Advertisement
ರಾಜ್ಯ

ಧರ್ಮಸ್ಥಳದಲ್ಲಿ ಐವತ್ತನೇ ವರ್ಷದ ಉಚಿತ ಸಾಮೂಹಿಕ ವಿವಾಹ | 183 ಜೊತೆ ವಧೂ-ವರರು ಗೃಹಸ್ಥಾಶ್ರಮ ಪ್ರವೇಶ |

Share

 ನಾಡಿನ ಪವಿತ್ರಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರಐವತ್ತನೇ ವರ್ಷದಉಚಿತ ಸಾಮೂಹಿಕ ವಿವಾಹದ ಸಂಭ್ರಮ, ಸಡಗರ. ಸಂಜೆಗಂಟೆ 6.50 ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿಅಮೃತವರ್ಷಿಣಿ ಸಭಾಭವನದಲ್ಲಿ 183 ಜೊತೆ ವಧೂ-ವರರು ದಾಂಪತ್ಯಜೀವನಕ್ಕೆ ಪಾದಾರ್ಪಣೆ ಮಾಡಿದರು.

ಬೆಳಿಗ್ಗೆ ಹೆಗ್ಗಡೆಯವರ ನಿವಾಸದಲ್ಲಿ ವಧುವಿಗೆ ಸೀರೆ ಮತ್ತುರವಕೆ ಹಾಗೂ ವರನಿಗೆಧೋತಿ, ಶಾಲು ವಿತರಿಸಿದರು.
ಸಂಜೆ 5 ಗಂಟೆಗೆ ಭವ್ಯ ಮೆರವಣಿಗೆಯಲ್ಲಿ ವಧೂ-ವರರುದೇವಸ್ಥಾನಕ್ಕೆ ಪ್ರದಕ್ಷಿಣೆ ಬಂದುಅಮೃತವರ್ಷಿಣಿ ಸಭಾಭವನದಲ್ಲಿ ಮದುವೆ ಮಂಟಪಕ್ಕೆ ಪ್ರವೇಶಿಸಿದರು. ಅಲ್ಲಿ ಹೆಗ್ಗಡೆಯವರು ಮತ್ತುಗಣ್ಯ ಅತಿಥಿಗಳು ಮಂಗಳಸೂತ್ರ ವಿತರಿಸಿ ಶುಭ ಹಾರೈಸಿದರು. 6.50 ರ ಗೋಧೂಳಿ ಲಗ್ನ ಸುಮೂಹರ್ತದಲ್ಲಿ ವೇದಘೋಷ, ಮಂತ್ರ, ಪಠಣದೊಂದಿಗೆ ಮಂಗಳವಾದ್ಯಗಳ ನಿನಾದದೊಂದಿಗೆಜಾತಿವಾರು ಸಂಪ್ರದಾಯದಂತೆಧಾರ್ಮಿಕ ವಿಧಿ-ವಿಧಾನಗಳನ್ನು ನಡೆಸಿ ಮಂತ್ರಾಕ್ಷತೆ, ಹಾರ ವಿನಿಮಯ ಹಾಗೂ ಮಾಂಗಲ್ಯಧಾರಣೆಯೊಂದಿಗೆ ವಿವಾಹ ನೆರವೇರಿಸಲಾಯಿತು.

Advertisement

ನೂತನ ದಂಪತಿಗಳಿಂದ ಪ್ರತಿಜ್ಞಾ ವಿಧಿ: ಧರ್ಮಸ್ಥಳದಲ್ಲಿ ಇಂದು ಮಂಗಲ ಮುಹೂರ್ತದಲ್ಲಿ ವಧೂ-ವರರಾಗಿ ಪವಿತ್ರ ಬಾಂಧವ್ಯವನ್ನು ಹೊಂದಿರುವ ನಾವು ಮುಂದೆಜೀವನದುದ್ದಕ್ಕೂಧರ್ಮ, ಅರ್ಥ, ಕಾಮದಲ್ಲಿ ಸಹಚರರಾಗಿ, ಪರಸ್ಪರ ಪ್ರೀತಿ-ವಿಶ್ವಾಸದಿಂದಒಬ್ಬರಿಗೊಬ್ಬರು ವಂಚನೆ ಮಾಡದೆ ಹಾಗೂ ಯಾವುದೇ ದುರಭ್ಯಾಸಗಳಿಗೂ ತುತ್ತಾಗದೆ ಬದುಕುತ್ತೇವೆಎಂದು ಭಗವಾನ್ ಶ್ರೀ ಮಂಜುನಾಥ ಸ್ವಾಮಿಯ ದಿವ್ಯ ಸನ್ನಿಧಿಯಲ್ಲಿ ಮತ್ತು ಪೂಜ್ಯ ಹೆಗ್ಗಡೆಯವರ ಸಮಕ್ಷಮದಲ್ಲಿ ಪ್ರಮಾಣವಚನ ಮಾಡಿದರು.

ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಮಾತನಾಡಿ, ಬದುಕಿನಲ್ಲಿ ಆಸ್ತಿ, ಅಂತಸ್ತು ಮುಖ್ಯ ಅಲ್ಲ.ಪ್ರೀತಿ-ವಿಶ್ವಾಸವೇ ಮುಖ್ಯ. ಬಡತನ – ಸಿರಿತನ ಶಾಶ್ವತವಲ್ಲ. ಪ್ರೀತಿ-ವಿಶ್ವಾಸವಿಲ್ಲ್ಲದಿದ್ದರೆ ಬದುಕಿಗೆಅರ್ಥವಿಲ್ಲಎಂದು ಹೇಳಿದರು.

Advertisement

ಚಲನಚಿತ್ರ ನಟ ಗಣೇಶ್  ನೂತನ ದಂಪತಿಗಳಿಗೆ ಶುಭಕೋರಿದರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಆಶೀರ್ವದಿಸಿ, ಸಾಮೂಹಿಕ ವಿವಾಹ ಸರಳ ಜೀವನಕ್ಕೆ ನಾಂದಿಯಾಗಬೇಕು. ಮದುವೆಯ ಹೆಸರಿನಲ್ಲಿದುಂದು ವೆಚ್ಚ ಮಾಡಬಾರದು. ವಿವಾಹಕ್ಕಾಗಿ ಮಾಡುವದುಂದು ವೆಚ್ಚ, ವರದಕ್ಷಿಣೆ, ಜೀತಪದ್ಧತಿ ಮೊದಲಾದ ಸಮಸ್ಯೆಗಳನ್ನು ನಿವಾರಿಸಲಿಕ್ಕಾಗಿಸಾಮೂಹಿಕ ವಿವಾಹ ಯೋಜನೆಯನ್ನು ಧರ್ಮಸ್ಥಳದಲ್ಲಿ ಆರಂಭಿಸಲಾಯಿತು ಎಂದರು.

ಶಾಸಕರುಗಳಾದ ಕೃಷ್ಣಪ್ಪ ಮತ್ತು ಹರೀಶ್ ಪೂಂಜ, ಹೇಮಾವತಿ ವಿ. ಹೆಗ್ಗಡೆ, ಡಿ. ಸುರೇಂದ್ರಕುಮಾರ್, ಡಿ. ಹರ್ಷೇಂದ್ರಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರಕುಮಾರ್ ಉಪಸ್ಥಿತರಿದ್ದರು.

Advertisement

ಡಿ. ಹರ್ಷೇಂದ್ರಕುಮಾರ್ ಸ್ವಾಗತಿಸಿದರು. ಗಣೇಶ್‍ ಕಾಮತ್‍ ಧನ್ಯವಾದವಿತ್ತರು. ಬಾರಕೂರಿನ ದಾಮೋದರ ಶರ್ಮಾ ಕಾರ್ಯಕ್ರಮ ನಿರ್ವಹಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

17 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

19 hours ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

1 day ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

1 day ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

1 day ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

2 days ago