Advertisement
ರಾಜ್ಯ

8 ಸಾವಿರ ಎಕರೆ ಪ್ರದೇಶದಲ್ಲಿ ಕೃಷಿ ಕಾಯಕಲ್ಪ – ಡಾ. ಡಿ. ವೀರೇಂದ್ರ ಹೆಗ್ಗಡೆ ನಿರ್ಧಾರ

Share
ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 53 ನೇ ವರ್ಷದ ವರ್ಧಂತಿ ಆಚರಣೆ ಧರ್ಮಸ್ಥಳದಲ್ಲಿ ಮಹೋತ್ಸವ ಸಭಾಭವನದಲ್ಲಿ ಶನಿವಾರ  ನಡೆಯಿತು. ಈ ಸಂದರ್ಭ  ಕೃಷಿ ಚಟುವಟಿಕೆ ಬೆಳೆಸಲು ಯೋಜನೆ ಹಾಕಿಕೊಂಡಿರುವ ಡಾ.ವೀರೇಂದ್ರ ಹೆಗ್ಗಡೆ ಅವರು  15 ಕೋಟಿ ರೂಪಾಯಿ ವೆಚ್ಚದಲ್ಲಿ “ಯಂತ್ರಶ್ರೀ” ಯೋಜನೆಯಡಿ ಕೃಷಿಕರಿಗಾಗಿ ಯಂತ್ರಗಳನ್ನು ಖರೀದಿಸಿ ಕೃಷಿಗೆ ಪ್ರೋತ್ಸಾಹ ನೀಡಿ  8 ಸಾವಿರ ಎಕರೆ ಪ್ರದೇಶದಲ್ಲಿ ಕೃಷಿಗೆ ಕಾಯಕಲ್ಪ ನೀಡಲಾಗುವುದು ಎಂದು ಘೋಷಿಸಿದರು.

” ವಾತ್ಸಲ್ಯ” ಕಾರ್ಯಕ್ರಮದಡಿಯಲ್ಲಿ ನಿರ್ಗತಿಕರಿಗೆ ವಸತಿ ಹಾಗೂ ಜೀವನಾವಶ್ಯಕ ಸೌಲಭ್ಯಗಳನ್ನುಒದಗಿಸಲಾಗುವುದು. ಈಗಾಗಲೇ 10,400 ನಿರ್ಗತಿಕ ಕುಟುಂಬಗಳನ್ನುಗುರುತಿಸಿದ್ದು 2 ಕೋಟಿ ರೂಪಾಯಿ ವಿನಿಯೋಗಿಸಲಾಗುವುದು.
ರಾಜ್ಯದಲ್ಲಿ 150 ಕೆರೆಗಳಿಗೆ ಕಾಯಕಲ್ಪನೀಡಲು 10 ಕೋಟಿ ರೂಪಾಯಿ ಮೀಸಲಿಡಲಾಗಿದೆ.

Advertisement
Advertisement

ಬೆಂಗಳೂರಿನ ನೆಲಮಂಗಲದಲ್ಲಿ ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ನಿರ್ಮಾಣ ಕಾಮಗಾರಿ ಮುಕ್ತಾಯ ಹಂತದಲ್ಲಿದ್ದು ಸದ್ಯದಲ್ಲಿಯೇ ಆರೋಗ್ಯ ಸೇವೆಯನ್ನು ಪ್ರಾರಂಭಿಸಲಾಗುವುದು ಎಂದು ಅವರು ತಿಳಿಸಿದರು . ಧರ್ಮೋತ್ಥಾನ ಟ್ರಸ್ಟ್ಆ ಶ್ರಯದಲ್ಲಿ ರಾಜ್ಯದಲ್ಲಿ 250 ಕ್ಕೂ ಮಿಕ್ಕಿ ಪ್ರಾಚೀನ ದೇವಾಲಯಗಳನ್ನು ಜೀರ್ಣೋದ್ಧಾರಗೊಳಿಸಲಾಗಿದೆ. ಕಳೆದ ಒಂದು ವರ್ಷದಲ್ಲಿ 1135 ದೇವಾಲಯಗಳ ನಿರ್ಮಾಣಕ್ಕಾಗಿ 14 ಕೋಟಿ ರೂಪಾಯಿ ನೆರವು ನೀಡಲಾಗಿದೆ. ಧರ್ಮಸ್ಥಳದಲ್ಲಿಒಂದುತಿಂಗಳು 30 ಕಲಾವಿದರಿಂದ ಕಾಲ ಮಿತಿ ಯಕ್ಷಗಾನ ಪ್ರದರ್ಶನ ಆಯೋಜಿಸಲಾಗಿದೆ. ಲಕ್ಷದೀಪೋತ್ಸವದ ಬಳಿಕ ಮೇಳದ ಕಲಾವಿದರು ಸೇವೆ ಬಯಲಾಟ ಪ್ರದರ್ಶನ ನೀಡುವರು.

ಅಭಿನಂದನಾ ಭಾಷಣ ಮಾಡಿದ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಕೆ.ಚಿನ್ನಪ್ಪಗೌಡ ಮಾತನಾಡಿ ದೈವಿಕ ಮತ್ತು ಸಾಮಾಜಿಕ ಶಕ್ತಿಯನ್ನು ಬಳಸಿಕೊಂಡು ಅಂತರಂಗ ಮತ್ತು ಬಹಿರಂಗ ಶುದ್ದಿಯೊಂದಿಗೆ ಸತ್ಯ, ಧರ್ಮದ ಹಾದಿಯಲ್ಲಿ ನಡೆದ ವೀರೇಂದ್ರ ಹೆಗ್ಗಡೆಯವರು ಅನೇಕ ಕ್ಷೇತ್ರಗಳಲ್ಲಿ ಅನುಪಮ ಸೇವೆ ಸಲ್ಲಿಸಿದ್ದಾರೆ. ರಾಜ್ಯದಲ್ಲೆಡೆ ಧರ್ಮಸ್ಥಳದ ಮಾದರಿ ಸೇವಾ ಕಾರ್ಯಗಳು ಅನುಷ್ಠಾನಗೊಂಡು ಎಲ್ಲಾ ಊರುಗಳಲ್ಲಿ ಧರ್ಮಸ್ಥಳದ ಪ್ರಭಾವವನ್ನು ಕಾಣಬಹುದು ಎಂದರು.

ಹಿರಿಯ ನೌಕರರಾದ ಹರಿನಾರಾಯಣ ನೂರಿತ್ತಾಯ (ಪ್ರಧಾನಅರ್ಚಕರು), ಕೃಷ್ಣಕುಮಾರ್ಶೆಟ್ಟಿ (ಹಣ್ಣುಕಾಯಿವಿಭಾಗ) ಮತ್ತು ಶಂಕರಶೆಟ್ಟಿ (ವಸತಿವಿಭಾಗ) ಅವರನ್ನು ಹೆಗ್ಗಡೆಯವರು ಸನ್ಮಾನಿಸಿದರು.

ಹೇಮಾವತಿವಿ.ಹೆಗ್ಗಡೆ,  ಡಿ.ಸುರೇಂದ್ರಕುಮಾರ್, ಡಿ.ಹರ್ಷೇಂದ್ರ ಕುಮಾರ್‌ ಹಾಗೂ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ ಉಪಸ್ಥಿತರಿದ್ದರು.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

27 minutes ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

33 minutes ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

41 minutes ago

ಮಾಯಾಮೃಗ ಮಾಯಾಮೃಗ….

ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…

1 hour ago

ಬೇಸಿಗೆ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ  ಅಗತ್ಯ ಕ್ರಮ…

1 hour ago

ಅಂಕಗಳಾಚೆಗೂ ಒಂದು ಲೋಕವಿದೆ : ಇದು ಮಕ್ಕಳಿಗೆ ಬದುಕನ್ನು ಕಲಿಸುವ ಶಿಕ್ಷಣ

ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?.  ಈ ಪ್ರಶ್ನೆಗೆ ಹಲವರದು ಹಲವು…

11 hours ago