ರಾಜ್ಯ

8 ಸಾವಿರ ಎಕರೆ ಪ್ರದೇಶದಲ್ಲಿ ಕೃಷಿ ಕಾಯಕಲ್ಪ – ಡಾ. ಡಿ. ವೀರೇಂದ್ರ ಹೆಗ್ಗಡೆ ನಿರ್ಧಾರ

Share
ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 53 ನೇ ವರ್ಷದ ವರ್ಧಂತಿ ಆಚರಣೆ ಧರ್ಮಸ್ಥಳದಲ್ಲಿ ಮಹೋತ್ಸವ ಸಭಾಭವನದಲ್ಲಿ ಶನಿವಾರ  ನಡೆಯಿತು. ಈ ಸಂದರ್ಭ  ಕೃಷಿ ಚಟುವಟಿಕೆ ಬೆಳೆಸಲು ಯೋಜನೆ ಹಾಕಿಕೊಂಡಿರುವ ಡಾ.ವೀರೇಂದ್ರ ಹೆಗ್ಗಡೆ ಅವರು  15 ಕೋಟಿ ರೂಪಾಯಿ ವೆಚ್ಚದಲ್ಲಿ “ಯಂತ್ರಶ್ರೀ” ಯೋಜನೆಯಡಿ ಕೃಷಿಕರಿಗಾಗಿ ಯಂತ್ರಗಳನ್ನು ಖರೀದಿಸಿ ಕೃಷಿಗೆ ಪ್ರೋತ್ಸಾಹ ನೀಡಿ  8 ಸಾವಿರ ಎಕರೆ ಪ್ರದೇಶದಲ್ಲಿ ಕೃಷಿಗೆ ಕಾಯಕಲ್ಪ ನೀಡಲಾಗುವುದು ಎಂದು ಘೋಷಿಸಿದರು.

” ವಾತ್ಸಲ್ಯ” ಕಾರ್ಯಕ್ರಮದಡಿಯಲ್ಲಿ ನಿರ್ಗತಿಕರಿಗೆ ವಸತಿ ಹಾಗೂ ಜೀವನಾವಶ್ಯಕ ಸೌಲಭ್ಯಗಳನ್ನುಒದಗಿಸಲಾಗುವುದು. ಈಗಾಗಲೇ 10,400 ನಿರ್ಗತಿಕ ಕುಟುಂಬಗಳನ್ನುಗುರುತಿಸಿದ್ದು 2 ಕೋಟಿ ರೂಪಾಯಿ ವಿನಿಯೋಗಿಸಲಾಗುವುದು.
ರಾಜ್ಯದಲ್ಲಿ 150 ಕೆರೆಗಳಿಗೆ ಕಾಯಕಲ್ಪನೀಡಲು 10 ಕೋಟಿ ರೂಪಾಯಿ ಮೀಸಲಿಡಲಾಗಿದೆ.

ಬೆಂಗಳೂರಿನ ನೆಲಮಂಗಲದಲ್ಲಿ ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ನಿರ್ಮಾಣ ಕಾಮಗಾರಿ ಮುಕ್ತಾಯ ಹಂತದಲ್ಲಿದ್ದು ಸದ್ಯದಲ್ಲಿಯೇ ಆರೋಗ್ಯ ಸೇವೆಯನ್ನು ಪ್ರಾರಂಭಿಸಲಾಗುವುದು ಎಂದು ಅವರು ತಿಳಿಸಿದರು . ಧರ್ಮೋತ್ಥಾನ ಟ್ರಸ್ಟ್ಆ ಶ್ರಯದಲ್ಲಿ ರಾಜ್ಯದಲ್ಲಿ 250 ಕ್ಕೂ ಮಿಕ್ಕಿ ಪ್ರಾಚೀನ ದೇವಾಲಯಗಳನ್ನು ಜೀರ್ಣೋದ್ಧಾರಗೊಳಿಸಲಾಗಿದೆ. ಕಳೆದ ಒಂದು ವರ್ಷದಲ್ಲಿ 1135 ದೇವಾಲಯಗಳ ನಿರ್ಮಾಣಕ್ಕಾಗಿ 14 ಕೋಟಿ ರೂಪಾಯಿ ನೆರವು ನೀಡಲಾಗಿದೆ. ಧರ್ಮಸ್ಥಳದಲ್ಲಿಒಂದುತಿಂಗಳು 30 ಕಲಾವಿದರಿಂದ ಕಾಲ ಮಿತಿ ಯಕ್ಷಗಾನ ಪ್ರದರ್ಶನ ಆಯೋಜಿಸಲಾಗಿದೆ. ಲಕ್ಷದೀಪೋತ್ಸವದ ಬಳಿಕ ಮೇಳದ ಕಲಾವಿದರು ಸೇವೆ ಬಯಲಾಟ ಪ್ರದರ್ಶನ ನೀಡುವರು.

ಅಭಿನಂದನಾ ಭಾಷಣ ಮಾಡಿದ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಕೆ.ಚಿನ್ನಪ್ಪಗೌಡ ಮಾತನಾಡಿ ದೈವಿಕ ಮತ್ತು ಸಾಮಾಜಿಕ ಶಕ್ತಿಯನ್ನು ಬಳಸಿಕೊಂಡು ಅಂತರಂಗ ಮತ್ತು ಬಹಿರಂಗ ಶುದ್ದಿಯೊಂದಿಗೆ ಸತ್ಯ, ಧರ್ಮದ ಹಾದಿಯಲ್ಲಿ ನಡೆದ ವೀರೇಂದ್ರ ಹೆಗ್ಗಡೆಯವರು ಅನೇಕ ಕ್ಷೇತ್ರಗಳಲ್ಲಿ ಅನುಪಮ ಸೇವೆ ಸಲ್ಲಿಸಿದ್ದಾರೆ. ರಾಜ್ಯದಲ್ಲೆಡೆ ಧರ್ಮಸ್ಥಳದ ಮಾದರಿ ಸೇವಾ ಕಾರ್ಯಗಳು ಅನುಷ್ಠಾನಗೊಂಡು ಎಲ್ಲಾ ಊರುಗಳಲ್ಲಿ ಧರ್ಮಸ್ಥಳದ ಪ್ರಭಾವವನ್ನು ಕಾಣಬಹುದು ಎಂದರು.

ಹಿರಿಯ ನೌಕರರಾದ ಹರಿನಾರಾಯಣ ನೂರಿತ್ತಾಯ (ಪ್ರಧಾನಅರ್ಚಕರು), ಕೃಷ್ಣಕುಮಾರ್ಶೆಟ್ಟಿ (ಹಣ್ಣುಕಾಯಿವಿಭಾಗ) ಮತ್ತು ಶಂಕರಶೆಟ್ಟಿ (ವಸತಿವಿಭಾಗ) ಅವರನ್ನು ಹೆಗ್ಗಡೆಯವರು ಸನ್ಮಾನಿಸಿದರು.

ಹೇಮಾವತಿವಿ.ಹೆಗ್ಗಡೆ,  ಡಿ.ಸುರೇಂದ್ರಕುಮಾರ್, ಡಿ.ಹರ್ಷೇಂದ್ರ ಕುಮಾರ್‌ ಹಾಗೂ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ ಉಪಸ್ಥಿತರಿದ್ದರು.

 

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-03-2025 | ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ | ಮಾ.25 ರ ನಂತರ ವಿವಿದೆಡೆ ಮಳೆ ಸಾಧ್ಯತೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ, ಬೆಳ್ತಂಗಡಿ ಸುತ್ತಮುತ್ತ ಭಾಗಗಳಲ್ಲಿ, ಕೊಡಗು ಜಿಲ್ಲೆಯ…

4 hours ago

ಹವಾಮಾನ ವರದಿ | 17-03-2025 | ಕೆಲವೆಡೆ ತುಂತುರು ಮಳೆ ನಿರೀಕ್ಷೆ | ಮಾರ್ಚ್ ಕೊನೆಯ ವಾರದಲ್ಲಿ ಮಳೆ ಆರಂಭವಾಗುವ ಲಕ್ಷಣ |

ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಾರ್ಚ್…

1 day ago

ಸುನಿತಾ ವಿಲಿಯಮ್ಸ್ ಈ ಸಮಾಜಕ್ಕೆ ಸ್ಫೂರ್ತಿ ಏಕೆ…?

ಸಣ್ಣಪುಟ್ಟ ಸಮಸ್ಯೆಗಳಿಗೆ, ಮುಂದೆ ಆಗಬಹುದಾದ ಅನೇಕ ಸಾಧ್ಯತೆಗಳ ಊಹಾತ್ಮಕ ಘಟನೆಗಳಿಗೆ, ಇನ್ನೂ ಅನೇಕ…

1 day ago

ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |

ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…

1 day ago

ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಪೋಷಕರನ್ನು ಬಿಟ್ಟು ಮಕ್ಕಳು ನಾಪತ್ತೆ…!

ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…

1 day ago

ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್

ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…

1 day ago