ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಷದ ವರ್ಧಂತ್ಯುತ್ಸವ ಸಮಾರಂಭದಲ್ಲಿ ಹೊಸ ಯೋಜನೆಗಳನ್ನು ಪ್ರಕಟಿಸಿದರು. ಮೈಸೂರಿನಲ್ಲಿ ಹೊಸ ವಸ್ತುಸಂಗ್ರ್ರಹಾಲಯ, ಉಡುಪಿಯಲ್ಲಿಆಯುರ್ವೇದ ಕಾಲೇಜಿಗೆ ನೂತನ ಕಟ್ಟಡ, ಧಾರವಾಡದಲ್ಲಿಕ್ಯಾನ್ಸರ್ ಚಿಕಿತ್ಸಾ ಘಟಕ ಮತ್ತು ಫಾರ್ಮಸಿ ಕಾಲೇಜು ಸದ್ಯದಲ್ಲೇ ಪ್ರಾರಂಭವಾಗಲಿವೆ.
ಪ್ರತೀ ವರ್ಷಪಟ್ಟಾಭಿಷೇಕದ ವರ್ಧಂತ್ಯುತ್ಸವ ಸಂದರ್ಭ ವಿವಿಧ ಯೋಜನೆಗಳನ್ನು ಡಾ.ವೀರೇಂದ್ರ ಹೆಗ್ಗಡೆ ಅವರು ಪ್ರಕಟಿಸುತ್ತಾರೆ. ಈ ಬಾರಿ ಕೂಡಾ ಹೊಸ ಯೋಜನೆಗಳನ್ನು ಪ್ರಕಟಿಸಿದರು.
ಧರ್ಮಸ್ಥಳದಲ್ಲಿ ಅನ್ನದಾನ, ವಿದ್ಯಾದಾನ, ಔಷಧಿದಾನ ಮತ್ತು ಅಭಯದಾನ ನಿತ್ಯೋತ್ಸವವಾಗಿದ್ದುಇದರಜೊತೆಗೆ ಹೊಸ ಸೇವಾಕಾರ್ಯಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ.ಧಾರವಾಡದಲ್ಲಿರುವಎಸ್.ಡಿ.ಎಮ್. ವೈದ್ಯಕೀಯ ವಿಶ್ವವಿದ್ಯಾಲಯದೇಶದಲ್ಲೇ ಶ್ರೇಷ್ಠ ವಿಶ್ವವಿದ್ಯಾಲಯ ಎಂಬ ಮಾನ್ಯತೆ ಪಡೆದಿದೆ. ಅಲ್ಲಿನ ವೈದ್ಯಕೀಯ ಕಾಲೇಜು ದೇಶದಲ್ಲೇ ಒಂಭತ್ತನೇ ಸ್ಥಾನದಲ್ಲಿದೆ. ನರ್ಸಿಂಗ್ ಕಾಲೇಜು, ಫಿಸಿಯೋಥೆರಪಿ ಕಾಲೇಜು ಮತ್ತುಎಂಜಿನಿಯರಿಂಗ್ ಕಾಲೇಜು ಕೂಡಾ ನಿರ್ವಹಣೆಯ ಗುಣಮಟ್ಟ ಮತ್ತು ಪರೀಕ್ಷಾ ಫಲಿತಾಂಶದಲ್ಲಿಉನ್ನತ ಶ್ರೇಣಿಯನ್ನು ಹೊಂದಿವೆ ಎಂದು ಡಾ.ವೀರೇಂದ್ರ ಹೆಗ್ಗಡೆ ಹೇಳಿದರು.
ಧರ್ಮಸ್ಥಳದಲ್ಲಿ ಮೂರು ಹೊಸ ಕಲ್ಯಾಣ ಮಂಟಪಗಳನ್ನು ನಿರ್ಮಿಸಲಾಗುವುದು. ರಜತಾದ್ರಿ ವಸತಿಗೃಹಕ್ಕೆ 200 ಹೆಚ್ಚುವರಿ ಕೊಠಡಿಗಳನ್ನು ನಿರ್ಮಿಸಲಾಗುವುದು. ಅಳಿವಿನಂಚಿನಲ್ಲಿರುವ ಕೆರೆಗಳಿಗೆ ಕಾಯಕಲ್ಪ ನೀಡಲಾಗುತ್ತಿದೆಎಂದು ಹೆಗ್ಗಡೆಯವರು ಪ್ರಕಟಿಸಿದರು.
ಹಕ್ಕಿಗಳಿಗೆ ಗೂಡುಕಟ್ಟುವ ಮೂಲಕ ಪರಿಸರ ಸಂರಕ್ಷಣೆಗೆ ಪಣತೊಟ್ಟಿರುವ ದಂಪತಿಗಳು ಬಂಟ್ವಾಳ ತಾಲೂಕಿನಲ್ಲಿದ್ದಾರೆ. ಇವರ…
ಜಾಗತಿಕ ಮಟ್ಟದಲ್ಲಿ ಅಡಿಕೆ ಬೆಳೆಯ ವಿಸ್ತೀರ್ಣ ಮತ್ತು ಉತ್ಪಾದನೆಯಲ್ಲಿ ಭಾರತ ಮೊದಲನೇ ಸ್ಥಾನದಲ್ಲಿದೆ.ಇನ್ನು…
ಕೃಷಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಹಾರಾಷ್ಟ್ರ ರಾಜ್ಯ ಸರ್ಕಾರವು ಮುಂದಿನ ಐದು ವರ್ಷಗಳಲ್ಲಿ ಕೃಷಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದರ್ಶಿತ್ ಕೆ ಎಸ್, 3 ನೇ ತರಗತಿ, ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್, ಬೆಳ್ಳಾರೆದರ್ಶಿತ್…
ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ವರದಿ ನೀಡಲು ರಚಿಸಲಾಗಿದ್ದ ತಜ್ಞರ ಸಮಿತಿ…