ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಜನವರಿ ತಿಂಗಳಿನಲ್ಲಿ ರಾಜ್ಯದೆಲ್ಲೆಡೆ ಶುದ್ಧಜಲ ಅಭಿಯಾನ ಕಾರ್ಯಕ್ರಮ ಆಯೋಜಿಸಿದ್ದು, ಒಂದು ಲಕ್ಷ ಜನರಿಗೆ ಶುದ್ಧ ಜಲ ಬಳಕೆ ಬಗ್ಯೆ ಅರಿವು, ಜಾಗೃತಿ ಮೂಡಿಸಲಾಗುತ್ತದೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಶೇ. 60 ರಷ್ಟು ಪ್ರದೇಶಗಳಲ್ಲಿ ಕುಡಿಯುವ ನೀರಿನಲ್ಲಿ ಅಗತ್ಯ ಪ್ರಮಾಣಕ್ಕಿಂತ ಹೆಚ್ಚು ಪ್ಲೋರೈಡ್, ಶೇ. 20 ರಷ್ಟು ಅಧಿಕ ನೈಟ್ರೇಟ್ ಹಾಗೂ ಶೇ. 30 ರಷ್ಟು ಸೂಕ್ಷಾ್ಮಣುಗಳಿಂದ ನೀರು ಕಲುಷಿತವಾಗಿ ಜನರು ರೋಗಗಳಿಗೆ ಬಲಿಯಾಗುತ್ತಾರೆ. ಬೆಳಗಾವಿ, ಬೀದರ್, ಚಿತ್ರದುರ್ಗ, ದಾವಣಗೆರೆ, ಹಾಸನ , ಗದಗ, ಕೋಲಾರ ಮೊದಲಾದ ಕಡೆಗಳಲ್ಲಿ ಪ್ಲೋರೈಡ್ ಸಮಸ್ಯೆ ಅಧಿಕವಾಗಿ ಕಂಡು ಬಂದಿದೆ. ರಾಜ್ಯದಲ್ಲಿ ಪ್ರಥಮವಾಗಿ 2009 ರಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಯಗಟಿಯಲ್ಲಿ ಮೊದಲ ಶುದ್ಧ ಕುಡಿಯುವನೀರಿನ ಘಟಕವನ್ನು ಧರ್ಮಸ್ಥಳದ ವತಿಯಿಂದ ಪ್ರಾರಂಭಿಸಲಾಗಿದೆ. “ಶುದ್ಧಾಗಂಗಾ” ಹೆಸರಿನಲ್ಲಿ ರಾಜ್ಯದಲ್ಲಿ 371 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಪ್ರಾರಂಭಿಸಿದ್ದು, ಪ್ರತಿ ದಿನ 3,36,000 ಮಂದಿ ಶುದ್ಧ ನೀರನ್ನು ಬಳಸುತ್ತಿದ್ದಾರೆ. ಇದಕ್ಕಾಗಿ ಪ್ರತಿ ದಿನ 17 ಲಕ್ಷ ಲೀಟರ್ ಶುದ್ಧ ಕುಡಿಯುವ ನೀರನ್ನು ಈ ಘಟಕಗಳ ಮೂಲಕ ನೀಡಲಾಗುತ್ತದೆ.ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…