Advertisement
ಸುದ್ದಿಗಳು

#Dharmasthala | ಧರ್ಮಸ್ಥಳದ ರಕ್ಷಣೆಗೆ ಯಾವುದೇ ತ್ಯಾಗಕ್ಕೂ ಸಿದ್ಧ | ಗ್ರಾಮಸ್ಥರ ನಿರ್ಧಾರ

Share

ಎಂಟು ಶತಮಾನಗಳ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳ ಸತ್ಯ, ಧರ್ಮ, ನ್ಯಾಯ, ನೀತಿ ನೆಲೆನಿಂತ ಪುಣ್ಯಸ್ಥಳ.ಈ ಗ್ರಾಮದಲ್ಲಿ ನಡೆದಿರುವ ಸೌಜನ್ಯ ಕೊಲೆ ಪ್ರಕರಣದ ಆರೋಪಿಯ ಪತ್ತೆಯಾಗಿ ಆತನಿಗೆ ಕಠಿಣ ಶಿಕ್ಷೆ ವಿಧಿಸಬೇಕು. ನ್ಯಾಯ ಒದಗಿಸಬೇಕು ಎಂಬುದು ಎಲ್ಲರ ಆಗ್ರಹವಾಗಿದೆ. ಆದರೆ ಇದರ ನೆಪದಲ್ಲಿ ಧರ್ಮಸ್ಥಳ ಕ್ಷೇತ್ರದ ಮೇಲೆ ನಡೆಯುತ್ತಿರುವ ಅವಹೇಳನ ಸರಿಯಲ್ಲ.ಧರ್ಮಸ್ಥಳದ ಪಾವಿತ್ರ್ಯ ರಕ್ಷಣೆಗೆ ಪ್ರಾಣತ್ಯಾಗಕ್ಕೂ ಸಿದ್ಧರಾಗಿದ್ದೇವೆ ಎಂದು ಧರ್ಮಸ್ಥಳದ ಗ್ರಾಮಸ್ಥರು ಹೇಳಿದ್ದಾರೆ.

ಧರ್ಮಸ್ಥಳದಲ್ಲಿ ಮಹೋತ್ಸವ ಸಭಾಭವನದಲ್ಲಿ  ಗುರುವಾರ ಗ್ರಾಮಸ್ಥರಿಂದ ಸುದ್ದಿಗೋಷ್ಟಿ ನಡೆಯಿತು. ಶ್ರೀನಿವಾಸ ರಾವ್ ಧರ್ಮಸ್ಥಳ, ಸಂದೀಪ್ ರೈ, ಛಾಯಾ, ಶಾಂಭವಿ ರೈ, ವಕೀಲ ಕೇಶವ ಬೆಳಾಲು, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಭಾಕರ ಪೂಜಾರಿ, ದಿವಾಕರ ರಾವ್, ವಾಹನಚಾಲಕರು ಮತ್ತು ಮಾಲಕರ ಸಂಘದ ಅಧ್ಯಕ್ಷ ವಿಠಲ ಶೆಟ್ಟಿ ಮೊದಲಾದವರು ಮಾತನಾಡಿದರು.  ಜೂನ್ ತಿಂಗಳ 17 ರಿಂದ ಸಾರ್ವಜನಿಕಸಭೆ, ಪತ್ರಿಕಾ ಗೋಷ್ಠಿ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಸಮಾಜದ ಏಕತೆ ಮತ್ತು ಸಮಗ್ರತೆಗೆ ಭಂಗ ಉಂಟು ಮಾಡುತ್ತಾ, ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಸುಳ್ಳು ವದಂತಿಗಳನ್ನು ಪಸರಿಸುತ್ತಿರುವುದು ಖೇದಕರವಾಗಿದೆ ಎಂದು ಧರ್ಮಸ್ಥಳದ ಗ್ರಾಮಸ್ಥರು ವಿಷಾದ ವ್ಯಕ್ತಪಡಿಸಿದ್ದಾರೆ.

ಇದೇ  ತಿಂಗಳ 25 ರಿಂದ  ಧರ್ಮಸ್ಥಳಕ್ಕೆ ಗುಂಪಾಗಿ ಬಂದು ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆ ಉಂಟುಮಾಡುವ ಸಂಚು ರೂಪಿಸುತ್ತಿರುವುದಾಗಿ ತಿಳಿದು ಬಂದಿದೆ.ಧರ್ಮಸ್ಥಳದ ಪಾವಿತ್ರ್ಯ ರಕ್ಷಣೆಗೆ ಪ್ರಾಣತ್ಯಾಗಕ್ಕೂ ಸಿದ್ಧರಾಗಿದ್ದೇವೆ ಎಂದು ಗ್ರಾಮಸ್ಥರು  ಪ್ರಕಟಿಸಿದರು.

ಸಾಮಾಜಿಕ ಶಾಂತಿ-ಸಾಮರಸ್ಯಕ್ಕೆ ಭಂಗ ತರುವವರ ವಿರುದ್ಧ ಪೊಲೀಸರಿಗೆ ದೂರು ನೀಡಿದರು

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಧರ್ಮಸ್ಥಳ, ನ್ಯಾಯಾಲಯ, ಸರ್ಕಾರ, ಸಂವಿಧಾನ, ಪೊಲೀಸ್ ಇಲಾಖೆ, ಸಿ.ಬಿ.ಐ. ಬಗ್ಗೆ ಸದಾ ಅವಹೇಳನ ಮಾಡುತ್ತಾ ಸಾಮಾಜಿಕ ಶಾಂತಿ-ಸಾಮರಸ್ಯಕ್ಕೆ ಭಂಗ ತರುವವರ  ಮತ್ತು ಅನುಯಾಯಿಗಳ ಮೇಲೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಗ್ರಾಮಸ್ಥರು ಧರ್ಮಸ್ಥಳ ಗ್ರಾಮ ಪಂಚಾಯತ್ ಮತ್ತು ಪೊಲೀಸ್‌ಠಾಣೆ ಮೂಲಕ ಜಿಲ್ಲಾಧಿಕಾರಿಗಳು, ರಾಜ್ಯ ಸರ್ಕಾರ, ಗೃಹ ಸಚಿವರು ಮತ್ತು ಎಸ್.ಪಿ. ಗೆ ಮನವಿ ಸಲ್ಲಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

21 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

21 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

22 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

22 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

22 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

1 day ago