ದೇಲಂಪಾಡಿ: ಗಡಿನಾಡ ಗ್ರಾಮೀಣ ಭಾಗದಲ್ಲಿ ‘ಧರ್ಮಸಿಂಧು’ ಪ್ರತಿಷ್ಠಾನ ಬ್ರಹ್ಮಶ್ರೀ ವಾಸುದೇವ ತಂತ್ರಿ ಕುಂಟಾರು ಇವರ ಆಶಿರ್ವಚನದೊಂದಿಗೆ ಶ್ರೀ ರಾಮ ಭಜನಾ ಮಂದಿರ ದೇಲಂಪಾಡಿಯಲ್ಲಿ ಉದ್ಘಾಟನೆಗೊಂಡಿತು.
ಕಾರ್ಯಕ್ರಮವು ಸುಮಂಗಲೆಯರಿಂದ ಗೋಪೂಜೆಯಿಂದ ಪ್ರಾರಂಭವಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಶಿವರಾಮ ಕಲ್ಲೂರಾಯ ವಹಿಸಿದ್ದರು. ರವಿಕುಮಾರ್ ಬಂದ್ಯಡ್ಕ ಉಪಸ್ಥಿತರಿದ್ದರು. ಈ ಸಂದರ್ಭ 2021ರ ಕೇರಳ ರಾಜ್ಯ ಅಧ್ಯಾಪಕ ಪುರಸ್ಕೃತರಾದ ನಾರಾಯಣ ಮಾಸ್ಟರ್ ದೇಲಂಪಾಡಿ ಇವರನ್ನು ಅಭಿನಂದಿಸಲಾಯಿತು.
ಧರ್ಮಸಿಂಧು ಪ್ರತಿಷ್ಠಾನದ ಅಧ್ಯಕ್ಷರಾಗಿ ಪದ್ಮನಾಭ ರಾವ್ ಮಯ್ಯಾಳ,ಉಪಾಧ್ಯಕ್ಷರಾಗಿ ಗಣೇಶ್ ದೇಲಂಪಾಡಿ, ಕಾರ್ಯದರ್ಶಿ ಅಜಿತ್ ಮೆಣಸಿನಕಾನ, ಜತೆ ಕಾರ್ಯದರ್ಶಿ ವಿಕ್ರಾಂತ್ ಮಯ್ಯಾಳ, ಖಜಾಂಜಿ ಧನಂಜಯ ಬೆಳ್ಳಿಪ್ಪಾಡಿ, ಸಂಚಾಲಕರಾಗಿ ಚಂದ್ರಶೇಖರ ನೂಜಿಬೆಟ್ಟು, ನಿರ್ದೇಶಕರಾಗಿ ವಸಂತ ಅಡ್ಡಂತ್ತಡ್ಕ, ಬಾಲಕೃಷ್ಣ ಮಯ್ಯಾಳ, ಸಂಪತ್ ಊಜಂಪಾಡಿ, ಕೌಶಿಕ್ ಬೆಳ್ಳಿಪ್ಪಾಡಿ, ಅಭಿಷೇಕ್ ದೇಲಂಪಾಡಿ ಆಯ್ಕೆಯಾಗಿದ್ದಾರೆ.
ವಿಕ್ರಾಂತ್ ಮಯ್ಯಾಳ ಸ್ವಾಗತಿಸಿ, ಪದ್ಮನಾಭ ಮಯ್ಯಾಳ ಪ್ರಾಸ್ತಾವಿಕ ಮಾತನಾಡಿ ಪ್ರತಿಷ್ಠಾನದ ಮುಂದಿನ ಯೋಜನೆ ಮುಷ್ಠಿ ಬಿಕ್ಷಾಭಿಯಾನ ಲಕ್ಷವೃಕ್ಷ ಅಭಿಯಾನ ಇತ್ಯಾದಿಗಳ ಬಗ್ಗೆ ಮಾಹಿತಿ ನೀಡಿದರು. ಧನಂಜಯ ಬೆಳ್ಳಿಪ್ಪಾಡಿ ವಂದಿಸಿದರು. ಚಂದ್ರಶೇಖರ ನೂಜಿಬೆಟ್ಟು ನಿರೂಪಿಸಿದರು.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…