ದೇಲಂಪಾಡಿ: ಗಡಿನಾಡ ಗ್ರಾಮೀಣ ಭಾಗದಲ್ಲಿ ‘ಧರ್ಮಸಿಂಧು’ ಪ್ರತಿಷ್ಠಾನ ಬ್ರಹ್ಮಶ್ರೀ ವಾಸುದೇವ ತಂತ್ರಿ ಕುಂಟಾರು ಇವರ ಆಶಿರ್ವಚನದೊಂದಿಗೆ ಶ್ರೀ ರಾಮ ಭಜನಾ ಮಂದಿರ ದೇಲಂಪಾಡಿಯಲ್ಲಿ ಉದ್ಘಾಟನೆಗೊಂಡಿತು.
ಕಾರ್ಯಕ್ರಮವು ಸುಮಂಗಲೆಯರಿಂದ ಗೋಪೂಜೆಯಿಂದ ಪ್ರಾರಂಭವಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಶಿವರಾಮ ಕಲ್ಲೂರಾಯ ವಹಿಸಿದ್ದರು. ರವಿಕುಮಾರ್ ಬಂದ್ಯಡ್ಕ ಉಪಸ್ಥಿತರಿದ್ದರು. ಈ ಸಂದರ್ಭ 2021ರ ಕೇರಳ ರಾಜ್ಯ ಅಧ್ಯಾಪಕ ಪುರಸ್ಕೃತರಾದ ನಾರಾಯಣ ಮಾಸ್ಟರ್ ದೇಲಂಪಾಡಿ ಇವರನ್ನು ಅಭಿನಂದಿಸಲಾಯಿತು.
ಧರ್ಮಸಿಂಧು ಪ್ರತಿಷ್ಠಾನದ ಅಧ್ಯಕ್ಷರಾಗಿ ಪದ್ಮನಾಭ ರಾವ್ ಮಯ್ಯಾಳ,ಉಪಾಧ್ಯಕ್ಷರಾಗಿ ಗಣೇಶ್ ದೇಲಂಪಾಡಿ, ಕಾರ್ಯದರ್ಶಿ ಅಜಿತ್ ಮೆಣಸಿನಕಾನ, ಜತೆ ಕಾರ್ಯದರ್ಶಿ ವಿಕ್ರಾಂತ್ ಮಯ್ಯಾಳ, ಖಜಾಂಜಿ ಧನಂಜಯ ಬೆಳ್ಳಿಪ್ಪಾಡಿ, ಸಂಚಾಲಕರಾಗಿ ಚಂದ್ರಶೇಖರ ನೂಜಿಬೆಟ್ಟು, ನಿರ್ದೇಶಕರಾಗಿ ವಸಂತ ಅಡ್ಡಂತ್ತಡ್ಕ, ಬಾಲಕೃಷ್ಣ ಮಯ್ಯಾಳ, ಸಂಪತ್ ಊಜಂಪಾಡಿ, ಕೌಶಿಕ್ ಬೆಳ್ಳಿಪ್ಪಾಡಿ, ಅಭಿಷೇಕ್ ದೇಲಂಪಾಡಿ ಆಯ್ಕೆಯಾಗಿದ್ದಾರೆ.
ವಿಕ್ರಾಂತ್ ಮಯ್ಯಾಳ ಸ್ವಾಗತಿಸಿ, ಪದ್ಮನಾಭ ಮಯ್ಯಾಳ ಪ್ರಾಸ್ತಾವಿಕ ಮಾತನಾಡಿ ಪ್ರತಿಷ್ಠಾನದ ಮುಂದಿನ ಯೋಜನೆ ಮುಷ್ಠಿ ಬಿಕ್ಷಾಭಿಯಾನ ಲಕ್ಷವೃಕ್ಷ ಅಭಿಯಾನ ಇತ್ಯಾದಿಗಳ ಬಗ್ಗೆ ಮಾಹಿತಿ ನೀಡಿದರು. ಧನಂಜಯ ಬೆಳ್ಳಿಪ್ಪಾಡಿ ವಂದಿಸಿದರು. ಚಂದ್ರಶೇಖರ ನೂಜಿಬೆಟ್ಟು ನಿರೂಪಿಸಿದರು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…