Advertisement
ಸುದ್ದಿಗಳು

ಪ್ರಕೃತಿ ಚಿಕಿತ್ಸೆ-ಯೋಗವು ಆರೋಗ್ಯ ರಕ್ಷಣೆಯ ಶ್ರೇಷ್ಟ ವಿಧಾನ | ಧರ್ಮಸ್ಥಳದಲ್ಲಿ ಗೋವಾ ಸಿಎಂ |

Share

ಆರೋಗ್ಯ  ಕಾಪಾಡಲು ಸಾವಿರಾರು ವರ್ಷಗಳಿಂದ ಭಾರತದಲ್ಲಿ ಋಷಿ-ಮುನಿಗಳು ಪ್ರಶಾಂತ ಪ್ರಕೃತಿಯ ಮಡಿಲಲ್ಲಿ ಬಳಸುತ್ತಿದ್ದ ಪ್ರಕೃತಿ ಚಿಕಿತ್ಸಾ ಪದ್ಧತಿ ಮತ್ತುಯೋಗ ವಿಜ್ಞಾನವು ವಿಶ್ವದಲ್ಲೆಅತ್ಯಂತ ಜನಪ್ರಿಯ ಹಾಗೂ ಶ್ರೇಷ್ಠ ಶುಶ್ರೂಷಾ ವಿಧಾನವಾಗಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದರು.

ಅವರು ಶನಿವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿಉಜಿರೆಯ ಎಸ್.ಡಿ.ಎಂ.ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಕಾಲೇಜಿನ 230 ಪದವೀಧರರಿಗೆ ಪದವಿ ಪ್ರದಾನ ಮಾಡಿ ಶುಭ ಹಾರೈಸಿದರು. ಪ್ರಕೃತಿಯಲ್ಲಿರುವ ಪಂಚಭೂತಗಳನ್ನು ಬಳಸಿ ಪ್ರಕೃತಿ ಚಿಕಿತ್ಸಾ ಪದ್ಧತಿಯಲ್ಲಿ ರೋಗನಿರೋಧಕ  ಶಕ್ತಿಯನ್ನು ವೃದ್ಧಿಸಲಾಗುತ್ತದೆ.ಆಧುನಿಕಆಹಾರ ಸೇವನಾ ವಿಧಾನ, ಸದಾ ಒತ್ತಡ, ಭಯ, ಆತಂಕ ಮತ್ತುಗಡಿಬಿಡಿಯ ಜೀವನ ಶೈಲಿ ಹಾಗೂ ಸಕಾಲದಲ್ಲಿ ಊಟ, ನಿದ್ರೆ, ವಿಶ್ರಾಂತಿ ಮಾಡದಿರುವುದು ಮೊದಲಾದ ಹತ್ತು-ಹಲವು ಕಾರಣಗಳಿಂದ ಪಂಚೇಂದ್ರಿಯಗಳ ನಿಯಂತ್ರಣವಿಲ್ಲದೆ ಎಲ್ಲರೂ ಅನೇಕ ರೋಗಗಳಿಗೆ ಬಲಿಯಾಗುತ್ತಾರೆ ಎಂದರು. ಪ್ರಕೃತಿಚಿಕಿತ್ಸೆ ಮತ್ತುಯೋಗ ವಿಜ್ಞಾನದ ಬಗ್ಗೆ ಜನರಿಗೆ ವಿಶ್ವಾಸ ಮತ್ತುಗೌರವ ಬರುವಂತೆ ನೂತನ ಪದವೀಧರರು ಪ್ರಯತ್ನಿಸಬೇಕು ಎಂದರು.

ನೂತನ ಪದವೀಧರರಿಗೆ ಪ್ರತಿಜ್ಞಾವಿಧಿ ಬೋಧಿಸಿದ ರಾಜೀವ್‍ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಎಂ.ಕೆ. ರಮೇಶ್ ಮಾತನಾಡಿ, ಸಂಶೋಧನೆ ಮತ್ತುದಾಖಲಾತಿಗೆ ಹೆಚ್ಚಿನ ಒತ್ತು ನೀಡಿ, ನೂತನ ಪದವೀಧರರು ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ವೈದ್ಯ ವೃತ್ತಿ ಪವಿತ್ರವಾಗಿದ್ದುರೋಗಿಗಳ ಸೇವೆ ಮಾಡಬೇಕು. ಅಲೋಪತಿಗೆ ಕೇವಲ 200 ವರ್ಷಗಳ ಇತಿಹಾಸವಿದ್ದರೆ ಪ್ರಕೃತಿ ಚಿಕಿತ್ಸೆಗೆ ಸಾವಿರಾರು ವರ್ಷಗಳ ಹಿನ್ನೆಲೆ ಇದ್ದುಇಂದು ವಿಶ್ವದೆಲ್ಲೆಡೆ ಜನಪ್ರಯವಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಪಂಚೇಂದ್ರಿಯಗಳ ನಿಯಂತ್ರಣದೊಂದಿಗೆ ಸಕಾಲದಲ್ಲಿ ಹಿತ-ಮಿತ ಆಹಾರ ಸೇವನೆಯಿಂದ ಆರೋಗ್ಯಭಾಗ್ಯ ಹೊಂದಬಹುದು ಎಂದರು. ಹೇಮಾವತಿ ವೀ. ಹೆಗ್ಗಡೆ, ಡಿ. ಹರ್ಷೇಂದ್ರಕುಮಾರ್ ಮತ್ತುಸುಪ್ರಿಯಾ ಹರ್ಷೇಂದ್ರಕುಮಾರ್ ಉಪಸ್ಥಿತರಿದ್ದರು.

ಎಸ್.ಡಿ.ಎಂ.ಪ್ರಕೃತಿ ಚಿಕಿತ್ಸಾ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಶಾಂತ ಶೆಟ್ಟಿ ಸ್ವಾಗತಿಸಿದರು.ಜಲಚಿಕಿತ್ಸಾ ವಿಭಾಗದ ಡೀನ್‍ ಡಾ. ಸುಜಾತ ಧನ್ಯವಾದವಿತ್ತರು .ಡಾ. ಜೋಸ್ನಾ ಕಾರ್ಯಕ್ರಮ ನಿರ್ವಹಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

4 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

4 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

4 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

14 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

15 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

15 hours ago