ಸುದ್ದಿಗಳು

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ | ರಾಜ್ಯದೆಲ್ಲೆಡೆ ಶುದ್ಧಜಲ ಅಭಿಯಾನ

Share

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಜನವರಿ ತಿಂಗಳಿನಲ್ಲಿ ರಾಜ್ಯದೆಲ್ಲೆಡೆ ಶುದ್ಧಜಲ ಅಭಿಯಾನ ಕಾರ್ಯಕ್ರಮ ಆಯೋಜಿಸಿದ್ದು, ಒಂದು ಲಕ್ಷ ಜನರಿಗೆ ಶುದ್ಧ ಜಲ ಬಳಕೆ ಬಗ್ಯೆ ಅರಿವು, ಜಾಗೃತಿ ಮೂಡಿಸಲಾಗುತ್ತದೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಶೇ. 60 ರಷ್ಟು ಪ್ರದೇಶಗಳಲ್ಲಿ ಕುಡಿಯುವ ನೀರಿನಲ್ಲಿ ಅಗತ್ಯ ಪ್ರಮಾಣಕ್ಕಿಂತ ಹೆಚ್ಚು ಪ್ಲೋರೈಡ್, ಶೇ. 20 ರಷ್ಟು ಅಧಿಕ ನೈಟ್ರೇಟ್ ಹಾಗೂ ಶೇ. 30 ರಷ್ಟು ಸೂಕ್ಷಾ್ಮಣುಗಳಿಂದ ನೀರು ಕಲುಷಿತವಾಗಿ ಜನರು ರೋಗಗಳಿಗೆ ಬಲಿಯಾಗುತ್ತಾರೆ. ಬೆಳಗಾವಿ, ಬೀದರ್, ಚಿತ್ರದುರ್ಗ, ದಾವಣಗೆರೆ, ಹಾಸನ , ಗದಗ, ಕೋಲಾರ ಮೊದಲಾದ ಕಡೆಗಳಲ್ಲಿ ಪ್ಲೋರೈಡ್ ಸಮಸ್ಯೆ ಅಧಿಕವಾಗಿ ಕಂಡು ಬಂದಿದೆ.
ರಾಜ್ಯದಲ್ಲಿ ಪ್ರಥಮವಾಗಿ 2009 ರಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಯಗಟಿಯಲ್ಲಿ ಮೊದಲ ಶುದ್ಧ ಕುಡಿಯುವನೀರಿನ ಘಟಕವನ್ನು ಧರ್ಮಸ್ಥಳದ ವತಿಯಿಂದ ಪ್ರಾರಂಭಿಸಲಾಗಿದೆ. “ಶುದ್ಧಾಗಂಗಾ” ಹೆಸರಿನಲ್ಲಿ ರಾಜ್ಯದಲ್ಲಿ 371  ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಪ್ರಾರಂಭಿಸಿದ್ದು, ಪ್ರತಿ ದಿನ  3,36,000 ಮಂದಿ ಶುದ್ಧ ನೀರನ್ನು ಬಳಸುತ್ತಿದ್ದಾರೆ. ಇದಕ್ಕಾಗಿ ಪ್ರತಿ ದಿನ 17 ಲಕ್ಷ ಲೀಟರ್ ಶುದ್ಧ ಕುಡಿಯುವ ನೀರನ್ನು ಈ ಘಟಕಗಳ ಮೂಲಕ ನೀಡಲಾಗುತ್ತದೆ.
ಶುದ್ಧ ಜಲಜಾಗೃತಿ ಅಭಿಯಾನದಲ್ಲಿ ಶಾಲಾ ಮಕ್ಕಳಿಗೆ ಮಾಹಿತಿ, ಜಾಥಾ ಕಾರ್ಯಕ್ರಮ, ಕರಪತ್ರ ಹಂಚಿಕೆ, ಬೀದಿನಾಟಕ, ಸಾರ್ವಜನಿಕರಿಗೆ ಮಾಹಿತಿ ನೀಡುವುದು, ಮನೆಗಳಿಗೆ ಭೇಟಿ ನೀಡಿ ಮಾರ್ಗದರ್ಶನ ಮೊದಲಾದ 400 ಕ್ಕೂ ಮಿಕ್ಕಿ ವಿವಿಧ ಕಾರ್ಯಕ್ರಮಗಳ ಮೂಲಕ ಶುದ್ಧಜಲ ಬಳಕೆ ಬಗ್ಯೆ ಅರಿವು, ಜಾಗೃತಿ ಮೂಡಿಸಲಾಗುವುದು.
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಗುಜ್ಜೆ ಶೇಂಗಾ ಪಲ್ಯ

ಗುಜ್ಜೆ ಶೇಂಗಾ ಪಲ್ಯ ಮಾಡುವ ವಿಧಾನ...

3 hours ago

ಕೇರಳದಲ್ಲಿ ಹೀಟ್‌ ವೇವ್‌ ಎಲರ್ಟ್‌ | 10 ಜಿಲ್ಲೆಗಳಿಗೆ ಎಲ್ಲೋ ಎಲರ್ಟ್‌ |

ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…

11 hours ago

ಮೆಣಸಿನಕಾಯಿ ಬೆಲೆ ಕುಸಿತ | ಒಣ ಮೆಣಸಿನಕಾಯಿ ಖರೀದಿಸುವಂತೆ ಬಸವರಾಜ ಬೊಮ್ಮಾಯಿ ಪತ್ರ

ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…

11 hours ago

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆ ಏರಿಕೆ ಮಾಡಲು ಸರ್ಕಾರ ಚಿಂತನೆ

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…

11 hours ago

ಒಂದು ವರ್ಷದಲ್ಲಿ 10 ಲಕ್ಷ ಮನೆಗಳಿಗೆ ಸೌರ ಫಲಕ

ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…

1 day ago

ನಂದಿನಿ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ

ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …

1 day ago