Advertisement
Categories: Uncategorized

| ಪುರಾಣ ವಾಚನ – ಪ್ರವಚನದಿಂದ ಸುಖ-ಶಾಂತಿ, ನೆಮ್ಮದಿ | ಲಕ್ಷ್ಮೀನಾರಾಯಣ ಅಸ್ರಣ್ಣ ಅಭಿಮತ |

Share

ಶ್ರದ್ಧಾ-ಭಕ್ತಿಯಿಂದ ಧರ್ಮದ ಮರ್ಮವನ್ನರಿತು, ಸಾತ್ವಿಕರಾಗಿ, ಸಭ್ಯ – ಸುಸಂಸ್ಕೃತ  ನಾಗರಿಕರಾಗಿ, ಸಹೃದಯವಂತರಾಗಿ ಸಾರ್ಥಕ ಜೀವನ ನಡೆಸಲು ಪುರಾಣ ವಾಚನ – ಪ್ರವಚನ ಪ್ರೇರಣೆ, ಮಾರ್ಗದರ್ಶನ ನೀಡುತ್ತದೆ ಎಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಲಕ್ಷ್ಮೀನಾರಾಯಣ ಅಸ್ರಣ್ಣರು ಹೇಳಿದರು.

ಅವರು ಭಾನುವಾರ ಧರ್ಮಸ್ಥಳದಲ್ಲಿ ಐವತ್ತೊಂದನೇ ವರ್ಷದ ಪುರಾಣಕಾವ್ಯ ವಾಚನ – ಪ್ರವಚನಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.  ಸಾಮಾನ್ಯವಾಗಿ ದೇವಸ್ಥಾನಗಳಲ್ಲಿ ನಿತ್ಯವೂಅಷ್ಟಾವಧಾನ ನಡೆಸುವ ಸಂಪ್ರದಾಯವಿದೆ. ಆದುದರಿಂದಎಲ್ಲಾ ತೀರ್ಥಕ್ಷೇತ್ರಗಳಲ್ಲಿಯೂ ಪುರಾಣ ವಾಚನ – ಪ್ರವಚನ ನಡೆಯಬೇಕುಎಂದುಅವರು ಸಲಹೆ ನೀಡಿದರು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ ಅವಿಭಕ್ತ ಕುಟುಂಬ ಪದ್ಧತಿಯಲ್ಲಿ ಹಿಂದೆ ಪ್ರತಿ ಮನೆಯಲ್ಲಿ ಪುರಾಣ ವಾಚನ ಮಾಡುವ ಸಂಪ್ರದಾಯವಿತ್ತು. ಆದರೆ, ಆಧುನಿಕ ಜೀವನ ಶೈಲಿ ಮತ್ತು ಕೆಲಸದ ಒತ್ತಡದಿಂದ ಸಂಪ್ರದಾಯವೆಲ್ಲ ಮರೆಯಾಗುತ್ತಿದೆ. ಪುರಾಣಗಳಲ್ಲಿ ನಮ್ಮ ಬದುಕಿನಎಲ್ಲಾ ಸಮಸ್ಯೆಗಳಿಗೆ, ಸವಾಲುಗಳಿಗೆ, ಸಾಂಸಾರಿಕ ತಾಪತ್ರಯಗಳಿಗೆ ಸೌಹಾರ್ದಯುತ ಪರಿಹಾರ ದೊರಕುತ್ತದೆ.  ಪುರಾಣ ವಾಚನ – ಪ್ರವಚನದ ಮೂಲಕ ಜ್ಞಾನ ಸಂಗ್ರಹ ಮಾಡಿ ಸಾಂಸಾರಿಕ ಸಮಸ್ಯೆಗಳಿಗೆ ಪರಿಹಾರ ಪಡೆದು ಶಾಂತಿ – ನೆಮ್ಮದಿಯ ಜೀವನ ನಡೆಸಬಹುದು ಎಂದು ಹೆಗ್ಗಡೆಯವರು ಸಲಹೆ ನೀಡಿದರು.

ಧರ್ಮಸ್ಥಳ ಯಕ್ಷಗಾನ ಮೇಳದ ನಿವೃತ್ತಕಲಾವಿದ ಕೆ. ಗೋವಿಂದ ಭಟ್ ಮಾತನಾಡಿ, ಧರ್ಮಸ್ಥಳಕ್ಕೆ ಭಕ್ತರು ಆರ್ತರಾಗಿ, ಜ್ಞಾನಿಗಳಾಗಿ, ಜಿಜ್ಞಾಸುಗಳಾಗಿ ಕುತೂಹಲದಿಂದತಮ್ಮ ಸಮಸ್ಯೆಗಳ ಪರಿಹಾರ ಹಾಗೂ ಶಾಂತಿ ಪಡೆಯಲು ಬರುತ್ತಾರೆ. ಅವರಿಗೆ ಬೇಕಾದ ಸಕಾಲಿಕ ಪರಿಹಾರ ಮತ್ತು ಮಾರ್ಗದರ್ಶನ ಹಾಗೂ ಸುಜ್ಞಾನದ ಬೆಳಕನ್ನು ನೀಡಿ ಸಾರ್ಥಕ ಬದುಕಿಗೆ ಪ್ರೋತ್ಸಾಹ ನೀಡಲಾಗುತ್ತದೆ ಎಂದು ಹೇಳಿದರು.

ಕಟೀಲು ಲಕ್ಷ್ಮೀನಾರಾಯಣಅಸ್ರಣ್ಣರು ಮತ್ತು ನಿವೃತ್ತಕಲಾವಿದ ಕೆ. ಗೋವಿಂದ ಭಟ್‍ಅವರನ್ನು ಹೆಗ್ಗಡೆಯವರು ಸನ್ಮಾನಿಸಿ ಗೌರವಿಸಿದರು.

ಹವ್ಯಾಸಿ ಯಕ್ಷಗಾನಕಲಾವಿದಉಜಿರೆ ಆಶೋಕ ಭಟ್ ಸ್ವಾಗತಿಸಿದರು. ಕಾರ್ಯಕ್ರಮ ನಿರ್ವಹಿಸಿದ ಶ್ರೀನಿವಾಸ ರಾವ್ ಧರ್ಮಸ್ಥಳ ವಂದಿಸಿದರು. ಸೆ. 17ರ ವರೆಗೆ ಪ್ರತಿದಿನ ಸಂಜೆಗಂಟೆ 6.30 ರಿಂದ 8.00 ರ ವರೆಗೆ ಪುರಾಣಕಾವ್ಯ ವಾಚನ – ಪ್ರವಚನ ನಡೆಯುತ್ತದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

9 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

15 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

23 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago