ದೇಲಂಪಾಡಿ: ಗಡಿನಾಡ ಗ್ರಾಮೀಣ ಭಾಗದಲ್ಲಿ ‘ಧರ್ಮಸಿಂಧು’ ಪ್ರತಿಷ್ಠಾನ ಬ್ರಹ್ಮಶ್ರೀ ವಾಸುದೇವ ತಂತ್ರಿ ಕುಂಟಾರು ಇವರ ಆಶಿರ್ವಚನದೊಂದಿಗೆ ಶ್ರೀ ರಾಮ ಭಜನಾ ಮಂದಿರ ದೇಲಂಪಾಡಿಯಲ್ಲಿ ಉದ್ಘಾಟನೆಗೊಂಡಿತು.
ಕಾರ್ಯಕ್ರಮವು ಸುಮಂಗಲೆಯರಿಂದ ಗೋಪೂಜೆಯಿಂದ ಪ್ರಾರಂಭವಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಶಿವರಾಮ ಕಲ್ಲೂರಾಯ ವಹಿಸಿದ್ದರು. ರವಿಕುಮಾರ್ ಬಂದ್ಯಡ್ಕ ಉಪಸ್ಥಿತರಿದ್ದರು. ಈ ಸಂದರ್ಭ 2021ರ ಕೇರಳ ರಾಜ್ಯ ಅಧ್ಯಾಪಕ ಪುರಸ್ಕೃತರಾದ ನಾರಾಯಣ ಮಾಸ್ಟರ್ ದೇಲಂಪಾಡಿ ಇವರನ್ನು ಅಭಿನಂದಿಸಲಾಯಿತು.
ಧರ್ಮಸಿಂಧು ಪ್ರತಿಷ್ಠಾನದ ಅಧ್ಯಕ್ಷರಾಗಿ ಪದ್ಮನಾಭ ರಾವ್ ಮಯ್ಯಾಳ,ಉಪಾಧ್ಯಕ್ಷರಾಗಿ ಗಣೇಶ್ ದೇಲಂಪಾಡಿ, ಕಾರ್ಯದರ್ಶಿ ಅಜಿತ್ ಮೆಣಸಿನಕಾನ, ಜತೆ ಕಾರ್ಯದರ್ಶಿ ವಿಕ್ರಾಂತ್ ಮಯ್ಯಾಳ, ಖಜಾಂಜಿ ಧನಂಜಯ ಬೆಳ್ಳಿಪ್ಪಾಡಿ, ಸಂಚಾಲಕರಾಗಿ ಚಂದ್ರಶೇಖರ ನೂಜಿಬೆಟ್ಟು, ನಿರ್ದೇಶಕರಾಗಿ ವಸಂತ ಅಡ್ಡಂತ್ತಡ್ಕ, ಬಾಲಕೃಷ್ಣ ಮಯ್ಯಾಳ, ಸಂಪತ್ ಊಜಂಪಾಡಿ, ಕೌಶಿಕ್ ಬೆಳ್ಳಿಪ್ಪಾಡಿ, ಅಭಿಷೇಕ್ ದೇಲಂಪಾಡಿ ಆಯ್ಕೆಯಾಗಿದ್ದಾರೆ.
ವಿಕ್ರಾಂತ್ ಮಯ್ಯಾಳ ಸ್ವಾಗತಿಸಿ, ಪದ್ಮನಾಭ ಮಯ್ಯಾಳ ಪ್ರಾಸ್ತಾವಿಕ ಮಾತನಾಡಿ ಪ್ರತಿಷ್ಠಾನದ ಮುಂದಿನ ಯೋಜನೆ ಮುಷ್ಠಿ ಬಿಕ್ಷಾಭಿಯಾನ ಲಕ್ಷವೃಕ್ಷ ಅಭಿಯಾನ ಇತ್ಯಾದಿಗಳ ಬಗ್ಗೆ ಮಾಹಿತಿ ನೀಡಿದರು. ಧನಂಜಯ ಬೆಳ್ಳಿಪ್ಪಾಡಿ ವಂದಿಸಿದರು. ಚಂದ್ರಶೇಖರ ನೂಜಿಬೆಟ್ಟು ನಿರೂಪಿಸಿದರು.
ಅಡಿಕೆ ನಿಷೇಧಕ್ಕಿಂತ ಬಳಕೆಯ ನಿಯಂತ್ರಣವೇ ಪರಿಣಾಮಕಾರಿ ಎಂದು WHO ಅಭಿಪ್ರಾಯಪಟ್ಟಿದೆ. ಆಗ್ನೇಯ ಏಷ್ಯಾದ…
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…