Advertisement
ರಾಜ್ಯ

ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ | ನೈತಿಕತೆ, ಸತ್ಯ, ಸಭ್ಯತೆ ಎತ್ತಿ ಹಿಡಿಯುವ ಕಾರ್ಯವಾಗಬೇಕಿದೆ | ಸಾಹಿತಿ ಎಸ್.ಎನ್. ಸೇತುರಾಮ್ |

Share

ಇಂದು ಎಲ್ಲೆಲ್ಲೂ ನೈತಿಕತೆ, ಸತ್ಯ, ಸಭ್ಯತೆ ಕುಸಿದಿದೆ. ಬದುಕುವುದು ನಮ್ಮ ಹಕ್ಕಲ್ಲ. ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ, ಪರಸ್ಪರ ಹೊಂದಿಕೊಂಡು ಗೌರವಪೂರ್ವಕವಾಗಿ ಕೃತಜ್ಞತೆಯೊಂದಿಗೆ ಸಾರ್ಥಕ ಜೀವನ ಮಾಡುವುದು ನಮ್ಮ ಉದ್ದೇಶವಾಗಬೇಕು. ಇದಕ್ಕಾಗಿ ಇಂದು ನೈತಿಕತೆ, ಸತ್ಯ, ಸಭ್ಯತೆಯನ್ನು ಎತ್ತಿ ಹಿಡಿಯುವ ಕೆಲಸ ಆಗಬೇಕಿದೆ ಎಂದು  ಬೆಂಗಳೂರಿನ ಹಿರಿಯ ಸಾಹಿತಿ ಎಸ್.ಎನ್. ಸೇತುರಾಮ್ ಹೇಳಿದರು.

ಅವರು ಧರ್ಮಸ್ಥಳದಲ್ಲಿ ಶಾಂತಿವನ ಟ್ರಸ್ಟ್ಆಶ್ರಯದಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯಲ್ಲಿ ಪ್ರಕಟಿಸಲಾದ “ಜ್ಞಾನ ವಿಕಾಸ” ಮತ್ತು “ಜ್ಞಾನ ಪ್ರಕಾಶ” ಪುಸ್ತಕಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು. ಸತ್ಯ, ಧರ್ಮ, ನ್ಯಾಯ, ನೀತಿ ನೆಲೆ ನಿಂತಿರುವ ಪವಿತ್ರ ಕ್ಷೇತ್ರ ಧರ್ಮಸ್ಥಳವಾಗಿದೆ. ಧರ್ಮ ಮತ್ತು ನ್ಯಾಯ, ರೀತಿ ಮತ್ತು ನೀತಿ ವಿಭಿನ್ನವಲ್ಲ. ಎಲ್ಲವೂ ಒಂದೇ ಆಗಿದೆ. ಆದರೆ ಕಾನೂನಿನಲ್ಲಿ ಧರ್ಮ ಮತ್ತು ನ್ಯಾಯ, ರೀತಿ ಮತ್ತು ನೀತಿ ಬೇರೆ ಬೇರೆಯಾಗಿದ್ದು, ಅನೈತಿಕತೆ ಅಪರಾಧ ಅಲ್ಲ ಎಂಬ ಭಾವನೆ ಈಗ ಮೂಡಿ ಬಂದಿದೆ. ಪರಸ್ಪರ ಪ್ರೀತಿ-ವಿಶ್ವಾಸದಿಂದ, ಕೃತಜ್ಞತೆ ಹಾಗೂ ಗೌರವದಿಂದ ಬದುಕುವ ಸಭ್ಯ, ಸುಸಂಸ್ಕೃತ ನಾಗರಿಕರು ಈ ದೇಶದ ಅಮೂಲ್ಯ ಮಾನವ ಸಂಪನ್ಮೂಲವಾಗಿದೆ ಎಂದು ಹೇಳಿದರು.

ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ನೀಡಿ ಅಭಿನಂದಿಸಿದ ಸಿನಿಮಾ ನಟ ಮಾಸ್ಟರ್‍ ಆನಂದ್ ಮಾತನಾಡಿ, ಧರ್ಮಸ್ಥಳದಂತಹ ಪವಿತ್ರ ಕ್ಷೇತ್ರಗಳ ದರ್ಶನದಿಂದ ನಮ್ಮ ವರ್ತನೆಯಲ್ಲಿ ಪರಿವರ್ತನೆಯಾಗಬೇಕು. ಈವರೆಗೆ ಮಾಡಿದ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಂಡು ಮುಂದೆ ಸಾರ್ಥಕಜೀವನ ನಡೆಸುವಂತಾಗಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳೆಸಿ, ಜ್ಞಾನ ಸಂಗ್ರಹದೊಂದಿಗೆ ವ್ಯಕ್ತಿತ್ವದ ಬೆಳವಣಿಗೆ ಹಾಗೂ ಪ್ರತಿಭಾ ವಿಕಸನ ಮಾಡಿಕೊಳ್ಳಬೇಕು ಎಂದು ಹೇಳಿದರು. ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತುಬಿಡ ಮಂಜುನಾಥ” ಎಂಬ ಮಾತು ಪ್ರಚಲಿತವಿದೆ. ಇಲ್ಲಿ ಮಾತೇ ಮಾಣಿಕ್ಯ. ಸತ್ಯ, ಧರ್ಮ, ನ್ಯಾಯ, ನೀತಿಯೊಂದಿಗೆಎಲ್ಲರೂ ಸಾರ್ಥಕಜೀವನ ನಡೆಸಬೇಕು ಎಂದು ಅವರು ಸಲಹೆ ನೀಡಿದರು.

ಶಿಕ್ಷಣ ಇಲಾಖೆಯ ಸಹನಿರ್ದೇೀಶಕಎಸ್.ಜಿ. ನಾಗೇಶ್, ಹೇಮಾವತಿ ವಿ. ಹೆಗ್ಗಡೆಯವರು ಮತ್ತು ಡಿ. ಹರ್ಷೇಂದ್ರಕುಮಾರ್ ಉಪಸ್ಥಿತರಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

12 hours ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

13 hours ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

21 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

1 day ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

2 days ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

2 days ago