Categories: Uncategorized

| ಪುರಾಣ ವಾಚನ – ಪ್ರವಚನದಿಂದ ಸುಖ-ಶಾಂತಿ, ನೆಮ್ಮದಿ | ಲಕ್ಷ್ಮೀನಾರಾಯಣ ಅಸ್ರಣ್ಣ ಅಭಿಮತ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಶ್ರದ್ಧಾ-ಭಕ್ತಿಯಿಂದ ಧರ್ಮದ ಮರ್ಮವನ್ನರಿತು, ಸಾತ್ವಿಕರಾಗಿ, ಸಭ್ಯ – ಸುಸಂಸ್ಕೃತ  ನಾಗರಿಕರಾಗಿ, ಸಹೃದಯವಂತರಾಗಿ ಸಾರ್ಥಕ ಜೀವನ ನಡೆಸಲು ಪುರಾಣ ವಾಚನ – ಪ್ರವಚನ ಪ್ರೇರಣೆ, ಮಾರ್ಗದರ್ಶನ ನೀಡುತ್ತದೆ ಎಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಲಕ್ಷ್ಮೀನಾರಾಯಣ ಅಸ್ರಣ್ಣರು ಹೇಳಿದರು.

Advertisement
Advertisement

ಅವರು ಭಾನುವಾರ ಧರ್ಮಸ್ಥಳದಲ್ಲಿ ಐವತ್ತೊಂದನೇ ವರ್ಷದ ಪುರಾಣಕಾವ್ಯ ವಾಚನ – ಪ್ರವಚನಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.  ಸಾಮಾನ್ಯವಾಗಿ ದೇವಸ್ಥಾನಗಳಲ್ಲಿ ನಿತ್ಯವೂಅಷ್ಟಾವಧಾನ ನಡೆಸುವ ಸಂಪ್ರದಾಯವಿದೆ. ಆದುದರಿಂದಎಲ್ಲಾ ತೀರ್ಥಕ್ಷೇತ್ರಗಳಲ್ಲಿಯೂ ಪುರಾಣ ವಾಚನ – ಪ್ರವಚನ ನಡೆಯಬೇಕುಎಂದುಅವರು ಸಲಹೆ ನೀಡಿದರು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ ಅವಿಭಕ್ತ ಕುಟುಂಬ ಪದ್ಧತಿಯಲ್ಲಿ ಹಿಂದೆ ಪ್ರತಿ ಮನೆಯಲ್ಲಿ ಪುರಾಣ ವಾಚನ ಮಾಡುವ ಸಂಪ್ರದಾಯವಿತ್ತು. ಆದರೆ, ಆಧುನಿಕ ಜೀವನ ಶೈಲಿ ಮತ್ತು ಕೆಲಸದ ಒತ್ತಡದಿಂದ ಸಂಪ್ರದಾಯವೆಲ್ಲ ಮರೆಯಾಗುತ್ತಿದೆ. ಪುರಾಣಗಳಲ್ಲಿ ನಮ್ಮ ಬದುಕಿನಎಲ್ಲಾ ಸಮಸ್ಯೆಗಳಿಗೆ, ಸವಾಲುಗಳಿಗೆ, ಸಾಂಸಾರಿಕ ತಾಪತ್ರಯಗಳಿಗೆ ಸೌಹಾರ್ದಯುತ ಪರಿಹಾರ ದೊರಕುತ್ತದೆ.  ಪುರಾಣ ವಾಚನ – ಪ್ರವಚನದ ಮೂಲಕ ಜ್ಞಾನ ಸಂಗ್ರಹ ಮಾಡಿ ಸಾಂಸಾರಿಕ ಸಮಸ್ಯೆಗಳಿಗೆ ಪರಿಹಾರ ಪಡೆದು ಶಾಂತಿ – ನೆಮ್ಮದಿಯ ಜೀವನ ನಡೆಸಬಹುದು ಎಂದು ಹೆಗ್ಗಡೆಯವರು ಸಲಹೆ ನೀಡಿದರು.

ಧರ್ಮಸ್ಥಳ ಯಕ್ಷಗಾನ ಮೇಳದ ನಿವೃತ್ತಕಲಾವಿದ ಕೆ. ಗೋವಿಂದ ಭಟ್ ಮಾತನಾಡಿ, ಧರ್ಮಸ್ಥಳಕ್ಕೆ ಭಕ್ತರು ಆರ್ತರಾಗಿ, ಜ್ಞಾನಿಗಳಾಗಿ, ಜಿಜ್ಞಾಸುಗಳಾಗಿ ಕುತೂಹಲದಿಂದತಮ್ಮ ಸಮಸ್ಯೆಗಳ ಪರಿಹಾರ ಹಾಗೂ ಶಾಂತಿ ಪಡೆಯಲು ಬರುತ್ತಾರೆ. ಅವರಿಗೆ ಬೇಕಾದ ಸಕಾಲಿಕ ಪರಿಹಾರ ಮತ್ತು ಮಾರ್ಗದರ್ಶನ ಹಾಗೂ ಸುಜ್ಞಾನದ ಬೆಳಕನ್ನು ನೀಡಿ ಸಾರ್ಥಕ ಬದುಕಿಗೆ ಪ್ರೋತ್ಸಾಹ ನೀಡಲಾಗುತ್ತದೆ ಎಂದು ಹೇಳಿದರು.

ಕಟೀಲು ಲಕ್ಷ್ಮೀನಾರಾಯಣಅಸ್ರಣ್ಣರು ಮತ್ತು ನಿವೃತ್ತಕಲಾವಿದ ಕೆ. ಗೋವಿಂದ ಭಟ್‍ಅವರನ್ನು ಹೆಗ್ಗಡೆಯವರು ಸನ್ಮಾನಿಸಿ ಗೌರವಿಸಿದರು.

Advertisement

ಹವ್ಯಾಸಿ ಯಕ್ಷಗಾನಕಲಾವಿದಉಜಿರೆ ಆಶೋಕ ಭಟ್ ಸ್ವಾಗತಿಸಿದರು. ಕಾರ್ಯಕ್ರಮ ನಿರ್ವಹಿಸಿದ ಶ್ರೀನಿವಾಸ ರಾವ್ ಧರ್ಮಸ್ಥಳ ವಂದಿಸಿದರು. ಸೆ. 17ರ ವರೆಗೆ ಪ್ರತಿದಿನ ಸಂಜೆಗಂಟೆ 6.30 ರಿಂದ 8.00 ರ ವರೆಗೆ ಪುರಾಣಕಾವ್ಯ ವಾಚನ – ಪ್ರವಚನ ನಡೆಯುತ್ತದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ

ರಾಮನಗರ ಜಿಲ್ಲೆಯಲ್ಲಿ  ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…

3 hours ago

ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ

ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…

3 hours ago

ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ

ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…

3 hours ago

ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ

ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ  ಪೂರೈಕೆಯಾಗಿದ್ದು,…

4 hours ago

ರಾಜ್ಯಕ್ಕೆ ಅಗತ್ಯ ರಸಗೊಬ್ಬರ ಪೂರೈಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ

ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…

4 hours ago

ಅಮರನಾಥ ಯಾತ್ರೆ ಮುಂದುವರಿಕೆ | 9, 482 ಯಾತ್ರಿಕರಿಂದ ಪೂಜೆ ಸಲ್ಲಿಕೆ | 3.52 ಲಕ್ಷ ತಲುಪಿದ ಭಕ್ತರ ಸಂಖ್ಯೆ

ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ  ಸುಮಾರು…

4 hours ago