಅವಕಾಶ ಕಲ್ಪಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಇಲ್ಲಿನ ಮರಗಳು ಮತ್ತು ಗಿಡಗಳನ್ನು ಸಂರಕ್ಷಿಸಲಾಗಿದೆ. 600 ಗಿಡಗಳು ಆವರಣದಲ್ಲಿದ್ದು, ರಕ್ಷಿಸಲಾಗಿದೆ. ನೀರು ಸಂಸ್ಕರಣಾ ಘಟಕ ಮತ್ತು ಒಳಚರಂಡಿ ಸಂಸ್ಕರಣಾ ಘಟಕವೂ ಇದೆ ಎಂದು ಚಂಪತ್ ರಾಯ್ ಹೇಳಿದರು.
ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮ ಮಂದಿರದಲ್ಲಿ ಮಂಗಳವಾರ ಮೊದಲ ರಾಮನವಮಿಯನ್ನು ಆಚರಿಸಲಾಯಿತು. ಈ ಸಮಯದಲ್ಲಿ ದೇಗುಲವನ್ನು ಸುಮಾರು 19 ಗಂಟೆಗಳ ಕಾಲ ತೆರೆಯಲಾಗಿತ್ತು. ಅಲ್ಲದೇ ವೈಜ್ಞಾನಿಕ ತಂತ್ರಗಳನ್ನು ಬಳಸಿಕೊಂಡು ರಾಮ ಲಲ್ಲಾನ ವಿಗ್ರಹದ ಹಣೆಯ ಮೇಲೆ ಸೂರ್ಯ ತಿಲಕವನ್ನು ಸಹ ಪ್ರದರ್ಶಿಸಲಾಯಿತು ಎಂದು ವಿವರಿಸಿದರು.
ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…
ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…
ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…
ಉತ್ತರ ಪ್ರದೇಶದಲ್ಲಿ ಅಡಿಕೆ ವ್ಯಾಪಾರದ ಮೇಲೆ ವಿಧಿಸಲಾಗುತ್ತಿರುವ ಮಂಡಿ ತೆರಿಗೆಯನ್ನು ರದ್ದುಗೊಳಿಸುವಂತೆ ಕ್ಯಾಂಪ್ಕೊ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ…
ಬೆಂಗಳೂರು ಫ್ರೀಡಂ ಪಾರ್ಕ್ನಲ್ಲಿ ಜೂನ್ 14 ರಂದು "ಸ್ಟೂಡೆಂಟ್ಸ್ ಫಾರ್ಮರ್ಸ್ ವಾಕಥಾನ್ "…