Advertisement
ರಾಜ್ಯ

8 ಸಾವಿರ ಎಕರೆ ಪ್ರದೇಶದಲ್ಲಿ ಕೃಷಿ ಕಾಯಕಲ್ಪ – ಡಾ. ಡಿ. ವೀರೇಂದ್ರ ಹೆಗ್ಗಡೆ ನಿರ್ಧಾರ

Share
ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 53 ನೇ ವರ್ಷದ ವರ್ಧಂತಿ ಆಚರಣೆ ಧರ್ಮಸ್ಥಳದಲ್ಲಿ ಮಹೋತ್ಸವ ಸಭಾಭವನದಲ್ಲಿ ಶನಿವಾರ  ನಡೆಯಿತು. ಈ ಸಂದರ್ಭ  ಕೃಷಿ ಚಟುವಟಿಕೆ ಬೆಳೆಸಲು ಯೋಜನೆ ಹಾಕಿಕೊಂಡಿರುವ ಡಾ.ವೀರೇಂದ್ರ ಹೆಗ್ಗಡೆ ಅವರು  15 ಕೋಟಿ ರೂಪಾಯಿ ವೆಚ್ಚದಲ್ಲಿ “ಯಂತ್ರಶ್ರೀ” ಯೋಜನೆಯಡಿ ಕೃಷಿಕರಿಗಾಗಿ ಯಂತ್ರಗಳನ್ನು ಖರೀದಿಸಿ ಕೃಷಿಗೆ ಪ್ರೋತ್ಸಾಹ ನೀಡಿ  8 ಸಾವಿರ ಎಕರೆ ಪ್ರದೇಶದಲ್ಲಿ ಕೃಷಿಗೆ ಕಾಯಕಲ್ಪ ನೀಡಲಾಗುವುದು ಎಂದು ಘೋಷಿಸಿದರು.

” ವಾತ್ಸಲ್ಯ” ಕಾರ್ಯಕ್ರಮದಡಿಯಲ್ಲಿ ನಿರ್ಗತಿಕರಿಗೆ ವಸತಿ ಹಾಗೂ ಜೀವನಾವಶ್ಯಕ ಸೌಲಭ್ಯಗಳನ್ನುಒದಗಿಸಲಾಗುವುದು. ಈಗಾಗಲೇ 10,400 ನಿರ್ಗತಿಕ ಕುಟುಂಬಗಳನ್ನುಗುರುತಿಸಿದ್ದು 2 ಕೋಟಿ ರೂಪಾಯಿ ವಿನಿಯೋಗಿಸಲಾಗುವುದು.
ರಾಜ್ಯದಲ್ಲಿ 150 ಕೆರೆಗಳಿಗೆ ಕಾಯಕಲ್ಪನೀಡಲು 10 ಕೋಟಿ ರೂಪಾಯಿ ಮೀಸಲಿಡಲಾಗಿದೆ.

ಬೆಂಗಳೂರಿನ ನೆಲಮಂಗಲದಲ್ಲಿ ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ನಿರ್ಮಾಣ ಕಾಮಗಾರಿ ಮುಕ್ತಾಯ ಹಂತದಲ್ಲಿದ್ದು ಸದ್ಯದಲ್ಲಿಯೇ ಆರೋಗ್ಯ ಸೇವೆಯನ್ನು ಪ್ರಾರಂಭಿಸಲಾಗುವುದು ಎಂದು ಅವರು ತಿಳಿಸಿದರು . ಧರ್ಮೋತ್ಥಾನ ಟ್ರಸ್ಟ್ಆ ಶ್ರಯದಲ್ಲಿ ರಾಜ್ಯದಲ್ಲಿ 250 ಕ್ಕೂ ಮಿಕ್ಕಿ ಪ್ರಾಚೀನ ದೇವಾಲಯಗಳನ್ನು ಜೀರ್ಣೋದ್ಧಾರಗೊಳಿಸಲಾಗಿದೆ. ಕಳೆದ ಒಂದು ವರ್ಷದಲ್ಲಿ 1135 ದೇವಾಲಯಗಳ ನಿರ್ಮಾಣಕ್ಕಾಗಿ 14 ಕೋಟಿ ರೂಪಾಯಿ ನೆರವು ನೀಡಲಾಗಿದೆ. ಧರ್ಮಸ್ಥಳದಲ್ಲಿಒಂದುತಿಂಗಳು 30 ಕಲಾವಿದರಿಂದ ಕಾಲ ಮಿತಿ ಯಕ್ಷಗಾನ ಪ್ರದರ್ಶನ ಆಯೋಜಿಸಲಾಗಿದೆ. ಲಕ್ಷದೀಪೋತ್ಸವದ ಬಳಿಕ ಮೇಳದ ಕಲಾವಿದರು ಸೇವೆ ಬಯಲಾಟ ಪ್ರದರ್ಶನ ನೀಡುವರು.

ಅಭಿನಂದನಾ ಭಾಷಣ ಮಾಡಿದ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಕೆ.ಚಿನ್ನಪ್ಪಗೌಡ ಮಾತನಾಡಿ ದೈವಿಕ ಮತ್ತು ಸಾಮಾಜಿಕ ಶಕ್ತಿಯನ್ನು ಬಳಸಿಕೊಂಡು ಅಂತರಂಗ ಮತ್ತು ಬಹಿರಂಗ ಶುದ್ದಿಯೊಂದಿಗೆ ಸತ್ಯ, ಧರ್ಮದ ಹಾದಿಯಲ್ಲಿ ನಡೆದ ವೀರೇಂದ್ರ ಹೆಗ್ಗಡೆಯವರು ಅನೇಕ ಕ್ಷೇತ್ರಗಳಲ್ಲಿ ಅನುಪಮ ಸೇವೆ ಸಲ್ಲಿಸಿದ್ದಾರೆ. ರಾಜ್ಯದಲ್ಲೆಡೆ ಧರ್ಮಸ್ಥಳದ ಮಾದರಿ ಸೇವಾ ಕಾರ್ಯಗಳು ಅನುಷ್ಠಾನಗೊಂಡು ಎಲ್ಲಾ ಊರುಗಳಲ್ಲಿ ಧರ್ಮಸ್ಥಳದ ಪ್ರಭಾವವನ್ನು ಕಾಣಬಹುದು ಎಂದರು.

ಹಿರಿಯ ನೌಕರರಾದ ಹರಿನಾರಾಯಣ ನೂರಿತ್ತಾಯ (ಪ್ರಧಾನಅರ್ಚಕರು), ಕೃಷ್ಣಕುಮಾರ್ಶೆಟ್ಟಿ (ಹಣ್ಣುಕಾಯಿವಿಭಾಗ) ಮತ್ತು ಶಂಕರಶೆಟ್ಟಿ (ವಸತಿವಿಭಾಗ) ಅವರನ್ನು ಹೆಗ್ಗಡೆಯವರು ಸನ್ಮಾನಿಸಿದರು.

ಹೇಮಾವತಿವಿ.ಹೆಗ್ಗಡೆ,  ಡಿ.ಸುರೇಂದ್ರಕುಮಾರ್, ಡಿ.ಹರ್ಷೇಂದ್ರ ಕುಮಾರ್‌ ಹಾಗೂ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ ಉಪಸ್ಥಿತರಿದ್ದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

3 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

22 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago