Advertisement
Categories: Uncategorized

| ಪುರಾಣ ವಾಚನ – ಪ್ರವಚನದಿಂದ ಸುಖ-ಶಾಂತಿ, ನೆಮ್ಮದಿ | ಲಕ್ಷ್ಮೀನಾರಾಯಣ ಅಸ್ರಣ್ಣ ಅಭಿಮತ |

Share

ಶ್ರದ್ಧಾ-ಭಕ್ತಿಯಿಂದ ಧರ್ಮದ ಮರ್ಮವನ್ನರಿತು, ಸಾತ್ವಿಕರಾಗಿ, ಸಭ್ಯ – ಸುಸಂಸ್ಕೃತ  ನಾಗರಿಕರಾಗಿ, ಸಹೃದಯವಂತರಾಗಿ ಸಾರ್ಥಕ ಜೀವನ ನಡೆಸಲು ಪುರಾಣ ವಾಚನ – ಪ್ರವಚನ ಪ್ರೇರಣೆ, ಮಾರ್ಗದರ್ಶನ ನೀಡುತ್ತದೆ ಎಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಲಕ್ಷ್ಮೀನಾರಾಯಣ ಅಸ್ರಣ್ಣರು ಹೇಳಿದರು.

ಅವರು ಭಾನುವಾರ ಧರ್ಮಸ್ಥಳದಲ್ಲಿ ಐವತ್ತೊಂದನೇ ವರ್ಷದ ಪುರಾಣಕಾವ್ಯ ವಾಚನ – ಪ್ರವಚನಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.  ಸಾಮಾನ್ಯವಾಗಿ ದೇವಸ್ಥಾನಗಳಲ್ಲಿ ನಿತ್ಯವೂಅಷ್ಟಾವಧಾನ ನಡೆಸುವ ಸಂಪ್ರದಾಯವಿದೆ. ಆದುದರಿಂದಎಲ್ಲಾ ತೀರ್ಥಕ್ಷೇತ್ರಗಳಲ್ಲಿಯೂ ಪುರಾಣ ವಾಚನ – ಪ್ರವಚನ ನಡೆಯಬೇಕುಎಂದುಅವರು ಸಲಹೆ ನೀಡಿದರು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ ಅವಿಭಕ್ತ ಕುಟುಂಬ ಪದ್ಧತಿಯಲ್ಲಿ ಹಿಂದೆ ಪ್ರತಿ ಮನೆಯಲ್ಲಿ ಪುರಾಣ ವಾಚನ ಮಾಡುವ ಸಂಪ್ರದಾಯವಿತ್ತು. ಆದರೆ, ಆಧುನಿಕ ಜೀವನ ಶೈಲಿ ಮತ್ತು ಕೆಲಸದ ಒತ್ತಡದಿಂದ ಸಂಪ್ರದಾಯವೆಲ್ಲ ಮರೆಯಾಗುತ್ತಿದೆ. ಪುರಾಣಗಳಲ್ಲಿ ನಮ್ಮ ಬದುಕಿನಎಲ್ಲಾ ಸಮಸ್ಯೆಗಳಿಗೆ, ಸವಾಲುಗಳಿಗೆ, ಸಾಂಸಾರಿಕ ತಾಪತ್ರಯಗಳಿಗೆ ಸೌಹಾರ್ದಯುತ ಪರಿಹಾರ ದೊರಕುತ್ತದೆ.  ಪುರಾಣ ವಾಚನ – ಪ್ರವಚನದ ಮೂಲಕ ಜ್ಞಾನ ಸಂಗ್ರಹ ಮಾಡಿ ಸಾಂಸಾರಿಕ ಸಮಸ್ಯೆಗಳಿಗೆ ಪರಿಹಾರ ಪಡೆದು ಶಾಂತಿ – ನೆಮ್ಮದಿಯ ಜೀವನ ನಡೆಸಬಹುದು ಎಂದು ಹೆಗ್ಗಡೆಯವರು ಸಲಹೆ ನೀಡಿದರು.

ಧರ್ಮಸ್ಥಳ ಯಕ್ಷಗಾನ ಮೇಳದ ನಿವೃತ್ತಕಲಾವಿದ ಕೆ. ಗೋವಿಂದ ಭಟ್ ಮಾತನಾಡಿ, ಧರ್ಮಸ್ಥಳಕ್ಕೆ ಭಕ್ತರು ಆರ್ತರಾಗಿ, ಜ್ಞಾನಿಗಳಾಗಿ, ಜಿಜ್ಞಾಸುಗಳಾಗಿ ಕುತೂಹಲದಿಂದತಮ್ಮ ಸಮಸ್ಯೆಗಳ ಪರಿಹಾರ ಹಾಗೂ ಶಾಂತಿ ಪಡೆಯಲು ಬರುತ್ತಾರೆ. ಅವರಿಗೆ ಬೇಕಾದ ಸಕಾಲಿಕ ಪರಿಹಾರ ಮತ್ತು ಮಾರ್ಗದರ್ಶನ ಹಾಗೂ ಸುಜ್ಞಾನದ ಬೆಳಕನ್ನು ನೀಡಿ ಸಾರ್ಥಕ ಬದುಕಿಗೆ ಪ್ರೋತ್ಸಾಹ ನೀಡಲಾಗುತ್ತದೆ ಎಂದು ಹೇಳಿದರು.

ಕಟೀಲು ಲಕ್ಷ್ಮೀನಾರಾಯಣಅಸ್ರಣ್ಣರು ಮತ್ತು ನಿವೃತ್ತಕಲಾವಿದ ಕೆ. ಗೋವಿಂದ ಭಟ್‍ಅವರನ್ನು ಹೆಗ್ಗಡೆಯವರು ಸನ್ಮಾನಿಸಿ ಗೌರವಿಸಿದರು.

ಹವ್ಯಾಸಿ ಯಕ್ಷಗಾನಕಲಾವಿದಉಜಿರೆ ಆಶೋಕ ಭಟ್ ಸ್ವಾಗತಿಸಿದರು. ಕಾರ್ಯಕ್ರಮ ನಿರ್ವಹಿಸಿದ ಶ್ರೀನಿವಾಸ ರಾವ್ ಧರ್ಮಸ್ಥಳ ವಂದಿಸಿದರು. ಸೆ. 17ರ ವರೆಗೆ ಪ್ರತಿದಿನ ಸಂಜೆಗಂಟೆ 6.30 ರಿಂದ 8.00 ರ ವರೆಗೆ ಪುರಾಣಕಾವ್ಯ ವಾಚನ – ಪ್ರವಚನ ನಡೆಯುತ್ತದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

5 hours ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

7 hours ago

ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?

ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

7 hours ago

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ

ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…

9 hours ago

ರಬ್ಬರ್‌ ದರ 13 ವರ್ಷಗಳಲ್ಲಿ ದಾಖಲೆ ಮಟ್ಟಕ್ಕೆ..! ಆದರೆ ಯಾಕೆ ಬೆಳೆಗಾರರು ಇನ್ನೂ ಚಿಂತೆಯಲ್ಲಿ..?

ರಬ್ಬರ್‌ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…

14 hours ago