Advertisement
Categories: Uncategorized

| ಪುರಾಣ ವಾಚನ – ಪ್ರವಚನದಿಂದ ಸುಖ-ಶಾಂತಿ, ನೆಮ್ಮದಿ | ಲಕ್ಷ್ಮೀನಾರಾಯಣ ಅಸ್ರಣ್ಣ ಅಭಿಮತ |

Share

ಶ್ರದ್ಧಾ-ಭಕ್ತಿಯಿಂದ ಧರ್ಮದ ಮರ್ಮವನ್ನರಿತು, ಸಾತ್ವಿಕರಾಗಿ, ಸಭ್ಯ – ಸುಸಂಸ್ಕೃತ  ನಾಗರಿಕರಾಗಿ, ಸಹೃದಯವಂತರಾಗಿ ಸಾರ್ಥಕ ಜೀವನ ನಡೆಸಲು ಪುರಾಣ ವಾಚನ – ಪ್ರವಚನ ಪ್ರೇರಣೆ, ಮಾರ್ಗದರ್ಶನ ನೀಡುತ್ತದೆ ಎಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಲಕ್ಷ್ಮೀನಾರಾಯಣ ಅಸ್ರಣ್ಣರು ಹೇಳಿದರು.

ಅವರು ಭಾನುವಾರ ಧರ್ಮಸ್ಥಳದಲ್ಲಿ ಐವತ್ತೊಂದನೇ ವರ್ಷದ ಪುರಾಣಕಾವ್ಯ ವಾಚನ – ಪ್ರವಚನಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.  ಸಾಮಾನ್ಯವಾಗಿ ದೇವಸ್ಥಾನಗಳಲ್ಲಿ ನಿತ್ಯವೂಅಷ್ಟಾವಧಾನ ನಡೆಸುವ ಸಂಪ್ರದಾಯವಿದೆ. ಆದುದರಿಂದಎಲ್ಲಾ ತೀರ್ಥಕ್ಷೇತ್ರಗಳಲ್ಲಿಯೂ ಪುರಾಣ ವಾಚನ – ಪ್ರವಚನ ನಡೆಯಬೇಕುಎಂದುಅವರು ಸಲಹೆ ನೀಡಿದರು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ ಅವಿಭಕ್ತ ಕುಟುಂಬ ಪದ್ಧತಿಯಲ್ಲಿ ಹಿಂದೆ ಪ್ರತಿ ಮನೆಯಲ್ಲಿ ಪುರಾಣ ವಾಚನ ಮಾಡುವ ಸಂಪ್ರದಾಯವಿತ್ತು. ಆದರೆ, ಆಧುನಿಕ ಜೀವನ ಶೈಲಿ ಮತ್ತು ಕೆಲಸದ ಒತ್ತಡದಿಂದ ಸಂಪ್ರದಾಯವೆಲ್ಲ ಮರೆಯಾಗುತ್ತಿದೆ. ಪುರಾಣಗಳಲ್ಲಿ ನಮ್ಮ ಬದುಕಿನಎಲ್ಲಾ ಸಮಸ್ಯೆಗಳಿಗೆ, ಸವಾಲುಗಳಿಗೆ, ಸಾಂಸಾರಿಕ ತಾಪತ್ರಯಗಳಿಗೆ ಸೌಹಾರ್ದಯುತ ಪರಿಹಾರ ದೊರಕುತ್ತದೆ.  ಪುರಾಣ ವಾಚನ – ಪ್ರವಚನದ ಮೂಲಕ ಜ್ಞಾನ ಸಂಗ್ರಹ ಮಾಡಿ ಸಾಂಸಾರಿಕ ಸಮಸ್ಯೆಗಳಿಗೆ ಪರಿಹಾರ ಪಡೆದು ಶಾಂತಿ – ನೆಮ್ಮದಿಯ ಜೀವನ ನಡೆಸಬಹುದು ಎಂದು ಹೆಗ್ಗಡೆಯವರು ಸಲಹೆ ನೀಡಿದರು.

ಧರ್ಮಸ್ಥಳ ಯಕ್ಷಗಾನ ಮೇಳದ ನಿವೃತ್ತಕಲಾವಿದ ಕೆ. ಗೋವಿಂದ ಭಟ್ ಮಾತನಾಡಿ, ಧರ್ಮಸ್ಥಳಕ್ಕೆ ಭಕ್ತರು ಆರ್ತರಾಗಿ, ಜ್ಞಾನಿಗಳಾಗಿ, ಜಿಜ್ಞಾಸುಗಳಾಗಿ ಕುತೂಹಲದಿಂದತಮ್ಮ ಸಮಸ್ಯೆಗಳ ಪರಿಹಾರ ಹಾಗೂ ಶಾಂತಿ ಪಡೆಯಲು ಬರುತ್ತಾರೆ. ಅವರಿಗೆ ಬೇಕಾದ ಸಕಾಲಿಕ ಪರಿಹಾರ ಮತ್ತು ಮಾರ್ಗದರ್ಶನ ಹಾಗೂ ಸುಜ್ಞಾನದ ಬೆಳಕನ್ನು ನೀಡಿ ಸಾರ್ಥಕ ಬದುಕಿಗೆ ಪ್ರೋತ್ಸಾಹ ನೀಡಲಾಗುತ್ತದೆ ಎಂದು ಹೇಳಿದರು.

ಕಟೀಲು ಲಕ್ಷ್ಮೀನಾರಾಯಣಅಸ್ರಣ್ಣರು ಮತ್ತು ನಿವೃತ್ತಕಲಾವಿದ ಕೆ. ಗೋವಿಂದ ಭಟ್‍ಅವರನ್ನು ಹೆಗ್ಗಡೆಯವರು ಸನ್ಮಾನಿಸಿ ಗೌರವಿಸಿದರು.

ಹವ್ಯಾಸಿ ಯಕ್ಷಗಾನಕಲಾವಿದಉಜಿರೆ ಆಶೋಕ ಭಟ್ ಸ್ವಾಗತಿಸಿದರು. ಕಾರ್ಯಕ್ರಮ ನಿರ್ವಹಿಸಿದ ಶ್ರೀನಿವಾಸ ರಾವ್ ಧರ್ಮಸ್ಥಳ ವಂದಿಸಿದರು. ಸೆ. 17ರ ವರೆಗೆ ಪ್ರತಿದಿನ ಸಂಜೆಗಂಟೆ 6.30 ರಿಂದ 8.00 ರ ವರೆಗೆ ಪುರಾಣಕಾವ್ಯ ವಾಚನ – ಪ್ರವಚನ ನಡೆಯುತ್ತದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

10 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

1 day ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago