Advertisement
ಸುದ್ದಿಗಳು

ಅಯೋಧ್ಯೆಗೆ ಹರಿದು ಬರುತ್ತಿರುವ ಭಕ್ತರ ದಂಡು | ರಾಮನ ದರ್ಶನ ಪಡೆದ 1.5 ಕೋಟಿ ಜನ – ಚಂಪತ್‌ ರಾಯ್‌

Share

ಅಯೋಧ್ಯೆಯಲ್ಲಿ(Ayodhya) ರಾಮಲಲ್ಲಾನ(Ram Mandir) ಪ್ರತಿಷ್ಠೆಯಾದ ನಂತರ ದೇಶವಲ್ಲದೆ ವಿದೇಶಗಳಿಂದಲೂ(Foreign) ಸಾವಿರಾರು ಭಕ್ತರು(Devotee) ರಾಮ ಮಂದಿರಕ್ಕೆ ಭೇಟಿ ನೀಡಿ ರಾಮನ ದರ್ಶನ ಪಡೆಯುತ್ತಿದ್ದಾರೆ. ದಿನನಿತ್ಯ ಬೇರೆ ಬೇರೆ ಕಡಗಳಿಂದ ಭಕ್ತರು ಭೇಟಿ ನೀಡುತ್ತಿದ್ದಾರೆ. ರಾಮಮಂದಿರದಲ್ಲಿ (Ayodhya Ram Mandir) ರಾಮಲ್ಲಾನ ಪ್ರಾಣಪ್ರತಿಷ್ಠಾಪನೆ ಆದಾಗಿಂದ ಇಲ್ಲಿಯವರೆಗೆ ಸುಮಾರು ಒಂದೂವರೆ ಕೊಟಿ ಜನ ಭೇಟಿ ನೀಡಿದ್ದಾರೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮಾಹಿತಿ ನೀಡಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿದಿನ ಒಂದು ಲಕ್ಷಕ್ಕೂ ಹೆಚ್ಚು ಜನರು ರಾಮಲಲ್ಲಾನ ದರ್ಶನ ಪಡೆಯಲು ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಪ್ರಾಣ ಪ್ರತಿಷ್ಠಾಪನೆ ಮಾಡಿದ ಬಳಿಕ ಸುಮಾರು 1.5 ಕೋಟಿ ಜನರು ರಾಮಲಲ್ಲಾನ ದರ್ಶನಕ್ಕೆ ಬಂದಿದ್ದಾರೆ ಎಂದರು.

ಮಹರ್ಷಿ ವಾಲ್ಮೀಕಿ, ಮಹರ್ಷಿ ವಶಿಷ್ಠ, ಮಹರ್ಷಿ ವಿಶ್ವಾಮಿತ್ರ ಮತ್ತು ಮಹರ್ಷಿ ಅಗಸ್ತ್ಯರನ್ನೂ ನಿರ್ಮಿಸಲಾಗುವುದು. ನಿಶಾದ್ ರಾಜ್, ಮಾ ಶಬರಿ, ಮಾ ಅಹಲ್ಯಾ ಮತ್ತು ಜಟಾಯು ದೇಗುಲಗಳನ್ನು ಕೂಡ ನಿರ್ಮಿಸಲಾಗುವುದು. ದೇವಾಲಯವು ಏಕಕಾಲದಲ್ಲಿ 25,000 ಯಾತ್ರಾರ್ಥಿಗಳಿಗೆ ಅವಕಾಶ ಕಲ್ಪಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಇಲ್ಲಿನ ಮರಗಳು ಮತ್ತು ಗಿಡಗಳನ್ನು ಸಂರಕ್ಷಿಸಲಾಗಿದೆ. 600 ಗಿಡಗಳು ಆವರಣದಲ್ಲಿದ್ದು, ರಕ್ಷಿಸಲಾಗಿದೆ. ನೀರು ಸಂಸ್ಕರಣಾ ಘಟಕ ಮತ್ತು ಒಳಚರಂಡಿ ಸಂಸ್ಕರಣಾ ಘಟಕವೂ ಇದೆ ಎಂದು ಚಂಪತ್ ರಾಯ್ ಹೇಳಿದರು.

ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮ ಮಂದಿರದಲ್ಲಿ ಮಂಗಳವಾರ ಮೊದಲ ರಾಮನವಮಿಯನ್ನು ಆಚರಿಸಲಾಯಿತು. ಈ ಸಮಯದಲ್ಲಿ ದೇಗುಲವನ್ನು ಸುಮಾರು 19 ಗಂಟೆಗಳ ಕಾಲ ತೆರೆಯಲಾಗಿತ್ತು. ಅಲ್ಲದೇ ವೈಜ್ಞಾನಿಕ ತಂತ್ರಗಳನ್ನು ಬಳಸಿಕೊಂಡು ರಾಮ ಲಲ್ಲಾನ ವಿಗ್ರಹದ ಹಣೆಯ ಮೇಲೆ ಸೂರ್ಯ ತಿಲಕವನ್ನು ಸಹ ಪ್ರದರ್ಶಿಸಲಾಯಿತು ಎಂದು ವಿವರಿಸಿದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

9 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

16 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

16 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

24 hours ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

2 days ago