” ವಾತ್ಸಲ್ಯ” ಕಾರ್ಯಕ್ರಮದಡಿಯಲ್ಲಿ ನಿರ್ಗತಿಕರಿಗೆ ವಸತಿ ಹಾಗೂ ಜೀವನಾವಶ್ಯಕ ಸೌಲಭ್ಯಗಳನ್ನುಒದಗಿಸಲಾಗುವುದು. ಈಗಾಗಲೇ 10,400 ನಿರ್ಗತಿಕ ಕುಟುಂಬಗಳನ್ನುಗುರುತಿಸಿದ್ದು 2 ಕೋಟಿ ರೂಪಾಯಿ ವಿನಿಯೋಗಿಸಲಾಗುವುದು.
ರಾಜ್ಯದಲ್ಲಿ 150 ಕೆರೆಗಳಿಗೆ ಕಾಯಕಲ್ಪನೀಡಲು 10 ಕೋಟಿ ರೂಪಾಯಿ ಮೀಸಲಿಡಲಾಗಿದೆ.
ಬೆಂಗಳೂರಿನ ನೆಲಮಂಗಲದಲ್ಲಿ ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ನಿರ್ಮಾಣ ಕಾಮಗಾರಿ ಮುಕ್ತಾಯ ಹಂತದಲ್ಲಿದ್ದು ಸದ್ಯದಲ್ಲಿಯೇ ಆರೋಗ್ಯ ಸೇವೆಯನ್ನು ಪ್ರಾರಂಭಿಸಲಾಗುವುದು ಎಂದು ಅವರು ತಿಳಿಸಿದರು . ಧರ್ಮೋತ್ಥಾನ ಟ್ರಸ್ಟ್ಆ ಶ್ರಯದಲ್ಲಿ ರಾಜ್ಯದಲ್ಲಿ 250 ಕ್ಕೂ ಮಿಕ್ಕಿ ಪ್ರಾಚೀನ ದೇವಾಲಯಗಳನ್ನು ಜೀರ್ಣೋದ್ಧಾರಗೊಳಿಸಲಾಗಿದೆ. ಕಳೆದ ಒಂದು ವರ್ಷದಲ್ಲಿ 1135 ದೇವಾಲಯಗಳ ನಿರ್ಮಾಣಕ್ಕಾಗಿ 14 ಕೋಟಿ ರೂಪಾಯಿ ನೆರವು ನೀಡಲಾಗಿದೆ. ಧರ್ಮಸ್ಥಳದಲ್ಲಿಒಂದುತಿಂಗಳು 30 ಕಲಾವಿದರಿಂದ ಕಾಲ ಮಿತಿ ಯಕ್ಷಗಾನ ಪ್ರದರ್ಶನ ಆಯೋಜಿಸಲಾಗಿದೆ. ಲಕ್ಷದೀಪೋತ್ಸವದ ಬಳಿಕ ಮೇಳದ ಕಲಾವಿದರು ಸೇವೆ ಬಯಲಾಟ ಪ್ರದರ್ಶನ ನೀಡುವರು.
ಅಭಿನಂದನಾ ಭಾಷಣ ಮಾಡಿದ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಕೆ.ಚಿನ್ನಪ್ಪಗೌಡ ಮಾತನಾಡಿ ದೈವಿಕ ಮತ್ತು ಸಾಮಾಜಿಕ ಶಕ್ತಿಯನ್ನು ಬಳಸಿಕೊಂಡು ಅಂತರಂಗ ಮತ್ತು ಬಹಿರಂಗ ಶುದ್ದಿಯೊಂದಿಗೆ ಸತ್ಯ, ಧರ್ಮದ ಹಾದಿಯಲ್ಲಿ ನಡೆದ ವೀರೇಂದ್ರ ಹೆಗ್ಗಡೆಯವರು ಅನೇಕ ಕ್ಷೇತ್ರಗಳಲ್ಲಿ ಅನುಪಮ ಸೇವೆ ಸಲ್ಲಿಸಿದ್ದಾರೆ. ರಾಜ್ಯದಲ್ಲೆಡೆ ಧರ್ಮಸ್ಥಳದ ಮಾದರಿ ಸೇವಾ ಕಾರ್ಯಗಳು ಅನುಷ್ಠಾನಗೊಂಡು ಎಲ್ಲಾ ಊರುಗಳಲ್ಲಿ ಧರ್ಮಸ್ಥಳದ ಪ್ರಭಾವವನ್ನು ಕಾಣಬಹುದು ಎಂದರು.
ಹಿರಿಯ ನೌಕರರಾದ ಹರಿನಾರಾಯಣ ನೂರಿತ್ತಾಯ (ಪ್ರಧಾನಅರ್ಚಕರು), ಕೃಷ್ಣಕುಮಾರ್ಶೆಟ್ಟಿ (ಹಣ್ಣುಕಾಯಿವಿಭಾಗ) ಮತ್ತು ಶಂಕರಶೆಟ್ಟಿ (ವಸತಿವಿಭಾಗ) ಅವರನ್ನು ಹೆಗ್ಗಡೆಯವರು ಸನ್ಮಾನಿಸಿದರು.
ಹೇಮಾವತಿವಿ.ಹೆಗ್ಗಡೆ, ಡಿ.ಸುರೇಂದ್ರಕುಮಾರ್, ಡಿ.ಹರ್ಷೇಂದ್ರ ಕುಮಾರ್ ಹಾಗೂ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ ಉಪಸ್ಥಿತರಿದ್ದರು.
ರಾಜ್ಯದ ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…
ಜಲಾನಯನ ಯಾತ್ರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸಲಿದ್ದು, ನೀರು ನಿರ್ವಹಣೆ ಬಗ್ಗೆ…
15 ರಾಜ್ಯಗಳಲ್ಲಿ 2 ಸಾವಿರದ 590 ಮೊಬೈಲ್ ಸಂಪರ್ಕರಹಿತ ಗ್ರಾಮಗಳನ್ನು ಗುರುತಿಸಲಾಗಿದೆ. ಈ…
ಗದಗ ಜಿಲ್ಲೆಯ ಮುಂಡರಗಿ ಮತ್ತು ಶಿರಹಟ್ಟಿ ತಾಲೂಕಿನ ಸುಮಾರು 33 ಸಾವಿರ ಹೆಕ್ಟೇರ್…
ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…
ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…