Advertisement
Opinion

ಮುಂಜಾನೆಯ ಹಿತಾನುಭವ ನೀಡುವ ಧನು ಪೂಜೆ

Share

ಸ್ನೇಹ ಶಾಲೆಯ ಸೂರ್ಯಾಲಯದ ಮುಕ್ತಪರಿಸರದಲ್ಲಿ ಡಿಸೆಂಬರ್ 15 ರಿಂದ ನಿರಂತರವಾಗಿ ಬೆಳಿಗ್ಗೆ 5.30 ರಿಂದ ಧನು ಪೂಜೆ ನಡೆಯುತ್ತಿದೆ. ಇದು ಪತ್ರಂ, ಪುಷ್ಪಂ, ಫಲಂ ತೋಯಂ ಎಂಬ ನಿಸರ್ಗದ ವಸ್ತುಗಳನ್ನೇ ಆರಾಧನೆಗೆ ಉಪಯೋಗಿಸಿ ಮಾಡುವ ಸರಳ ಪೂಜೆ. ಗ್ರಹಗಳಿಗೆ ಪ್ರದಕ್ಷಿಣೆ, ಸೂರ್ಯನಮಸ್ಕಾರ, ಸರಳ ಯೋಗಾಸನಗಳು, ಸೂರ್ಯಾಷ್ಟಕ, ಅಥರ್ವಶೀರ್ಷ, ರಾಮರಕ್ಷಾ ಹೇಳಿ ಮಂಗಳಾರತಿ ಮಾಡಿದಲ್ಲಿಗೆ ಪೂಜೆ ಸಮಾಪ್ತವಾಗುತ್ತದೆ. ಈ ಆರಾಧನೆಯು ಇದೇ ಜನವರಿ 14 ಮಕರ ಸಂಕ್ರಮಣದ ಆಚರಣೆಯೊಂದಿಗೆ ಮುಕ್ತಾಯವಾಗಲಿದೆ. ಆಸಕ್ತರು ಬೆಳಿಗ್ಗೆ 5.30 ಕ್ಕೇ ಬಂದರೆ 6.15 ರೊಳಗೆ ಹಿಂದಿರುಗಬಹುದು. ಯೋಗಾಸನಗಳನ್ನು ಮಾಡುವವರಿಗೆ ಸೂರ್ಯಾಲಯವು ತೆರೆದಿರುತ್ತದೆ. ಆಸಕ್ತರಿಗೆ ಸ್ವಾಗತವಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಡಾ.ಚಂದ್ರಶೇಖರ ದಾಮ್ಲೆ

ಡಾ. ಚಂದ್ರಶೇಖರ ದಾಮ್ಲೆಯವರು ಸುಳ್ಯದ ನೆಹರು ಮೆಮೋರಿಯಲ್ ಕಾಲೇಜ್ ನಲ್ಲಿ ಸಮಾಜಶಾಸ್ತ್ರ ಪ್ರಾಧ್ಯಾಪಕರಾಗಿ 35 ವರ್ಷಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದವರು. ವೃತ್ತಿಯಲ್ಲಿರುವಾಗಲೇ ರಾಷ್ಟ್ರೀಯ ಸೇವಾ ಯೋಜನಾಧಿಕಾರಿಯಾಗಿ ಸಮಾಜಸೇವೆಯಲ್ಲಿ ತೊಡಗಿಕೊಂಡವರು. ಸಾಂಸ್ಕೃತಿಕ ಸಂಘದ ಮೂಲಕ ಮಕ್ಕಳಿಗೆ ಯಕ್ಷಗಾನ ನಿರ್ದೇಶಕನ, ಸುಳ್ಯದಲ್ಲಿ ಯಕ್ಷಗಾನ ಹಿತರಕ್ಷಣಾ ವೇದಿಕೆಯ ಸ್ಥಾಪನೆ, ಸಂಪೂರ್ಣ ಸಾಕ್ಷರತಾ ಆಂದೋಲನದಲ್ಲಿ ಸಂಪನ್ಮೂಲ ವ್ಯಕ್ತಿ, ಕನ್ನಡಮಾಧ್ಯಮದಲ್ಲಿ ಸ್ನೇಹ ಶಿಕ್ಷಣ ಸಂಸ್ಥೆಯ ಸ್ಥಾಪನೆ ಮುಂತಾದ ಸಮಾಜಮುಖಿ ಕಾರ್ಯಗಳಲ್ಲಿ ಸೇವೆ ನೀಡಿದವರು. ಶಿಕ್ಷಣದಲ್ಲಿ ಸೃಜನಶೀಲತೆಗೆ ಒತ್ತು ನೀಡುವ ದಾಮ್ಲೆಯವರು ಸಂಶೋಧಕರಾಗಿದ್ದು ಕನ್ನಡ ಇಂಗ್ಲಿಷ್ ಭಾಷೆಗಳಲ್ಲಿ ಕೃತಿ ರಚನೆ ಮಾಡಿದವರು. 'ನೆಲದನಂಟು' ಮತ್ತು "ಶಾಲೆ ಎಲ್ಲಿದೆ?" ಇವು ಇವರ ಪ್ರಸಿದ್ಧ ಕಾದಂಬರಿಗಳು. ಅನೇಕ ಪ್ರಶಸ್ತಿ ಸಮ್ಮಾನಗಳಿಂದ ಗೌರವಿಸಲ್ಪಟ್ಟ ದಾಮ್ಲೆಯವರಿಗೆ ಅಸಾಮಾನ್ಯ ಕನ್ನಡಿಗ ಪ್ರಶಸ್ತಿ, ಯಕ್ಷಮಂಗಳ ಪ್ರಶಸ್ತಿ, ಅರಣ್ಯಮಿತ್ರ ಮತ್ತು ಜಲಮಿತ್ರ ಪ್ರಶಸ್ತಿ, Nation Builder ಪ್ರಶಸ್ತಿ ಮುಂತಾದುವು ಲಭಿಸಿವೆ. ಹೊಸದಿಗಂತ ಪತ್ರಿಕೆಯಲ್ಲಿ "ಇದ್ಯಾಕೆ ಹೀಗೆ " ಅಂಕಣವನ್ನು ಬರೆಯುತ್ತಿದ್ದರು.

Published by
ಡಾ.ಚಂದ್ರಶೇಖರ ದಾಮ್ಲೆ

Recent Posts

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

19 hours ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

19 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

23 hours ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

24 hours ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

24 hours ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

2 days ago