ಆರೋಗ್ಯ ಕಾಪಾಡಲು ಸಾವಿರಾರು ವರ್ಷಗಳಿಂದ ಭಾರತದಲ್ಲಿ ಋಷಿ-ಮುನಿಗಳು ಪ್ರಶಾಂತ ಪ್ರಕೃತಿಯ ಮಡಿಲಲ್ಲಿ ಬಳಸುತ್ತಿದ್ದ ಪ್ರಕೃತಿ ಚಿಕಿತ್ಸಾ ಪದ್ಧತಿ ಮತ್ತುಯೋಗ ವಿಜ್ಞಾನವು ವಿಶ್ವದಲ್ಲೆಅತ್ಯಂತ ಜನಪ್ರಿಯ ಹಾಗೂ ಶ್ರೇಷ್ಠ ಶುಶ್ರೂಷಾ ವಿಧಾನವಾಗಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದರು.
ಅವರು ಶನಿವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿಉಜಿರೆಯ ಎಸ್.ಡಿ.ಎಂ.ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಕಾಲೇಜಿನ 230 ಪದವೀಧರರಿಗೆ ಪದವಿ ಪ್ರದಾನ ಮಾಡಿ ಶುಭ ಹಾರೈಸಿದರು. ಪ್ರಕೃತಿಯಲ್ಲಿರುವ ಪಂಚಭೂತಗಳನ್ನು ಬಳಸಿ ಪ್ರಕೃತಿ ಚಿಕಿತ್ಸಾ ಪದ್ಧತಿಯಲ್ಲಿ ರೋಗನಿರೋಧಕ ಶಕ್ತಿಯನ್ನು ವೃದ್ಧಿಸಲಾಗುತ್ತದೆ.ಆಧುನಿಕಆಹಾರ ಸೇವನಾ ವಿಧಾನ, ಸದಾ ಒತ್ತಡ, ಭಯ, ಆತಂಕ ಮತ್ತುಗಡಿಬಿಡಿಯ ಜೀವನ ಶೈಲಿ ಹಾಗೂ ಸಕಾಲದಲ್ಲಿ ಊಟ, ನಿದ್ರೆ, ವಿಶ್ರಾಂತಿ ಮಾಡದಿರುವುದು ಮೊದಲಾದ ಹತ್ತು-ಹಲವು ಕಾರಣಗಳಿಂದ ಪಂಚೇಂದ್ರಿಯಗಳ ನಿಯಂತ್ರಣವಿಲ್ಲದೆ ಎಲ್ಲರೂ ಅನೇಕ ರೋಗಗಳಿಗೆ ಬಲಿಯಾಗುತ್ತಾರೆ ಎಂದರು. ಪ್ರಕೃತಿಚಿಕಿತ್ಸೆ ಮತ್ತುಯೋಗ ವಿಜ್ಞಾನದ ಬಗ್ಗೆ ಜನರಿಗೆ ವಿಶ್ವಾಸ ಮತ್ತುಗೌರವ ಬರುವಂತೆ ನೂತನ ಪದವೀಧರರು ಪ್ರಯತ್ನಿಸಬೇಕು ಎಂದರು.
ನೂತನ ಪದವೀಧರರಿಗೆ ಪ್ರತಿಜ್ಞಾವಿಧಿ ಬೋಧಿಸಿದ ರಾಜೀವ್ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಎಂ.ಕೆ. ರಮೇಶ್ ಮಾತನಾಡಿ, ಸಂಶೋಧನೆ ಮತ್ತುದಾಖಲಾತಿಗೆ ಹೆಚ್ಚಿನ ಒತ್ತು ನೀಡಿ, ನೂತನ ಪದವೀಧರರು ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ವೈದ್ಯ ವೃತ್ತಿ ಪವಿತ್ರವಾಗಿದ್ದುರೋಗಿಗಳ ಸೇವೆ ಮಾಡಬೇಕು. ಅಲೋಪತಿಗೆ ಕೇವಲ 200 ವರ್ಷಗಳ ಇತಿಹಾಸವಿದ್ದರೆ ಪ್ರಕೃತಿ ಚಿಕಿತ್ಸೆಗೆ ಸಾವಿರಾರು ವರ್ಷಗಳ ಹಿನ್ನೆಲೆ ಇದ್ದುಇಂದು ವಿಶ್ವದೆಲ್ಲೆಡೆ ಜನಪ್ರಯವಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಪಂಚೇಂದ್ರಿಯಗಳ ನಿಯಂತ್ರಣದೊಂದಿಗೆ ಸಕಾಲದಲ್ಲಿ ಹಿತ-ಮಿತ ಆಹಾರ ಸೇವನೆಯಿಂದ ಆರೋಗ್ಯಭಾಗ್ಯ ಹೊಂದಬಹುದು ಎಂದರು. ಹೇಮಾವತಿ ವೀ. ಹೆಗ್ಗಡೆ, ಡಿ. ಹರ್ಷೇಂದ್ರಕುಮಾರ್ ಮತ್ತುಸುಪ್ರಿಯಾ ಹರ್ಷೇಂದ್ರಕುಮಾರ್ ಉಪಸ್ಥಿತರಿದ್ದರು.
ಎಸ್.ಡಿ.ಎಂ.ಪ್ರಕೃತಿ ಚಿಕಿತ್ಸಾ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಶಾಂತ ಶೆಟ್ಟಿ ಸ್ವಾಗತಿಸಿದರು.ಜಲಚಿಕಿತ್ಸಾ ವಿಭಾಗದ ಡೀನ್ ಡಾ. ಸುಜಾತ ಧನ್ಯವಾದವಿತ್ತರು .ಡಾ. ಜೋಸ್ನಾ ಕಾರ್ಯಕ್ರಮ ನಿರ್ವಹಿಸಿದರು.
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…