ಎಲ್ಲರೂ ರಾಮನಾಗಲು ಸಾಧ್ಯವಿಲ್ಲ, ಆದರೆ ಆತನ ಆದರ್ಶ ಗುಣಗಳನ್ನಾದರೂ ಪಾಲಿಸಬೇಕು | ಧರ್ಮಸ್ಥಳದಲ್ಲಿ ಹೇಮಾವತಿ ವೀ. ಹೆಗ್ಗಡೆ

January 22, 2024
3:57 PM
ಧರ್ಮಸ್ಥಳದಲ್ಲಿ ಸೋಮವಾರ ಅಮೃತವರ್ಷಿಣಿ ಸಭಾಭವನದಲ್ಲಿ ರಾಮನಾಮ ತಾರಕ ಮಂತ್ರ ಪಠಣಕ್ಕೆ ಚಾಲನೆ ನೀಡಲಾಯಿತು.

ಮರ್ಯಾದಾ ಪುರುಷೋತ್ತಮನಾಗಿ ಮೆರೆದ ಶ್ರೀರಾಮ ಪಿತೃವಾಕ್ಯ ಪರಿಪಾಲನೆ, ಕುಟುಂಬದವರ ಮೇಲಿನ ಪ್ರೀತಿ-ವಿಶ್ವಾಸ, ಸತ್ಯ-ಧರ್ಮ, ನ್ಯಾಯ-ನೀತಿ ಪರಿಪಾಲನೆ, ತಾಳ್ಮೆ, ದೃಢಸಂಕಲ್ಪ ಮೊದಲಾದ ಮಾನವೀಯಮೌಲ್ಯ ಹಾಗೂ ನೈತಿಕಗುಣಗಳಿಂದಾಗಿ ಸಾವಿರಾರು ವರ್ಷಗಳಿಂದ ಲಕ್ಷಾಂತರ ಜನರ ಪ್ರತಿ ಮನದಲ್ಲಿಯೂ, ಮನೆಯಲ್ಲಿಯೂ ಸ್ಥಿರವಾಗಿ ನೆಲೆಸಿದ್ದಾನೆ. ರಾಮನ ಹೆಸರು ನಮ್ಮ ಉಸಿರಾಗಬೇಕು. ಎಲ್ಲರೂ ರಾಮನಾಗಲು ಅಸಾಧ್ಯ. ಆದರೆ ರಾಮನ ಆದರ್ಶ ಗುಣಗಳನ್ನಾದರೂ ಪಾಲಿಸಿ ರಾಮರಾಜ್ಯದ ಕನಸು ನನಸಾಗಬೇಕು ಎಂದು ಹೇಮಾವತಿ ವೀ. ಹೆಗ್ಗಡೆಯವರು ಹೇಳಿದರು.

Advertisement

ಅವರು ಧರ್ಮಸ್ಥಳದಲ್ಲಿ ಸೋಮವಾರ ಅಮೃತವರ್ಷಿಣಿ ಸಭಾಭವನದಲ್ಲಿ ರಾಮನಾಮ ತಾರಕ ಮಂತ್ರ ಪಠಣಕ್ಕೆ ಚಾಲನೆ ನೀಡಿ ಮಾತನಾಡಿದರು. ರಾಮನನ್ನು ಹಲವರು ದೇವರಾಗಿ ಆರಾಧಿಸಿದರೆ ಅನೇಕ ಮಂದಿ ಆತನ ಆದರ್ಶ, ಮಾನವೀಯ ಗುಣಗಳಿಗಾಗಿ ಗೌರವಿಸಿ ಅನುಸರಿಸುತ್ತಾರೆ.

ಅಯೋಧ್ಯೆಯಲ್ಲಿ ರಾಮನ ಮೂರ್ತಿಯ ಪ್ರಾಣಪ್ರತಿಷ್ಠೆಯೊಂದಿಗೆ ಅದು ಧರ್ಮಸ್ಥಳದಂತೆ ಸರ್ವಧರ್ಮೀಯರ ಶ್ರದ್ಧಾ-ಭಕ್ತಿಯ ಕೇಂದ್ರವಾಗಿ ಬೆಳೆಯಲಿದೆ, ಬೆಳಗಲಿದೆ. ಅಯೋಧ್ಯೆಯೂ ಹಲವು ಮಂದಿ ತೀರ್ಥಂಕರರ ಜನ್ಮಸ್ಥಳವಾಗಿದ್ದು ಜೈನರಿಗೂ ಪವಿತ್ರ ತೀರ್ಥಕ್ಷೇತ್ರವಾಗಿದೆ ಎಂದು ಅವರು ಹೇಳಿದರು.

ಸಾಹಿತಿಗಳು, ಕವಿಗಳು, ರಾಮಾಯಣ ಗ್ರಂಥ ರಚನೆ ಮೂಲಕ ಪದ್ಯ, ನಾಟಕ, ಹರಿಕಥೆ, ಯಕ್ಷಗಾನ ಮೂಲಕ ರಾಮನ ಜೀವನ-ಸಾಧನೆ ಚಿತ್ರಿಸಿದ್ದಾರೆ. ವೈವಿಧ್ಯಮಯ ರಾಮಾಯಣ ಕೃತಿಗಳು ಪ್ರಕಟವಾಗಿವೆ. ಟಿ.ವಿ.ಯಲ್ಲಿ ರಮಾನಂದ ಸಾಗರರ ನೇತೃತ್ವದಲ್ಲಿ ಪ್ರಸಾರವಾದ ರಾಮಾಯಣ ಕೋಟ್ಯಾಂತರ ಜನರ ಮುಕ್ತ ಪ್ರಶಂಸೆಗೆ ಪಾತ್ರವಾಗಿದೆ. ಮಾನಸಿಕ ಸ್ಥಿರತೆ ಹಾಗೂ ಮಾನವೀಯ ಮೌಲ್ಯಗಳಿಗಾಗಿ ರಾಮ ಕೋಟ್ಯಾಂತರ ಜನರ ಮನದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ದೃಢಸಂಕಲ್ಪ ಹಾಗೂ ಲಕ್ಷಾಂತರ ಭಕ್ತರ ಕಠಿಣ ವ್ರತ-ನಿಯಮಗಳ ಪಾಲನೆ, ಶ್ರದ್ಧಾಭಕ್ತಿಯಿಂದ ರಾಮಮಂದಿರದ ಕನಸು ನನಸಾಗಿದೆ. ಸೇವೆ ಮಾಡುವುದಕ್ಕಿಂತಲೂ ಸೇವೆ ಮಾಡಬೇಕೆನ್ನುವ ಹಂಬಲ ಮುಖ್ಯವಾಗಿದೆ ಎಂದು ಹೇಳಿ ಹೇಮಾವತಿ ಹೆಗ್ಗಡೆಯವರು ರಾಮನಾಮತಾರಕ ಮಂತ್ರ ಪಠಣಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.

ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.

ಬೆಳ್ತಂಗಡಿ ತಾಲ್ಲೂಕಿನ ಎಲ್ಲಾ ದೇವಸ್ಥಾನಗಳಲ್ಲಿ ವಿಶೇಷ ಪೂಜೆಯೊಂದಿಗೆ ಸಾಮೂಹಿಕ ಭಜನೆ ಹಾಗೂ ರಾಮನಾಮತಾರಕ ಮಂತ್ರ ಪಠಿಸಲಾಯಿತು.ಇದೇ ಸಂದರ್ಭದಲ್ಲಿ ಆಯೋಧ್ಯೆಯ ರಾಮಜನ್ಮಭೂಮಿಯ ಕರಸೇವೆಯಲ್ಲಿ ಭಾಗಿಯಾದ ಕೆಲವರನ್ನು ಸನ್ಮಾನಿಸಲಾಯಿತು

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಆಮದು | ಮಿಜೋರಾಂ ಅಡಿಕೆ ಬೆಳೆಗಾರರಿಗೆ ಸವಾಲು
April 10, 2025
9:58 AM
by: The Rural Mirror ಸುದ್ದಿಜಾಲ
ಉತ್ತರ ಭಾರತದಲ್ಲಿ ಆವರಿಸಿದ ಬಿಸಿಗಾಳಿ | 27 ಹವಾಮಾನ ಕೇಂದ್ರಗಳಲ್ಲಿ 43 ಡಿಗ್ರಿಗಿಂತ ಹೆಚ್ಚಿನ ತಾಪಮಾನ |
April 10, 2025
8:13 AM
by: ದ ರೂರಲ್ ಮಿರರ್.ಕಾಂ
ಹೊಸರುಚಿ | ಗುಜ್ಜೆ ಕಡಲೆ ಗಸಿ
April 10, 2025
8:00 AM
by: ದಿವ್ಯ ಮಹೇಶ್
ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆಗೆ ಪ್ರಧಾನಿ ಕರೆ
April 10, 2025
7:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group