Advertisement
ರಾಜ್ಯ

ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ | ನೈತಿಕತೆ, ಸತ್ಯ, ಸಭ್ಯತೆ ಎತ್ತಿ ಹಿಡಿಯುವ ಕಾರ್ಯವಾಗಬೇಕಿದೆ | ಸಾಹಿತಿ ಎಸ್.ಎನ್. ಸೇತುರಾಮ್ |

Share

ಇಂದು ಎಲ್ಲೆಲ್ಲೂ ನೈತಿಕತೆ, ಸತ್ಯ, ಸಭ್ಯತೆ ಕುಸಿದಿದೆ. ಬದುಕುವುದು ನಮ್ಮ ಹಕ್ಕಲ್ಲ. ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ, ಪರಸ್ಪರ ಹೊಂದಿಕೊಂಡು ಗೌರವಪೂರ್ವಕವಾಗಿ ಕೃತಜ್ಞತೆಯೊಂದಿಗೆ ಸಾರ್ಥಕ ಜೀವನ ಮಾಡುವುದು ನಮ್ಮ ಉದ್ದೇಶವಾಗಬೇಕು. ಇದಕ್ಕಾಗಿ ಇಂದು ನೈತಿಕತೆ, ಸತ್ಯ, ಸಭ್ಯತೆಯನ್ನು ಎತ್ತಿ ಹಿಡಿಯುವ ಕೆಲಸ ಆಗಬೇಕಿದೆ ಎಂದು  ಬೆಂಗಳೂರಿನ ಹಿರಿಯ ಸಾಹಿತಿ ಎಸ್.ಎನ್. ಸೇತುರಾಮ್ ಹೇಳಿದರು.

ಅವರು ಧರ್ಮಸ್ಥಳದಲ್ಲಿ ಶಾಂತಿವನ ಟ್ರಸ್ಟ್ಆಶ್ರಯದಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯಲ್ಲಿ ಪ್ರಕಟಿಸಲಾದ “ಜ್ಞಾನ ವಿಕಾಸ” ಮತ್ತು “ಜ್ಞಾನ ಪ್ರಕಾಶ” ಪುಸ್ತಕಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು. ಸತ್ಯ, ಧರ್ಮ, ನ್ಯಾಯ, ನೀತಿ ನೆಲೆ ನಿಂತಿರುವ ಪವಿತ್ರ ಕ್ಷೇತ್ರ ಧರ್ಮಸ್ಥಳವಾಗಿದೆ. ಧರ್ಮ ಮತ್ತು ನ್ಯಾಯ, ರೀತಿ ಮತ್ತು ನೀತಿ ವಿಭಿನ್ನವಲ್ಲ. ಎಲ್ಲವೂ ಒಂದೇ ಆಗಿದೆ. ಆದರೆ ಕಾನೂನಿನಲ್ಲಿ ಧರ್ಮ ಮತ್ತು ನ್ಯಾಯ, ರೀತಿ ಮತ್ತು ನೀತಿ ಬೇರೆ ಬೇರೆಯಾಗಿದ್ದು, ಅನೈತಿಕತೆ ಅಪರಾಧ ಅಲ್ಲ ಎಂಬ ಭಾವನೆ ಈಗ ಮೂಡಿ ಬಂದಿದೆ. ಪರಸ್ಪರ ಪ್ರೀತಿ-ವಿಶ್ವಾಸದಿಂದ, ಕೃತಜ್ಞತೆ ಹಾಗೂ ಗೌರವದಿಂದ ಬದುಕುವ ಸಭ್ಯ, ಸುಸಂಸ್ಕೃತ ನಾಗರಿಕರು ಈ ದೇಶದ ಅಮೂಲ್ಯ ಮಾನವ ಸಂಪನ್ಮೂಲವಾಗಿದೆ ಎಂದು ಹೇಳಿದರು.

ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ನೀಡಿ ಅಭಿನಂದಿಸಿದ ಸಿನಿಮಾ ನಟ ಮಾಸ್ಟರ್‍ ಆನಂದ್ ಮಾತನಾಡಿ, ಧರ್ಮಸ್ಥಳದಂತಹ ಪವಿತ್ರ ಕ್ಷೇತ್ರಗಳ ದರ್ಶನದಿಂದ ನಮ್ಮ ವರ್ತನೆಯಲ್ಲಿ ಪರಿವರ್ತನೆಯಾಗಬೇಕು. ಈವರೆಗೆ ಮಾಡಿದ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಂಡು ಮುಂದೆ ಸಾರ್ಥಕಜೀವನ ನಡೆಸುವಂತಾಗಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳೆಸಿ, ಜ್ಞಾನ ಸಂಗ್ರಹದೊಂದಿಗೆ ವ್ಯಕ್ತಿತ್ವದ ಬೆಳವಣಿಗೆ ಹಾಗೂ ಪ್ರತಿಭಾ ವಿಕಸನ ಮಾಡಿಕೊಳ್ಳಬೇಕು ಎಂದು ಹೇಳಿದರು. ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತುಬಿಡ ಮಂಜುನಾಥ” ಎಂಬ ಮಾತು ಪ್ರಚಲಿತವಿದೆ. ಇಲ್ಲಿ ಮಾತೇ ಮಾಣಿಕ್ಯ. ಸತ್ಯ, ಧರ್ಮ, ನ್ಯಾಯ, ನೀತಿಯೊಂದಿಗೆಎಲ್ಲರೂ ಸಾರ್ಥಕಜೀವನ ನಡೆಸಬೇಕು ಎಂದು ಅವರು ಸಲಹೆ ನೀಡಿದರು.

ಶಿಕ್ಷಣ ಇಲಾಖೆಯ ಸಹನಿರ್ದೇೀಶಕಎಸ್.ಜಿ. ನಾಗೇಶ್, ಹೇಮಾವತಿ ವಿ. ಹೆಗ್ಗಡೆಯವರು ಮತ್ತು ಡಿ. ಹರ್ಷೇಂದ್ರಕುಮಾರ್ ಉಪಸ್ಥಿತರಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

3 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

20 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

1 day ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

1 day ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

1 day ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago