Advertisement
ಸುದ್ದಿಗಳು

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ | ರಾಜ್ಯದೆಲ್ಲೆಡೆ ಶುದ್ಧಜಲ ಅಭಿಯಾನ

Share

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಜನವರಿ ತಿಂಗಳಿನಲ್ಲಿ ರಾಜ್ಯದೆಲ್ಲೆಡೆ ಶುದ್ಧಜಲ ಅಭಿಯಾನ ಕಾರ್ಯಕ್ರಮ ಆಯೋಜಿಸಿದ್ದು, ಒಂದು ಲಕ್ಷ ಜನರಿಗೆ ಶುದ್ಧ ಜಲ ಬಳಕೆ ಬಗ್ಯೆ ಅರಿವು, ಜಾಗೃತಿ ಮೂಡಿಸಲಾಗುತ್ತದೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಶೇ. 60 ರಷ್ಟು ಪ್ರದೇಶಗಳಲ್ಲಿ ಕುಡಿಯುವ ನೀರಿನಲ್ಲಿ ಅಗತ್ಯ ಪ್ರಮಾಣಕ್ಕಿಂತ ಹೆಚ್ಚು ಪ್ಲೋರೈಡ್, ಶೇ. 20 ರಷ್ಟು ಅಧಿಕ ನೈಟ್ರೇಟ್ ಹಾಗೂ ಶೇ. 30 ರಷ್ಟು ಸೂಕ್ಷಾ್ಮಣುಗಳಿಂದ ನೀರು ಕಲುಷಿತವಾಗಿ ಜನರು ರೋಗಗಳಿಗೆ ಬಲಿಯಾಗುತ್ತಾರೆ. ಬೆಳಗಾವಿ, ಬೀದರ್, ಚಿತ್ರದುರ್ಗ, ದಾವಣಗೆರೆ, ಹಾಸನ , ಗದಗ, ಕೋಲಾರ ಮೊದಲಾದ ಕಡೆಗಳಲ್ಲಿ ಪ್ಲೋರೈಡ್ ಸಮಸ್ಯೆ ಅಧಿಕವಾಗಿ ಕಂಡು ಬಂದಿದೆ.
ರಾಜ್ಯದಲ್ಲಿ ಪ್ರಥಮವಾಗಿ 2009 ರಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಯಗಟಿಯಲ್ಲಿ ಮೊದಲ ಶುದ್ಧ ಕುಡಿಯುವನೀರಿನ ಘಟಕವನ್ನು ಧರ್ಮಸ್ಥಳದ ವತಿಯಿಂದ ಪ್ರಾರಂಭಿಸಲಾಗಿದೆ. “ಶುದ್ಧಾಗಂಗಾ” ಹೆಸರಿನಲ್ಲಿ ರಾಜ್ಯದಲ್ಲಿ 371  ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಪ್ರಾರಂಭಿಸಿದ್ದು, ಪ್ರತಿ ದಿನ  3,36,000 ಮಂದಿ ಶುದ್ಧ ನೀರನ್ನು ಬಳಸುತ್ತಿದ್ದಾರೆ. ಇದಕ್ಕಾಗಿ ಪ್ರತಿ ದಿನ 17 ಲಕ್ಷ ಲೀಟರ್ ಶುದ್ಧ ಕುಡಿಯುವ ನೀರನ್ನು ಈ ಘಟಕಗಳ ಮೂಲಕ ನೀಡಲಾಗುತ್ತದೆ.
ಶುದ್ಧ ಜಲಜಾಗೃತಿ ಅಭಿಯಾನದಲ್ಲಿ ಶಾಲಾ ಮಕ್ಕಳಿಗೆ ಮಾಹಿತಿ, ಜಾಥಾ ಕಾರ್ಯಕ್ರಮ, ಕರಪತ್ರ ಹಂಚಿಕೆ, ಬೀದಿನಾಟಕ, ಸಾರ್ವಜನಿಕರಿಗೆ ಮಾಹಿತಿ ನೀಡುವುದು, ಮನೆಗಳಿಗೆ ಭೇಟಿ ನೀಡಿ ಮಾರ್ಗದರ್ಶನ ಮೊದಲಾದ 400 ಕ್ಕೂ ಮಿಕ್ಕಿ ವಿವಿಧ ಕಾರ್ಯಕ್ರಮಗಳ ಮೂಲಕ ಶುದ್ಧಜಲ ಬಳಕೆ ಬಗ್ಯೆ ಅರಿವು, ಜಾಗೃತಿ ಮೂಡಿಸಲಾಗುವುದು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

3 hours ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

3 hours ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

17 hours ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

17 hours ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

1 day ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

1 day ago