ಕೊಲ್ಲೂರು ಮತ್ತು ಕದ್ರಿಯಿಂದ ಮುಂದಿನ ತಿಂಗಳು ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣ ಯಾತ್ರೆ ಆಯೋಜಿಸಲಿದ್ದು, ಶುಕ್ರವಾರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ಮತ್ತು ಅಣ್ಣಪ್ಪ ಸ್ವಾಮಿ ಸನ್ನಿಧಿಯಲ್ಲಿ ಸಂಕಲ್ಪ ದಿನದ ಅಂಗವಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.
ಕೊಲ್ಲೂರು ಮೂಕಾಂಬಿಕ ದೇವಸ್ಥಾನ ಮತ್ತು ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನದಿಂದ ಪ್ರತ್ಯೇಕ ಎರಡು ರಥಗಳು ರಥಯಾತ್ರೆ ಆರಂಭಿಸಲಿವೆ. ಬಳಿಕ ನೇತ್ರಾವತಿ ಸ್ನಾನ ಘಟ್ಟದ ಮೂಲಕ ಧರ್ಮಸ್ಥಳಕ್ಕೆ ರಥಯಾತ್ರೆ ಸಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಗುವುದು.
ಧರ್ಮಸ್ಥಳದಲ್ಲಿ ಶುಕ್ರವಾರ ಮಾಣಿಲದ ಮೋಹನದಾಸ ಸ್ವಾಮೀಜಿ ನೇತೃತ್ವದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಧರ್ಮಸ್ಥಳದ ವಿರುದ್ಧ ಮಾಡುವ ಅಪಪ್ರಚಾರ ಮತ್ತು ಸುಳ್ಳು ವದಂತಿ ತಡೆಗಟ್ಟುವುದೇ ರಥಯಾತ್ರೆಯ ಉದ್ದೇಶವಾಗಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಂಕಲ್ಪ ದಿನದ ಅಂಗವಾಗಿ ರಥಯಾತ್ರೆ ಯಶಸ್ಸಿಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…