Advertisement
Categories: Uncategorized

| ಪುರಾಣ ವಾಚನ – ಪ್ರವಚನದಿಂದ ಸುಖ-ಶಾಂತಿ, ನೆಮ್ಮದಿ | ಲಕ್ಷ್ಮೀನಾರಾಯಣ ಅಸ್ರಣ್ಣ ಅಭಿಮತ |

Share

ಶ್ರದ್ಧಾ-ಭಕ್ತಿಯಿಂದ ಧರ್ಮದ ಮರ್ಮವನ್ನರಿತು, ಸಾತ್ವಿಕರಾಗಿ, ಸಭ್ಯ – ಸುಸಂಸ್ಕೃತ  ನಾಗರಿಕರಾಗಿ, ಸಹೃದಯವಂತರಾಗಿ ಸಾರ್ಥಕ ಜೀವನ ನಡೆಸಲು ಪುರಾಣ ವಾಚನ – ಪ್ರವಚನ ಪ್ರೇರಣೆ, ಮಾರ್ಗದರ್ಶನ ನೀಡುತ್ತದೆ ಎಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಲಕ್ಷ್ಮೀನಾರಾಯಣ ಅಸ್ರಣ್ಣರು ಹೇಳಿದರು.

ಅವರು ಭಾನುವಾರ ಧರ್ಮಸ್ಥಳದಲ್ಲಿ ಐವತ್ತೊಂದನೇ ವರ್ಷದ ಪುರಾಣಕಾವ್ಯ ವಾಚನ – ಪ್ರವಚನಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.  ಸಾಮಾನ್ಯವಾಗಿ ದೇವಸ್ಥಾನಗಳಲ್ಲಿ ನಿತ್ಯವೂಅಷ್ಟಾವಧಾನ ನಡೆಸುವ ಸಂಪ್ರದಾಯವಿದೆ. ಆದುದರಿಂದಎಲ್ಲಾ ತೀರ್ಥಕ್ಷೇತ್ರಗಳಲ್ಲಿಯೂ ಪುರಾಣ ವಾಚನ – ಪ್ರವಚನ ನಡೆಯಬೇಕುಎಂದುಅವರು ಸಲಹೆ ನೀಡಿದರು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ ಅವಿಭಕ್ತ ಕುಟುಂಬ ಪದ್ಧತಿಯಲ್ಲಿ ಹಿಂದೆ ಪ್ರತಿ ಮನೆಯಲ್ಲಿ ಪುರಾಣ ವಾಚನ ಮಾಡುವ ಸಂಪ್ರದಾಯವಿತ್ತು. ಆದರೆ, ಆಧುನಿಕ ಜೀವನ ಶೈಲಿ ಮತ್ತು ಕೆಲಸದ ಒತ್ತಡದಿಂದ ಸಂಪ್ರದಾಯವೆಲ್ಲ ಮರೆಯಾಗುತ್ತಿದೆ. ಪುರಾಣಗಳಲ್ಲಿ ನಮ್ಮ ಬದುಕಿನಎಲ್ಲಾ ಸಮಸ್ಯೆಗಳಿಗೆ, ಸವಾಲುಗಳಿಗೆ, ಸಾಂಸಾರಿಕ ತಾಪತ್ರಯಗಳಿಗೆ ಸೌಹಾರ್ದಯುತ ಪರಿಹಾರ ದೊರಕುತ್ತದೆ.  ಪುರಾಣ ವಾಚನ – ಪ್ರವಚನದ ಮೂಲಕ ಜ್ಞಾನ ಸಂಗ್ರಹ ಮಾಡಿ ಸಾಂಸಾರಿಕ ಸಮಸ್ಯೆಗಳಿಗೆ ಪರಿಹಾರ ಪಡೆದು ಶಾಂತಿ – ನೆಮ್ಮದಿಯ ಜೀವನ ನಡೆಸಬಹುದು ಎಂದು ಹೆಗ್ಗಡೆಯವರು ಸಲಹೆ ನೀಡಿದರು.

ಧರ್ಮಸ್ಥಳ ಯಕ್ಷಗಾನ ಮೇಳದ ನಿವೃತ್ತಕಲಾವಿದ ಕೆ. ಗೋವಿಂದ ಭಟ್ ಮಾತನಾಡಿ, ಧರ್ಮಸ್ಥಳಕ್ಕೆ ಭಕ್ತರು ಆರ್ತರಾಗಿ, ಜ್ಞಾನಿಗಳಾಗಿ, ಜಿಜ್ಞಾಸುಗಳಾಗಿ ಕುತೂಹಲದಿಂದತಮ್ಮ ಸಮಸ್ಯೆಗಳ ಪರಿಹಾರ ಹಾಗೂ ಶಾಂತಿ ಪಡೆಯಲು ಬರುತ್ತಾರೆ. ಅವರಿಗೆ ಬೇಕಾದ ಸಕಾಲಿಕ ಪರಿಹಾರ ಮತ್ತು ಮಾರ್ಗದರ್ಶನ ಹಾಗೂ ಸುಜ್ಞಾನದ ಬೆಳಕನ್ನು ನೀಡಿ ಸಾರ್ಥಕ ಬದುಕಿಗೆ ಪ್ರೋತ್ಸಾಹ ನೀಡಲಾಗುತ್ತದೆ ಎಂದು ಹೇಳಿದರು.

ಕಟೀಲು ಲಕ್ಷ್ಮೀನಾರಾಯಣಅಸ್ರಣ್ಣರು ಮತ್ತು ನಿವೃತ್ತಕಲಾವಿದ ಕೆ. ಗೋವಿಂದ ಭಟ್‍ಅವರನ್ನು ಹೆಗ್ಗಡೆಯವರು ಸನ್ಮಾನಿಸಿ ಗೌರವಿಸಿದರು.

ಹವ್ಯಾಸಿ ಯಕ್ಷಗಾನಕಲಾವಿದಉಜಿರೆ ಆಶೋಕ ಭಟ್ ಸ್ವಾಗತಿಸಿದರು. ಕಾರ್ಯಕ್ರಮ ನಿರ್ವಹಿಸಿದ ಶ್ರೀನಿವಾಸ ರಾವ್ ಧರ್ಮಸ್ಥಳ ವಂದಿಸಿದರು. ಸೆ. 17ರ ವರೆಗೆ ಪ್ರತಿದಿನ ಸಂಜೆಗಂಟೆ 6.30 ರಿಂದ 8.00 ರ ವರೆಗೆ ಪುರಾಣಕಾವ್ಯ ವಾಚನ – ಪ್ರವಚನ ನಡೆಯುತ್ತದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 hour ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

19 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

1 day ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

1 day ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

1 day ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago