Advertisement
Opinion

ಮುಂಜಾನೆಯ ಹಿತಾನುಭವ ನೀಡುವ ಧನು ಪೂಜೆ

Share

ಸ್ನೇಹ ಶಾಲೆಯ ಸೂರ್ಯಾಲಯದ ಮುಕ್ತಪರಿಸರದಲ್ಲಿ ಡಿಸೆಂಬರ್ 15 ರಿಂದ ನಿರಂತರವಾಗಿ ಬೆಳಿಗ್ಗೆ 5.30 ರಿಂದ ಧನು ಪೂಜೆ ನಡೆಯುತ್ತಿದೆ. ಇದು ಪತ್ರಂ, ಪುಷ್ಪಂ, ಫಲಂ ತೋಯಂ ಎಂಬ ನಿಸರ್ಗದ ವಸ್ತುಗಳನ್ನೇ ಆರಾಧನೆಗೆ ಉಪಯೋಗಿಸಿ ಮಾಡುವ ಸರಳ ಪೂಜೆ. ಗ್ರಹಗಳಿಗೆ ಪ್ರದಕ್ಷಿಣೆ, ಸೂರ್ಯನಮಸ್ಕಾರ, ಸರಳ ಯೋಗಾಸನಗಳು, ಸೂರ್ಯಾಷ್ಟಕ, ಅಥರ್ವಶೀರ್ಷ, ರಾಮರಕ್ಷಾ ಹೇಳಿ ಮಂಗಳಾರತಿ ಮಾಡಿದಲ್ಲಿಗೆ ಪೂಜೆ ಸಮಾಪ್ತವಾಗುತ್ತದೆ. ಈ ಆರಾಧನೆಯು ಇದೇ ಜನವರಿ 14 ಮಕರ ಸಂಕ್ರಮಣದ ಆಚರಣೆಯೊಂದಿಗೆ ಮುಕ್ತಾಯವಾಗಲಿದೆ. ಆಸಕ್ತರು ಬೆಳಿಗ್ಗೆ 5.30 ಕ್ಕೇ ಬಂದರೆ 6.15 ರೊಳಗೆ ಹಿಂದಿರುಗಬಹುದು. ಯೋಗಾಸನಗಳನ್ನು ಮಾಡುವವರಿಗೆ ಸೂರ್ಯಾಲಯವು ತೆರೆದಿರುತ್ತದೆ. ಆಸಕ್ತರಿಗೆ ಸ್ವಾಗತವಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಡಾ.ಚಂದ್ರಶೇಖರ ದಾಮ್ಲೆ

ಡಾ. ಚಂದ್ರಶೇಖರ ದಾಮ್ಲೆಯವರು ಸುಳ್ಯದ ನೆಹರು ಮೆಮೋರಿಯಲ್ ಕಾಲೇಜ್ ನಲ್ಲಿ ಸಮಾಜಶಾಸ್ತ್ರ ಪ್ರಾಧ್ಯಾಪಕರಾಗಿ 35 ವರ್ಷಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದವರು. ವೃತ್ತಿಯಲ್ಲಿರುವಾಗಲೇ ರಾಷ್ಟ್ರೀಯ ಸೇವಾ ಯೋಜನಾಧಿಕಾರಿಯಾಗಿ ಸಮಾಜಸೇವೆಯಲ್ಲಿ ತೊಡಗಿಕೊಂಡವರು. ಸಾಂಸ್ಕೃತಿಕ ಸಂಘದ ಮೂಲಕ ಮಕ್ಕಳಿಗೆ ಯಕ್ಷಗಾನ ನಿರ್ದೇಶಕನ, ಸುಳ್ಯದಲ್ಲಿ ಯಕ್ಷಗಾನ ಹಿತರಕ್ಷಣಾ ವೇದಿಕೆಯ ಸ್ಥಾಪನೆ, ಸಂಪೂರ್ಣ ಸಾಕ್ಷರತಾ ಆಂದೋಲನದಲ್ಲಿ ಸಂಪನ್ಮೂಲ ವ್ಯಕ್ತಿ, ಕನ್ನಡಮಾಧ್ಯಮದಲ್ಲಿ ಸ್ನೇಹ ಶಿಕ್ಷಣ ಸಂಸ್ಥೆಯ ಸ್ಥಾಪನೆ ಮುಂತಾದ ಸಮಾಜಮುಖಿ ಕಾರ್ಯಗಳಲ್ಲಿ ಸೇವೆ ನೀಡಿದವರು. ಶಿಕ್ಷಣದಲ್ಲಿ ಸೃಜನಶೀಲತೆಗೆ ಒತ್ತು ನೀಡುವ ದಾಮ್ಲೆಯವರು ಸಂಶೋಧಕರಾಗಿದ್ದು ಕನ್ನಡ ಇಂಗ್ಲಿಷ್ ಭಾಷೆಗಳಲ್ಲಿ ಕೃತಿ ರಚನೆ ಮಾಡಿದವರು. 'ನೆಲದನಂಟು' ಮತ್ತು "ಶಾಲೆ ಎಲ್ಲಿದೆ?" ಇವು ಇವರ ಪ್ರಸಿದ್ಧ ಕಾದಂಬರಿಗಳು. ಅನೇಕ ಪ್ರಶಸ್ತಿ ಸಮ್ಮಾನಗಳಿಂದ ಗೌರವಿಸಲ್ಪಟ್ಟ ದಾಮ್ಲೆಯವರಿಗೆ ಅಸಾಮಾನ್ಯ ಕನ್ನಡಿಗ ಪ್ರಶಸ್ತಿ, ಯಕ್ಷಮಂಗಳ ಪ್ರಶಸ್ತಿ, ಅರಣ್ಯಮಿತ್ರ ಮತ್ತು ಜಲಮಿತ್ರ ಪ್ರಶಸ್ತಿ, Nation Builder ಪ್ರಶಸ್ತಿ ಮುಂತಾದುವು ಲಭಿಸಿವೆ. ಹೊಸದಿಗಂತ ಪತ್ರಿಕೆಯಲ್ಲಿ "ಇದ್ಯಾಕೆ ಹೀಗೆ " ಅಂಕಣವನ್ನು ಬರೆಯುತ್ತಿದ್ದರು.

Published by
ಡಾ.ಚಂದ್ರಶೇಖರ ದಾಮ್ಲೆ

Recent Posts

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

6 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

12 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

12 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

1 day ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

1 day ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

2 days ago