Advertisement
ಸುದ್ದಿಗಳು

ಎಲ್ಲರೂ ರಾಮನಾಗಲು ಸಾಧ್ಯವಿಲ್ಲ, ಆದರೆ ಆತನ ಆದರ್ಶ ಗುಣಗಳನ್ನಾದರೂ ಪಾಲಿಸಬೇಕು | ಧರ್ಮಸ್ಥಳದಲ್ಲಿ ಹೇಮಾವತಿ ವೀ. ಹೆಗ್ಗಡೆ

Share

ಮರ್ಯಾದಾ ಪುರುಷೋತ್ತಮನಾಗಿ ಮೆರೆದ ಶ್ರೀರಾಮ ಪಿತೃವಾಕ್ಯ ಪರಿಪಾಲನೆ, ಕುಟುಂಬದವರ ಮೇಲಿನ ಪ್ರೀತಿ-ವಿಶ್ವಾಸ, ಸತ್ಯ-ಧರ್ಮ, ನ್ಯಾಯ-ನೀತಿ ಪರಿಪಾಲನೆ, ತಾಳ್ಮೆ, ದೃಢಸಂಕಲ್ಪ ಮೊದಲಾದ ಮಾನವೀಯಮೌಲ್ಯ ಹಾಗೂ ನೈತಿಕಗುಣಗಳಿಂದಾಗಿ ಸಾವಿರಾರು ವರ್ಷಗಳಿಂದ ಲಕ್ಷಾಂತರ ಜನರ ಪ್ರತಿ ಮನದಲ್ಲಿಯೂ, ಮನೆಯಲ್ಲಿಯೂ ಸ್ಥಿರವಾಗಿ ನೆಲೆಸಿದ್ದಾನೆ. ರಾಮನ ಹೆಸರು ನಮ್ಮ ಉಸಿರಾಗಬೇಕು. ಎಲ್ಲರೂ ರಾಮನಾಗಲು ಅಸಾಧ್ಯ. ಆದರೆ ರಾಮನ ಆದರ್ಶ ಗುಣಗಳನ್ನಾದರೂ ಪಾಲಿಸಿ ರಾಮರಾಜ್ಯದ ಕನಸು ನನಸಾಗಬೇಕು ಎಂದು ಹೇಮಾವತಿ ವೀ. ಹೆಗ್ಗಡೆಯವರು ಹೇಳಿದರು.

Advertisement
Advertisement

ಅವರು ಧರ್ಮಸ್ಥಳದಲ್ಲಿ ಸೋಮವಾರ ಅಮೃತವರ್ಷಿಣಿ ಸಭಾಭವನದಲ್ಲಿ ರಾಮನಾಮ ತಾರಕ ಮಂತ್ರ ಪಠಣಕ್ಕೆ ಚಾಲನೆ ನೀಡಿ ಮಾತನಾಡಿದರು. ರಾಮನನ್ನು ಹಲವರು ದೇವರಾಗಿ ಆರಾಧಿಸಿದರೆ ಅನೇಕ ಮಂದಿ ಆತನ ಆದರ್ಶ, ಮಾನವೀಯ ಗುಣಗಳಿಗಾಗಿ ಗೌರವಿಸಿ ಅನುಸರಿಸುತ್ತಾರೆ.

Advertisement

ಅಯೋಧ್ಯೆಯಲ್ಲಿ ರಾಮನ ಮೂರ್ತಿಯ ಪ್ರಾಣಪ್ರತಿಷ್ಠೆಯೊಂದಿಗೆ ಅದು ಧರ್ಮಸ್ಥಳದಂತೆ ಸರ್ವಧರ್ಮೀಯರ ಶ್ರದ್ಧಾ-ಭಕ್ತಿಯ ಕೇಂದ್ರವಾಗಿ ಬೆಳೆಯಲಿದೆ, ಬೆಳಗಲಿದೆ. ಅಯೋಧ್ಯೆಯೂ ಹಲವು ಮಂದಿ ತೀರ್ಥಂಕರರ ಜನ್ಮಸ್ಥಳವಾಗಿದ್ದು ಜೈನರಿಗೂ ಪವಿತ್ರ ತೀರ್ಥಕ್ಷೇತ್ರವಾಗಿದೆ ಎಂದು ಅವರು ಹೇಳಿದರು.

ಸಾಹಿತಿಗಳು, ಕವಿಗಳು, ರಾಮಾಯಣ ಗ್ರಂಥ ರಚನೆ ಮೂಲಕ ಪದ್ಯ, ನಾಟಕ, ಹರಿಕಥೆ, ಯಕ್ಷಗಾನ ಮೂಲಕ ರಾಮನ ಜೀವನ-ಸಾಧನೆ ಚಿತ್ರಿಸಿದ್ದಾರೆ. ವೈವಿಧ್ಯಮಯ ರಾಮಾಯಣ ಕೃತಿಗಳು ಪ್ರಕಟವಾಗಿವೆ. ಟಿ.ವಿ.ಯಲ್ಲಿ ರಮಾನಂದ ಸಾಗರರ ನೇತೃತ್ವದಲ್ಲಿ ಪ್ರಸಾರವಾದ ರಾಮಾಯಣ ಕೋಟ್ಯಾಂತರ ಜನರ ಮುಕ್ತ ಪ್ರಶಂಸೆಗೆ ಪಾತ್ರವಾಗಿದೆ. ಮಾನಸಿಕ ಸ್ಥಿರತೆ ಹಾಗೂ ಮಾನವೀಯ ಮೌಲ್ಯಗಳಿಗಾಗಿ ರಾಮ ಕೋಟ್ಯಾಂತರ ಜನರ ಮನದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ದೃಢಸಂಕಲ್ಪ ಹಾಗೂ ಲಕ್ಷಾಂತರ ಭಕ್ತರ ಕಠಿಣ ವ್ರತ-ನಿಯಮಗಳ ಪಾಲನೆ, ಶ್ರದ್ಧಾಭಕ್ತಿಯಿಂದ ರಾಮಮಂದಿರದ ಕನಸು ನನಸಾಗಿದೆ. ಸೇವೆ ಮಾಡುವುದಕ್ಕಿಂತಲೂ ಸೇವೆ ಮಾಡಬೇಕೆನ್ನುವ ಹಂಬಲ ಮುಖ್ಯವಾಗಿದೆ ಎಂದು ಹೇಳಿ ಹೇಮಾವತಿ ಹೆಗ್ಗಡೆಯವರು ರಾಮನಾಮತಾರಕ ಮಂತ್ರ ಪಠಣಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.

Advertisement

ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.

ಬೆಳ್ತಂಗಡಿ ತಾಲ್ಲೂಕಿನ ಎಲ್ಲಾ ದೇವಸ್ಥಾನಗಳಲ್ಲಿ ವಿಶೇಷ ಪೂಜೆಯೊಂದಿಗೆ ಸಾಮೂಹಿಕ ಭಜನೆ ಹಾಗೂ ರಾಮನಾಮತಾರಕ ಮಂತ್ರ ಪಠಿಸಲಾಯಿತು.ಇದೇ ಸಂದರ್ಭದಲ್ಲಿ ಆಯೋಧ್ಯೆಯ ರಾಮಜನ್ಮಭೂಮಿಯ ಕರಸೇವೆಯಲ್ಲಿ ಭಾಗಿಯಾದ ಕೆಲವರನ್ನು ಸನ್ಮಾನಿಸಲಾಯಿತು

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ | ಯುವ ಕೃಷಿಕರಿಗೆ ಕೃಷಿ ಬಗ್ಗೆ ಮಾಹಿತಿ

ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…

5 hours ago

ಕೆರೆಯಲ್ಲಿ ಸಾಕಿದ್ದ ಮೀನುಗಳ ಮಾರಣಹೋಮ | ಬೃಹತ್‌ ಗಾತ್ರ ಮೀನು ಸಾವು | ಅಪಾರ ನಷ್ಟ |

ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ  ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…

5 hours ago

ಮೇ 31ಕ್ಕೆ ದೇಶದಲ್ಲಿ ಮುಂಗಾರು ಪ್ರವೇಶ ಸಾಧ್ಯತೆ | ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಮಳೆ |

ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ…

5 hours ago

ಭಾರತ ಚಂದ್ರನಂಗಳದಲ್ಲಿದೆ | ನಮ್ಮ ಮಕ್ಕಳು ಚರಂಡಿಯಲ್ಲಿ ಬಿದ್ದು ಸಾಯುತ್ತಿದ್ದಾರೆ | ಪಾಕ್ ಸಂಸದ ಪಾಕ್‌ ಆಡಳಿತ ವಿರುದ್ಧ ಕಿಡಿ

ಭಾರತ (India) ಚಂದ್ರನನ್ನು(Moon) ತಲುಪಿದೆ. ಆದರೆ ನಮ್ಮ ಮಕ್ಕಳು(Children) ಇಲ್ಲಿ ಚರಂಡಿಯಲ್ಲಿ ಬಿದ್ದು…

5 hours ago

ಎರಡನೇ ವರ್ಷದ ಆನೆ ಗಣತಿಗೆ ದಕ್ಷಿಣ ಭಾರತದ 4 ರಾಜ್ಯಗಳು ಸಜ್ಜು | ಆನೆಗಳ ಸಂಖ್ಯೆ ಹೆಚ್ಚಳವಾಗಿದೆಯೇ..?

ಕರ್ನಾಟಕ(Karnataka), ತಮಿಳುನಾಡು(Tamilnadu), ಆಂಧ್ರಪ್ರದೇಶ(Andra Pradesh) ಮತ್ತು ಕೇರಳ(Kerala) ಒಳಗೊಂಡ ದಕ್ಷಿಣ ಭಾರತದ ನಾಲ್ಕು…

9 hours ago

Karnataka Weather |16-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ | ಮೇ 17 ರಿಂದ ಉತ್ತಮ ಮಳೆ ಸಾಧ್ಯತೆ |

ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ…

9 hours ago