ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಷದ ವರ್ಧಂತ್ಯುತ್ಸವ ಸಮಾರಂಭದಲ್ಲಿ ಹೊಸ ಯೋಜನೆಗಳನ್ನು ಪ್ರಕಟಿಸಿದರು. ಮೈಸೂರಿನಲ್ಲಿ ಹೊಸ ವಸ್ತುಸಂಗ್ರ್ರಹಾಲಯ, ಉಡುಪಿಯಲ್ಲಿಆಯುರ್ವೇದ ಕಾಲೇಜಿಗೆ ನೂತನ ಕಟ್ಟಡ, ಧಾರವಾಡದಲ್ಲಿಕ್ಯಾನ್ಸರ್ ಚಿಕಿತ್ಸಾ ಘಟಕ ಮತ್ತು ಫಾರ್ಮಸಿ ಕಾಲೇಜು ಸದ್ಯದಲ್ಲೇ ಪ್ರಾರಂಭವಾಗಲಿವೆ.
ಪ್ರತೀ ವರ್ಷಪಟ್ಟಾಭಿಷೇಕದ ವರ್ಧಂತ್ಯುತ್ಸವ ಸಂದರ್ಭ ವಿವಿಧ ಯೋಜನೆಗಳನ್ನು ಡಾ.ವೀರೇಂದ್ರ ಹೆಗ್ಗಡೆ ಅವರು ಪ್ರಕಟಿಸುತ್ತಾರೆ. ಈ ಬಾರಿ ಕೂಡಾ ಹೊಸ ಯೋಜನೆಗಳನ್ನು ಪ್ರಕಟಿಸಿದರು.
ಧರ್ಮಸ್ಥಳದಲ್ಲಿ ಅನ್ನದಾನ, ವಿದ್ಯಾದಾನ, ಔಷಧಿದಾನ ಮತ್ತು ಅಭಯದಾನ ನಿತ್ಯೋತ್ಸವವಾಗಿದ್ದುಇದರಜೊತೆಗೆ ಹೊಸ ಸೇವಾಕಾರ್ಯಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ.ಧಾರವಾಡದಲ್ಲಿರುವಎಸ್.ಡಿ.ಎಮ್. ವೈದ್ಯಕೀಯ ವಿಶ್ವವಿದ್ಯಾಲಯದೇಶದಲ್ಲೇ ಶ್ರೇಷ್ಠ ವಿಶ್ವವಿದ್ಯಾಲಯ ಎಂಬ ಮಾನ್ಯತೆ ಪಡೆದಿದೆ. ಅಲ್ಲಿನ ವೈದ್ಯಕೀಯ ಕಾಲೇಜು ದೇಶದಲ್ಲೇ ಒಂಭತ್ತನೇ ಸ್ಥಾನದಲ್ಲಿದೆ. ನರ್ಸಿಂಗ್ ಕಾಲೇಜು, ಫಿಸಿಯೋಥೆರಪಿ ಕಾಲೇಜು ಮತ್ತುಎಂಜಿನಿಯರಿಂಗ್ ಕಾಲೇಜು ಕೂಡಾ ನಿರ್ವಹಣೆಯ ಗುಣಮಟ್ಟ ಮತ್ತು ಪರೀಕ್ಷಾ ಫಲಿತಾಂಶದಲ್ಲಿಉನ್ನತ ಶ್ರೇಣಿಯನ್ನು ಹೊಂದಿವೆ ಎಂದು ಡಾ.ವೀರೇಂದ್ರ ಹೆಗ್ಗಡೆ ಹೇಳಿದರು.
ಧರ್ಮಸ್ಥಳದಲ್ಲಿ ಮೂರು ಹೊಸ ಕಲ್ಯಾಣ ಮಂಟಪಗಳನ್ನು ನಿರ್ಮಿಸಲಾಗುವುದು. ರಜತಾದ್ರಿ ವಸತಿಗೃಹಕ್ಕೆ 200 ಹೆಚ್ಚುವರಿ ಕೊಠಡಿಗಳನ್ನು ನಿರ್ಮಿಸಲಾಗುವುದು. ಅಳಿವಿನಂಚಿನಲ್ಲಿರುವ ಕೆರೆಗಳಿಗೆ ಕಾಯಕಲ್ಪ ನೀಡಲಾಗುತ್ತಿದೆಎಂದು ಹೆಗ್ಗಡೆಯವರು ಪ್ರಕಟಿಸಿದರು.
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…