Advertisement
Categories: Uncategorized

| ಪುರಾಣ ವಾಚನ – ಪ್ರವಚನದಿಂದ ಸುಖ-ಶಾಂತಿ, ನೆಮ್ಮದಿ | ಲಕ್ಷ್ಮೀನಾರಾಯಣ ಅಸ್ರಣ್ಣ ಅಭಿಮತ |

Share

ಶ್ರದ್ಧಾ-ಭಕ್ತಿಯಿಂದ ಧರ್ಮದ ಮರ್ಮವನ್ನರಿತು, ಸಾತ್ವಿಕರಾಗಿ, ಸಭ್ಯ – ಸುಸಂಸ್ಕೃತ  ನಾಗರಿಕರಾಗಿ, ಸಹೃದಯವಂತರಾಗಿ ಸಾರ್ಥಕ ಜೀವನ ನಡೆಸಲು ಪುರಾಣ ವಾಚನ – ಪ್ರವಚನ ಪ್ರೇರಣೆ, ಮಾರ್ಗದರ್ಶನ ನೀಡುತ್ತದೆ ಎಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಲಕ್ಷ್ಮೀನಾರಾಯಣ ಅಸ್ರಣ್ಣರು ಹೇಳಿದರು.

ಅವರು ಭಾನುವಾರ ಧರ್ಮಸ್ಥಳದಲ್ಲಿ ಐವತ್ತೊಂದನೇ ವರ್ಷದ ಪುರಾಣಕಾವ್ಯ ವಾಚನ – ಪ್ರವಚನಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.  ಸಾಮಾನ್ಯವಾಗಿ ದೇವಸ್ಥಾನಗಳಲ್ಲಿ ನಿತ್ಯವೂಅಷ್ಟಾವಧಾನ ನಡೆಸುವ ಸಂಪ್ರದಾಯವಿದೆ. ಆದುದರಿಂದಎಲ್ಲಾ ತೀರ್ಥಕ್ಷೇತ್ರಗಳಲ್ಲಿಯೂ ಪುರಾಣ ವಾಚನ – ಪ್ರವಚನ ನಡೆಯಬೇಕುಎಂದುಅವರು ಸಲಹೆ ನೀಡಿದರು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ ಅವಿಭಕ್ತ ಕುಟುಂಬ ಪದ್ಧತಿಯಲ್ಲಿ ಹಿಂದೆ ಪ್ರತಿ ಮನೆಯಲ್ಲಿ ಪುರಾಣ ವಾಚನ ಮಾಡುವ ಸಂಪ್ರದಾಯವಿತ್ತು. ಆದರೆ, ಆಧುನಿಕ ಜೀವನ ಶೈಲಿ ಮತ್ತು ಕೆಲಸದ ಒತ್ತಡದಿಂದ ಸಂಪ್ರದಾಯವೆಲ್ಲ ಮರೆಯಾಗುತ್ತಿದೆ. ಪುರಾಣಗಳಲ್ಲಿ ನಮ್ಮ ಬದುಕಿನಎಲ್ಲಾ ಸಮಸ್ಯೆಗಳಿಗೆ, ಸವಾಲುಗಳಿಗೆ, ಸಾಂಸಾರಿಕ ತಾಪತ್ರಯಗಳಿಗೆ ಸೌಹಾರ್ದಯುತ ಪರಿಹಾರ ದೊರಕುತ್ತದೆ.  ಪುರಾಣ ವಾಚನ – ಪ್ರವಚನದ ಮೂಲಕ ಜ್ಞಾನ ಸಂಗ್ರಹ ಮಾಡಿ ಸಾಂಸಾರಿಕ ಸಮಸ್ಯೆಗಳಿಗೆ ಪರಿಹಾರ ಪಡೆದು ಶಾಂತಿ – ನೆಮ್ಮದಿಯ ಜೀವನ ನಡೆಸಬಹುದು ಎಂದು ಹೆಗ್ಗಡೆಯವರು ಸಲಹೆ ನೀಡಿದರು.

ಧರ್ಮಸ್ಥಳ ಯಕ್ಷಗಾನ ಮೇಳದ ನಿವೃತ್ತಕಲಾವಿದ ಕೆ. ಗೋವಿಂದ ಭಟ್ ಮಾತನಾಡಿ, ಧರ್ಮಸ್ಥಳಕ್ಕೆ ಭಕ್ತರು ಆರ್ತರಾಗಿ, ಜ್ಞಾನಿಗಳಾಗಿ, ಜಿಜ್ಞಾಸುಗಳಾಗಿ ಕುತೂಹಲದಿಂದತಮ್ಮ ಸಮಸ್ಯೆಗಳ ಪರಿಹಾರ ಹಾಗೂ ಶಾಂತಿ ಪಡೆಯಲು ಬರುತ್ತಾರೆ. ಅವರಿಗೆ ಬೇಕಾದ ಸಕಾಲಿಕ ಪರಿಹಾರ ಮತ್ತು ಮಾರ್ಗದರ್ಶನ ಹಾಗೂ ಸುಜ್ಞಾನದ ಬೆಳಕನ್ನು ನೀಡಿ ಸಾರ್ಥಕ ಬದುಕಿಗೆ ಪ್ರೋತ್ಸಾಹ ನೀಡಲಾಗುತ್ತದೆ ಎಂದು ಹೇಳಿದರು.

ಕಟೀಲು ಲಕ್ಷ್ಮೀನಾರಾಯಣಅಸ್ರಣ್ಣರು ಮತ್ತು ನಿವೃತ್ತಕಲಾವಿದ ಕೆ. ಗೋವಿಂದ ಭಟ್‍ಅವರನ್ನು ಹೆಗ್ಗಡೆಯವರು ಸನ್ಮಾನಿಸಿ ಗೌರವಿಸಿದರು.

ಹವ್ಯಾಸಿ ಯಕ್ಷಗಾನಕಲಾವಿದಉಜಿರೆ ಆಶೋಕ ಭಟ್ ಸ್ವಾಗತಿಸಿದರು. ಕಾರ್ಯಕ್ರಮ ನಿರ್ವಹಿಸಿದ ಶ್ರೀನಿವಾಸ ರಾವ್ ಧರ್ಮಸ್ಥಳ ವಂದಿಸಿದರು. ಸೆ. 17ರ ವರೆಗೆ ಪ್ರತಿದಿನ ಸಂಜೆಗಂಟೆ 6.30 ರಿಂದ 8.00 ರ ವರೆಗೆ ಪುರಾಣಕಾವ್ಯ ವಾಚನ – ಪ್ರವಚನ ನಡೆಯುತ್ತದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

11 hours ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

12 hours ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

21 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

1 day ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

2 days ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

2 days ago