ಮರ್ಯಾದಾ ಪುರುಷೋತ್ತಮನಾಗಿ ಮೆರೆದ ಶ್ರೀರಾಮ ಪಿತೃವಾಕ್ಯ ಪರಿಪಾಲನೆ, ಕುಟುಂಬದವರ ಮೇಲಿನ ಪ್ರೀತಿ-ವಿಶ್ವಾಸ, ಸತ್ಯ-ಧರ್ಮ, ನ್ಯಾಯ-ನೀತಿ ಪರಿಪಾಲನೆ, ತಾಳ್ಮೆ, ದೃಢಸಂಕಲ್ಪ ಮೊದಲಾದ ಮಾನವೀಯಮೌಲ್ಯ ಹಾಗೂ ನೈತಿಕಗುಣಗಳಿಂದಾಗಿ ಸಾವಿರಾರು ವರ್ಷಗಳಿಂದ ಲಕ್ಷಾಂತರ ಜನರ ಪ್ರತಿ ಮನದಲ್ಲಿಯೂ, ಮನೆಯಲ್ಲಿಯೂ ಸ್ಥಿರವಾಗಿ ನೆಲೆಸಿದ್ದಾನೆ. ರಾಮನ ಹೆಸರು ನಮ್ಮ ಉಸಿರಾಗಬೇಕು. ಎಲ್ಲರೂ ರಾಮನಾಗಲು ಅಸಾಧ್ಯ. ಆದರೆ ರಾಮನ ಆದರ್ಶ ಗುಣಗಳನ್ನಾದರೂ ಪಾಲಿಸಿ ರಾಮರಾಜ್ಯದ ಕನಸು ನನಸಾಗಬೇಕು ಎಂದು ಹೇಮಾವತಿ ವೀ. ಹೆಗ್ಗಡೆಯವರು ಹೇಳಿದರು.
ಅವರು ಧರ್ಮಸ್ಥಳದಲ್ಲಿ ಸೋಮವಾರ ಅಮೃತವರ್ಷಿಣಿ ಸಭಾಭವನದಲ್ಲಿ ರಾಮನಾಮ ತಾರಕ ಮಂತ್ರ ಪಠಣಕ್ಕೆ ಚಾಲನೆ ನೀಡಿ ಮಾತನಾಡಿದರು. ರಾಮನನ್ನು ಹಲವರು ದೇವರಾಗಿ ಆರಾಧಿಸಿದರೆ ಅನೇಕ ಮಂದಿ ಆತನ ಆದರ್ಶ, ಮಾನವೀಯ ಗುಣಗಳಿಗಾಗಿ ಗೌರವಿಸಿ ಅನುಸರಿಸುತ್ತಾರೆ.
ಅಯೋಧ್ಯೆಯಲ್ಲಿ ರಾಮನ ಮೂರ್ತಿಯ ಪ್ರಾಣಪ್ರತಿಷ್ಠೆಯೊಂದಿಗೆ ಅದು ಧರ್ಮಸ್ಥಳದಂತೆ ಸರ್ವಧರ್ಮೀಯರ ಶ್ರದ್ಧಾ-ಭಕ್ತಿಯ ಕೇಂದ್ರವಾಗಿ ಬೆಳೆಯಲಿದೆ, ಬೆಳಗಲಿದೆ. ಅಯೋಧ್ಯೆಯೂ ಹಲವು ಮಂದಿ ತೀರ್ಥಂಕರರ ಜನ್ಮಸ್ಥಳವಾಗಿದ್ದು ಜೈನರಿಗೂ ಪವಿತ್ರ ತೀರ್ಥಕ್ಷೇತ್ರವಾಗಿದೆ ಎಂದು ಅವರು ಹೇಳಿದರು.
ಸಾಹಿತಿಗಳು, ಕವಿಗಳು, ರಾಮಾಯಣ ಗ್ರಂಥ ರಚನೆ ಮೂಲಕ ಪದ್ಯ, ನಾಟಕ, ಹರಿಕಥೆ, ಯಕ್ಷಗಾನ ಮೂಲಕ ರಾಮನ ಜೀವನ-ಸಾಧನೆ ಚಿತ್ರಿಸಿದ್ದಾರೆ. ವೈವಿಧ್ಯಮಯ ರಾಮಾಯಣ ಕೃತಿಗಳು ಪ್ರಕಟವಾಗಿವೆ. ಟಿ.ವಿ.ಯಲ್ಲಿ ರಮಾನಂದ ಸಾಗರರ ನೇತೃತ್ವದಲ್ಲಿ ಪ್ರಸಾರವಾದ ರಾಮಾಯಣ ಕೋಟ್ಯಾಂತರ ಜನರ ಮುಕ್ತ ಪ್ರಶಂಸೆಗೆ ಪಾತ್ರವಾಗಿದೆ. ಮಾನಸಿಕ ಸ್ಥಿರತೆ ಹಾಗೂ ಮಾನವೀಯ ಮೌಲ್ಯಗಳಿಗಾಗಿ ರಾಮ ಕೋಟ್ಯಾಂತರ ಜನರ ಮನದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ದೃಢಸಂಕಲ್ಪ ಹಾಗೂ ಲಕ್ಷಾಂತರ ಭಕ್ತರ ಕಠಿಣ ವ್ರತ-ನಿಯಮಗಳ ಪಾಲನೆ, ಶ್ರದ್ಧಾಭಕ್ತಿಯಿಂದ ರಾಮಮಂದಿರದ ಕನಸು ನನಸಾಗಿದೆ. ಸೇವೆ ಮಾಡುವುದಕ್ಕಿಂತಲೂ ಸೇವೆ ಮಾಡಬೇಕೆನ್ನುವ ಹಂಬಲ ಮುಖ್ಯವಾಗಿದೆ ಎಂದು ಹೇಳಿ ಹೇಮಾವತಿ ಹೆಗ್ಗಡೆಯವರು ರಾಮನಾಮತಾರಕ ಮಂತ್ರ ಪಠಣಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.
ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.
ಬೆಳ್ತಂಗಡಿ ತಾಲ್ಲೂಕಿನ ಎಲ್ಲಾ ದೇವಸ್ಥಾನಗಳಲ್ಲಿ ವಿಶೇಷ ಪೂಜೆಯೊಂದಿಗೆ ಸಾಮೂಹಿಕ ಭಜನೆ ಹಾಗೂ ರಾಮನಾಮತಾರಕ ಮಂತ್ರ ಪಠಿಸಲಾಯಿತು.ಇದೇ ಸಂದರ್ಭದಲ್ಲಿ ಆಯೋಧ್ಯೆಯ ರಾಮಜನ್ಮಭೂಮಿಯ ಕರಸೇವೆಯಲ್ಲಿ ಭಾಗಿಯಾದ ಕೆಲವರನ್ನು ಸನ್ಮಾನಿಸಲಾಯಿತು
ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ ಧಾರಾಕಾರ…
ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…