Advertisement
ಸುದ್ದಿಗಳು

ಎಲ್ಲರೂ ರಾಮನಾಗಲು ಸಾಧ್ಯವಿಲ್ಲ, ಆದರೆ ಆತನ ಆದರ್ಶ ಗುಣಗಳನ್ನಾದರೂ ಪಾಲಿಸಬೇಕು | ಧರ್ಮಸ್ಥಳದಲ್ಲಿ ಹೇಮಾವತಿ ವೀ. ಹೆಗ್ಗಡೆ

Share

ಮರ್ಯಾದಾ ಪುರುಷೋತ್ತಮನಾಗಿ ಮೆರೆದ ಶ್ರೀರಾಮ ಪಿತೃವಾಕ್ಯ ಪರಿಪಾಲನೆ, ಕುಟುಂಬದವರ ಮೇಲಿನ ಪ್ರೀತಿ-ವಿಶ್ವಾಸ, ಸತ್ಯ-ಧರ್ಮ, ನ್ಯಾಯ-ನೀತಿ ಪರಿಪಾಲನೆ, ತಾಳ್ಮೆ, ದೃಢಸಂಕಲ್ಪ ಮೊದಲಾದ ಮಾನವೀಯಮೌಲ್ಯ ಹಾಗೂ ನೈತಿಕಗುಣಗಳಿಂದಾಗಿ ಸಾವಿರಾರು ವರ್ಷಗಳಿಂದ ಲಕ್ಷಾಂತರ ಜನರ ಪ್ರತಿ ಮನದಲ್ಲಿಯೂ, ಮನೆಯಲ್ಲಿಯೂ ಸ್ಥಿರವಾಗಿ ನೆಲೆಸಿದ್ದಾನೆ. ರಾಮನ ಹೆಸರು ನಮ್ಮ ಉಸಿರಾಗಬೇಕು. ಎಲ್ಲರೂ ರಾಮನಾಗಲು ಅಸಾಧ್ಯ. ಆದರೆ ರಾಮನ ಆದರ್ಶ ಗುಣಗಳನ್ನಾದರೂ ಪಾಲಿಸಿ ರಾಮರಾಜ್ಯದ ಕನಸು ನನಸಾಗಬೇಕು ಎಂದು ಹೇಮಾವತಿ ವೀ. ಹೆಗ್ಗಡೆಯವರು ಹೇಳಿದರು.

ಅವರು ಧರ್ಮಸ್ಥಳದಲ್ಲಿ ಸೋಮವಾರ ಅಮೃತವರ್ಷಿಣಿ ಸಭಾಭವನದಲ್ಲಿ ರಾಮನಾಮ ತಾರಕ ಮಂತ್ರ ಪಠಣಕ್ಕೆ ಚಾಲನೆ ನೀಡಿ ಮಾತನಾಡಿದರು. ರಾಮನನ್ನು ಹಲವರು ದೇವರಾಗಿ ಆರಾಧಿಸಿದರೆ ಅನೇಕ ಮಂದಿ ಆತನ ಆದರ್ಶ, ಮಾನವೀಯ ಗುಣಗಳಿಗಾಗಿ ಗೌರವಿಸಿ ಅನುಸರಿಸುತ್ತಾರೆ.

ಅಯೋಧ್ಯೆಯಲ್ಲಿ ರಾಮನ ಮೂರ್ತಿಯ ಪ್ರಾಣಪ್ರತಿಷ್ಠೆಯೊಂದಿಗೆ ಅದು ಧರ್ಮಸ್ಥಳದಂತೆ ಸರ್ವಧರ್ಮೀಯರ ಶ್ರದ್ಧಾ-ಭಕ್ತಿಯ ಕೇಂದ್ರವಾಗಿ ಬೆಳೆಯಲಿದೆ, ಬೆಳಗಲಿದೆ. ಅಯೋಧ್ಯೆಯೂ ಹಲವು ಮಂದಿ ತೀರ್ಥಂಕರರ ಜನ್ಮಸ್ಥಳವಾಗಿದ್ದು ಜೈನರಿಗೂ ಪವಿತ್ರ ತೀರ್ಥಕ್ಷೇತ್ರವಾಗಿದೆ ಎಂದು ಅವರು ಹೇಳಿದರು.

ಸಾಹಿತಿಗಳು, ಕವಿಗಳು, ರಾಮಾಯಣ ಗ್ರಂಥ ರಚನೆ ಮೂಲಕ ಪದ್ಯ, ನಾಟಕ, ಹರಿಕಥೆ, ಯಕ್ಷಗಾನ ಮೂಲಕ ರಾಮನ ಜೀವನ-ಸಾಧನೆ ಚಿತ್ರಿಸಿದ್ದಾರೆ. ವೈವಿಧ್ಯಮಯ ರಾಮಾಯಣ ಕೃತಿಗಳು ಪ್ರಕಟವಾಗಿವೆ. ಟಿ.ವಿ.ಯಲ್ಲಿ ರಮಾನಂದ ಸಾಗರರ ನೇತೃತ್ವದಲ್ಲಿ ಪ್ರಸಾರವಾದ ರಾಮಾಯಣ ಕೋಟ್ಯಾಂತರ ಜನರ ಮುಕ್ತ ಪ್ರಶಂಸೆಗೆ ಪಾತ್ರವಾಗಿದೆ. ಮಾನಸಿಕ ಸ್ಥಿರತೆ ಹಾಗೂ ಮಾನವೀಯ ಮೌಲ್ಯಗಳಿಗಾಗಿ ರಾಮ ಕೋಟ್ಯಾಂತರ ಜನರ ಮನದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ದೃಢಸಂಕಲ್ಪ ಹಾಗೂ ಲಕ್ಷಾಂತರ ಭಕ್ತರ ಕಠಿಣ ವ್ರತ-ನಿಯಮಗಳ ಪಾಲನೆ, ಶ್ರದ್ಧಾಭಕ್ತಿಯಿಂದ ರಾಮಮಂದಿರದ ಕನಸು ನನಸಾಗಿದೆ. ಸೇವೆ ಮಾಡುವುದಕ್ಕಿಂತಲೂ ಸೇವೆ ಮಾಡಬೇಕೆನ್ನುವ ಹಂಬಲ ಮುಖ್ಯವಾಗಿದೆ ಎಂದು ಹೇಳಿ ಹೇಮಾವತಿ ಹೆಗ್ಗಡೆಯವರು ರಾಮನಾಮತಾರಕ ಮಂತ್ರ ಪಠಣಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.

ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.

ಬೆಳ್ತಂಗಡಿ ತಾಲ್ಲೂಕಿನ ಎಲ್ಲಾ ದೇವಸ್ಥಾನಗಳಲ್ಲಿ ವಿಶೇಷ ಪೂಜೆಯೊಂದಿಗೆ ಸಾಮೂಹಿಕ ಭಜನೆ ಹಾಗೂ ರಾಮನಾಮತಾರಕ ಮಂತ್ರ ಪಠಿಸಲಾಯಿತು.ಇದೇ ಸಂದರ್ಭದಲ್ಲಿ ಆಯೋಧ್ಯೆಯ ರಾಮಜನ್ಮಭೂಮಿಯ ಕರಸೇವೆಯಲ್ಲಿ ಭಾಗಿಯಾದ ಕೆಲವರನ್ನು ಸನ್ಮಾನಿಸಲಾಯಿತು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

23 hours ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

23 hours ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

1 day ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

2 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

3 days ago