ದೇಲಂಪಾಡಿ: ಗಡಿನಾಡ ಗ್ರಾಮೀಣ ಭಾಗದಲ್ಲಿ ‘ಧರ್ಮಸಿಂಧು’ ಪ್ರತಿಷ್ಠಾನ ಬ್ರಹ್ಮಶ್ರೀ ವಾಸುದೇವ ತಂತ್ರಿ ಕುಂಟಾರು ಇವರ ಆಶಿರ್ವಚನದೊಂದಿಗೆ ಶ್ರೀ ರಾಮ ಭಜನಾ ಮಂದಿರ ದೇಲಂಪಾಡಿಯಲ್ಲಿ ಉದ್ಘಾಟನೆಗೊಂಡಿತು.
ಕಾರ್ಯಕ್ರಮವು ಸುಮಂಗಲೆಯರಿಂದ ಗೋಪೂಜೆಯಿಂದ ಪ್ರಾರಂಭವಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಶಿವರಾಮ ಕಲ್ಲೂರಾಯ ವಹಿಸಿದ್ದರು. ರವಿಕುಮಾರ್ ಬಂದ್ಯಡ್ಕ ಉಪಸ್ಥಿತರಿದ್ದರು. ಈ ಸಂದರ್ಭ 2021ರ ಕೇರಳ ರಾಜ್ಯ ಅಧ್ಯಾಪಕ ಪುರಸ್ಕೃತರಾದ ನಾರಾಯಣ ಮಾಸ್ಟರ್ ದೇಲಂಪಾಡಿ ಇವರನ್ನು ಅಭಿನಂದಿಸಲಾಯಿತು.
ಧರ್ಮಸಿಂಧು ಪ್ರತಿಷ್ಠಾನದ ಅಧ್ಯಕ್ಷರಾಗಿ ಪದ್ಮನಾಭ ರಾವ್ ಮಯ್ಯಾಳ,ಉಪಾಧ್ಯಕ್ಷರಾಗಿ ಗಣೇಶ್ ದೇಲಂಪಾಡಿ, ಕಾರ್ಯದರ್ಶಿ ಅಜಿತ್ ಮೆಣಸಿನಕಾನ, ಜತೆ ಕಾರ್ಯದರ್ಶಿ ವಿಕ್ರಾಂತ್ ಮಯ್ಯಾಳ, ಖಜಾಂಜಿ ಧನಂಜಯ ಬೆಳ್ಳಿಪ್ಪಾಡಿ, ಸಂಚಾಲಕರಾಗಿ ಚಂದ್ರಶೇಖರ ನೂಜಿಬೆಟ್ಟು, ನಿರ್ದೇಶಕರಾಗಿ ವಸಂತ ಅಡ್ಡಂತ್ತಡ್ಕ, ಬಾಲಕೃಷ್ಣ ಮಯ್ಯಾಳ, ಸಂಪತ್ ಊಜಂಪಾಡಿ, ಕೌಶಿಕ್ ಬೆಳ್ಳಿಪ್ಪಾಡಿ, ಅಭಿಷೇಕ್ ದೇಲಂಪಾಡಿ ಆಯ್ಕೆಯಾಗಿದ್ದಾರೆ.
ವಿಕ್ರಾಂತ್ ಮಯ್ಯಾಳ ಸ್ವಾಗತಿಸಿ, ಪದ್ಮನಾಭ ಮಯ್ಯಾಳ ಪ್ರಾಸ್ತಾವಿಕ ಮಾತನಾಡಿ ಪ್ರತಿಷ್ಠಾನದ ಮುಂದಿನ ಯೋಜನೆ ಮುಷ್ಠಿ ಬಿಕ್ಷಾಭಿಯಾನ ಲಕ್ಷವೃಕ್ಷ ಅಭಿಯಾನ ಇತ್ಯಾದಿಗಳ ಬಗ್ಗೆ ಮಾಹಿತಿ ನೀಡಿದರು. ಧನಂಜಯ ಬೆಳ್ಳಿಪ್ಪಾಡಿ ವಂದಿಸಿದರು. ಚಂದ್ರಶೇಖರ ನೂಜಿಬೆಟ್ಟು ನಿರೂಪಿಸಿದರು.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…