ಆಧ್ಯಾತ್ಮಕ್ಕೂ, ಭಜನೆಗೂ ಅವಿನಾಭಾವ ಸಂಬಂಧವಿದ್ದು, ರಾಗ-ತಾಳ ಲಯ ಬದ್ಧವಾಗಿ ಸುಶ್ರಾವ್ಯವಾಗಿ ಭಜನೆ ಹಾಡಿದಾಗ ಮನಸ್ಸಿಗೆ ಸಂತೋಷ, ಶಾಂತಿ ಮತ್ತು ಸಮಾಧಾನ ಸಿಗುತ್ತದೆ ಎಂದು ಖ್ಯಾತ ಚಲನಚಿತ್ರ ಹಿನ್ನೆಲೆ ಗಾಯಕಿ ಡಾ. ಶಮಿತ ಮಲ್ನಾಡ್ ಹೇಳಿದರು.
ಅವರು ಶುಕ್ರವಾರ ಧರ್ಮಸ್ಥಳದಲ್ಲಿ 24ನೆ ವರ್ಷದ ಭಜನಾ ತರಬೇತಿ ಕಮ್ಮಟವನ್ನು ಉದ್ಘಾಟಿಸಿ ಮಾತನಾಡಿದರು.ಡಾ. ಹೇಮಾವತಿ ವೀ. ಹೆಗ್ಗಡೆಯವರು ಮಾತನಾಡಿ, ಭಜನೆ ಮೂಲಕ ಆತ್ಮ ಮತ್ತು ಪರಮಾತ್ಮನ ಮಧ್ಯೆ ಸಂವಾದ ಸಾಧ್ಯವಾಗುತ್ತದೆ. ಉತ್ತಮಚಾರಿತ್ರ್ಯದೊಂದಿಗೆಆದರ್ಶ ವ್ಯಕ್ತಿತ್ವವನ್ನು ರೂಪಿಸಿಕೊಂಡು ಎಲ್ಲರೂ ಸಮಾಜದ ಸಭ್ಯ, ಸುಸಂಸ್ಕøತ ನಾಗರಿಕರಾಗಬೇಕುಎಂದುಅವರು ಸಲಹೆ ನೀಡಿದರು.

Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel

