ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಜನವರಿ ತಿಂಗಳಿನಲ್ಲಿ ರಾಜ್ಯದೆಲ್ಲೆಡೆ ಶುದ್ಧಜಲ ಅಭಿಯಾನ ಕಾರ್ಯಕ್ರಮ ಆಯೋಜಿಸಿದ್ದು, ಒಂದು ಲಕ್ಷ ಜನರಿಗೆ ಶುದ್ಧ ಜಲ ಬಳಕೆ ಬಗ್ಯೆ ಅರಿವು, ಜಾಗೃತಿ ಮೂಡಿಸಲಾಗುತ್ತದೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಶೇ. 60 ರಷ್ಟು ಪ್ರದೇಶಗಳಲ್ಲಿ ಕುಡಿಯುವ ನೀರಿನಲ್ಲಿ ಅಗತ್ಯ ಪ್ರಮಾಣಕ್ಕಿಂತ ಹೆಚ್ಚು ಪ್ಲೋರೈಡ್, ಶೇ. 20 ರಷ್ಟು ಅಧಿಕ ನೈಟ್ರೇಟ್ ಹಾಗೂ ಶೇ. 30 ರಷ್ಟು ಸೂಕ್ಷಾ್ಮಣುಗಳಿಂದ ನೀರು ಕಲುಷಿತವಾಗಿ ಜನರು ರೋಗಗಳಿಗೆ ಬಲಿಯಾಗುತ್ತಾರೆ. ಬೆಳಗಾವಿ, ಬೀದರ್, ಚಿತ್ರದುರ್ಗ, ದಾವಣಗೆರೆ, ಹಾಸನ , ಗದಗ, ಕೋಲಾರ ಮೊದಲಾದ ಕಡೆಗಳಲ್ಲಿ ಪ್ಲೋರೈಡ್ ಸಮಸ್ಯೆ ಅಧಿಕವಾಗಿ ಕಂಡು ಬಂದಿದೆ. ರಾಜ್ಯದಲ್ಲಿ ಪ್ರಥಮವಾಗಿ 2009 ರಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಯಗಟಿಯಲ್ಲಿ ಮೊದಲ ಶುದ್ಧ ಕುಡಿಯುವನೀರಿನ ಘಟಕವನ್ನು ಧರ್ಮಸ್ಥಳದ ವತಿಯಿಂದ ಪ್ರಾರಂಭಿಸಲಾಗಿದೆ. “ಶುದ್ಧಾಗಂಗಾ” ಹೆಸರಿನಲ್ಲಿ ರಾಜ್ಯದಲ್ಲಿ 371 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಪ್ರಾರಂಭಿಸಿದ್ದು, ಪ್ರತಿ ದಿನ 3,36,000 ಮಂದಿ ಶುದ್ಧ ನೀರನ್ನು ಬಳಸುತ್ತಿದ್ದಾರೆ. ಇದಕ್ಕಾಗಿ ಪ್ರತಿ ದಿನ 17 ಲಕ್ಷ ಲೀಟರ್ ಶುದ್ಧ ಕುಡಿಯುವ ನೀರನ್ನು ಈ ಘಟಕಗಳ ಮೂಲಕ ನೀಡಲಾಗುತ್ತದೆ.ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…