Advertisement
ಸುದ್ದಿಗಳು

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ | ಹೊಸ ಯೋಜನೆಗಳು ಏನೇನು..?

Share

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಷದ ವರ್ಧಂತ್ಯುತ್ಸವ ಸಮಾರಂಭದಲ್ಲಿ ಹೊಸ ಯೋಜನೆಗಳನ್ನು ಪ್ರಕಟಿಸಿದರು. ಮೈಸೂರಿನಲ್ಲಿ ಹೊಸ ವಸ್ತುಸಂಗ್ರ್ರಹಾಲಯ, ಉಡುಪಿಯಲ್ಲಿಆಯುರ್ವೇದ ಕಾಲೇಜಿಗೆ ನೂತನ ಕಟ್ಟಡ,  ಧಾರವಾಡದಲ್ಲಿಕ್ಯಾನ್ಸರ್ ಚಿಕಿತ್ಸಾ ಘಟಕ ಮತ್ತು ಫಾರ್ಮಸಿ ಕಾಲೇಜು ಸದ್ಯದಲ್ಲೇ ಪ್ರಾರಂಭವಾಗಲಿವೆ.

ಪ್ರತೀ ವರ್ಷಪಟ್ಟಾಭಿಷೇಕದ  ವರ್ಧಂತ್ಯುತ್ಸವ ಸಂದರ್ಭ ವಿವಿಧ ಯೋಜನೆಗಳನ್ನು ಡಾ.ವೀರೇಂದ್ರ ಹೆಗ್ಗಡೆ ಅವರು ಪ್ರಕಟಿಸುತ್ತಾರೆ. ಈ ಬಾರಿ ಕೂಡಾ  ಹೊಸ ಯೋಜನೆಗಳನ್ನು ಪ್ರಕಟಿಸಿದರು.

ಧರ್ಮಸ್ಥಳದಲ್ಲಿ ಅನ್ನದಾನ, ವಿದ್ಯಾದಾನ, ಔಷಧಿದಾನ ಮತ್ತು ಅಭಯದಾನ ನಿತ್ಯೋತ್ಸವವಾಗಿದ್ದುಇದರಜೊತೆಗೆ ಹೊಸ ಸೇವಾಕಾರ್ಯಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ.ಧಾರವಾಡದಲ್ಲಿರುವಎಸ್.ಡಿ.ಎಮ್. ವೈದ್ಯಕೀಯ ವಿಶ್ವವಿದ್ಯಾಲಯದೇಶದಲ್ಲೇ ಶ್ರೇಷ್ಠ ವಿಶ್ವವಿದ್ಯಾಲಯ ಎಂಬ ಮಾನ್ಯತೆ ಪಡೆದಿದೆ. ಅಲ್ಲಿನ ವೈದ್ಯಕೀಯ ಕಾಲೇಜು ದೇಶದಲ್ಲೇ ಒಂಭತ್ತನೇ ಸ್ಥಾನದಲ್ಲಿದೆ. ನರ್ಸಿಂಗ್ ಕಾಲೇಜು, ಫಿಸಿಯೋಥೆರಪಿ ಕಾಲೇಜು ಮತ್ತುಎಂಜಿನಿಯರಿಂಗ್‍ ಕಾಲೇಜು ಕೂಡಾ ನಿರ್ವಹಣೆಯ ಗುಣಮಟ್ಟ ಮತ್ತು ಪರೀಕ್ಷಾ ಫಲಿತಾಂಶದಲ್ಲಿಉನ್ನತ ಶ್ರೇಣಿಯನ್ನು ಹೊಂದಿವೆ ಎಂದು ಡಾ.ವೀರೇಂದ್ರ ಹೆಗ್ಗಡೆ ಹೇಳಿದರು.

ಧರ್ಮಸ್ಥಳದಲ್ಲಿ ಮೂರು ಹೊಸ ಕಲ್ಯಾಣ ಮಂಟಪಗಳನ್ನು ನಿರ್ಮಿಸಲಾಗುವುದು. ರಜತಾದ್ರಿ ವಸತಿಗೃಹಕ್ಕೆ 200 ಹೆಚ್ಚುವರಿ ಕೊಠಡಿಗಳನ್ನು ನಿರ್ಮಿಸಲಾಗುವುದು. ಅಳಿವಿನಂಚಿನಲ್ಲಿರುವ ಕೆರೆಗಳಿಗೆ ಕಾಯಕಲ್ಪ ನೀಡಲಾಗುತ್ತಿದೆಎಂದು ಹೆಗ್ಗಡೆಯವರು ಪ್ರಕಟಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

3 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

4 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

4 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

12 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

12 hours ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

14 hours ago